ದೇವರ ಅನುಸಂಧಾನಕ್ಕೆ ಭಕ್ತಿ ಮಾರ್ಗ ಶ್ರೇಷ್ಠ

ಕಲಾವಿದ ಹರೀಶ್‌ ಡೋಂಗ್ರೆ ಅಭಿಮತಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಕೇಂದ್ರದಿಂದ ಬನದಲ್ಲಿ ದಾಸ ಗಾಯನ ಕಾರ್ಯಕ್ರಮ

Team Udayavani, Mar 15, 2020, 4:55 PM IST

15-March-28

ಶೃಂಗೇರಿ: ದೇವರ ಜೊತೆಗೆ ಅನುಸಂಧಾನಕ್ಕೆ ಭಕ್ತಿ ಮಾರ್ಗ ಅತ್ಯಂತ ಉನ್ನತವಾದ ದಾರಿ. ಈ ಮಾರ್ಗದ ಹೆಗ್ಗಳಿಕೆ ದಾಸವರೇಣ್ಯರು ರಚಿಸಿದ ಹಾಡುಗಳಲ್ಲಿವೆ ಎಂದು ಕಲಾವಿದ, ಅರ್ಚಕ ಹರೀಶ್‌ ಡೋಂಗ್ರೆ ತಿಳಿಸಿದ್ದಾರೆ.

ಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಕೇಂದ್ರ ಟ್ರಸ್ಟ್‌ ನೆಮ್ಮಾರು, ಹೊಸೂರು ಗ್ರಾಮದ ಅಬ್ಬಿಗುಂಡಿಯಲ್ಲಿ ಏರ್ಪಡಿಸಿದ್ದ ಬನದಲ್ಲಿ ದಾಸ ಗಾಯನ ಕಾರ್ಯಕ್ರಮವನ್ನು ತಾಳ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ದಾಸ ಪಂಥದ ಗೀತ ರಚನೆಗಳಲ್ಲಿ ಭಕ್ತಿಯ ಪರಾಕಾಷ್ಠೆ ಮಾತ್ರವಲ್ಲದೇ, ಬದುಕಿನ ಲೌಕಿಕತೆಗೂ ಕನ್ನಡಿಯಾಗಿದೆ. ಹೀಗೆ ಆಧ್ಯಾತ್ಮ ಮತ್ತು ಲೌಕಿಕತೆಯ ಸಮ್ಮಿಲನದ ಅಪರೂಪದ ಸಾಹಿತ್ಯ ಪ್ರಕಾರವಾಗಿದೆ. ಇದನ್ನು ಮಾಧುರ್ಯ ಪೂರ್ಣವಾಗಿ ಹಾಡಿದಾಗ ಭಕ್ತಿಯ ಮತ್ತು ಸಂಗೀತದ ವಾತಾವರಣ ಯುಕ್ತವಾಗಿ ಒಡಮೂಡಿ ಹೊಸದೊಂದು ಲೋಕವನ್ನು ಅನಾವರಣಗೊಳಿಸುತ್ತದೆ. ಅತ್ಯಂತ ದುರ್ಗಮ ತಾಣವಾದ ಅಬ್ಬಿಗುಂಡಿಯಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಸಂಸ್ಥೆ ಮೇಲ್ಪಂಕ್ತಿಯಾಗಿದೆ. ಈ ಸಂಸ್ಥೆಯು ಬಹುತೇಕ ಕಾರ್ಯಕ್ರಮಗಳನ್ನು ಸಂಪೂರ್ಣ ಹಳ್ಳಿ ಇಲ್ಲವೇ ಕಾಡಿನ ಪ್ರದೇಶದಲ್ಲಿ ನಡೆಸುತ್ತಾ ಕಲಾ ಸಂಘಟನೆಗೆ ಹೊಸ ಭಾಷ್ಯ ಬರೆಯುತ್ತಿದೆ. ಸಂಸ್ಥೆಯ ಈ ರೀತಿಯ ಯಶಸ್ವೀ ಪರಿಕಲ್ಪನೆಯ ಹಿಂದೆ ನಾಡು ಕಂಡ ಶ್ರೇಷ್ಠ ಸಾಂಸ್ಕೃತಿಕ ಸಂಘಟಕ ರಮೇಶ್‌ ಬೇಗಾರ್‌ ಅವರ ಕನಸಿರುವುದು ಸ್ಪಷ್ಟವಾಗಿದೆ ಎಂದರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಮೇಶ್‌ ಬೇಗಾರ್‌ ಮಾತನಾಡಿ, ಕಲೆ ಕಟ್ಟ ಕಡೆಯ ಗ್ರಾಮವನ್ನು ಮತ್ತು ಗ್ರಾಮಸ್ಥರನ್ನು ತಲುಪಬೇಕು ಎಂಬುದನ್ನು ಸಂಸ್ಥೆಯ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ ಸಂಸ್ಥೆ ನಕ್ಸಲ್‌ ಬಾತ್‌ ಸ್ಥಳ ಸೇರಿದಂತೆ ಬೇರೆ ಬೇರೆ ಪ್ರದೇಶದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಸಮಾಜದ ಎಲ್ಲಾ ಸ್ತರದ ಜನರನ್ನು ತಲುಪುತ್ತಿದೆ. ಕಾಲ್ನಡಿಗೆಯ ಸಂಚಾರ ಮಾತ್ರ ಇರುವ ದುರ್ಗಮ ತಾಣಗಳಲ್ಲಿಯೂ ಕಾರ್ಯಕ್ರಮ ಏರ್ಪಡಿಸಿದ ಹೆಗ್ಗಳಿಕೆ ನಮ್ಮ ಸಂಸ್ಥೆಗಿದೆ ಎಂದರು. ಸುಬ್ರಹ್ಮಣ್ಯ ಆಚಾರ್ಯ ನಿರೂಪಿಸಿ, ಕಕ್ಕರಣೆ ಮಹಾಬಲ ವಂದಿಸಿದರು.

ಜನಮನ ಗೆದ್ದ ದಾಸವಾಣಿ: ಉಡುಪಿಯ ನಾರಾಯಣ ಸರಳಾಯ ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮ ಸೇರಿದ್ದ ಅಪಾರ ಸಂಖ್ಯೆಯ ಗ್ರಾಮಸ್ಥರನ್ನು ರಂಜಿಸಿತು. ಸರಳಾಯರು ವಂದಿಪೆ ನಿನಗೆ ಗಣನಾಥ ಎಂಬ ನಾಟರಾಗದ ಕೃತಿಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು. ಮೋಹನ ರಾಗದಲ್ಲಿ ಪ್ರಸ್ತುತಪಡಿಸಿದ ಪಿಳ್ಳಂಗೋವಿ ಹಾಡು, ಕಾಪಿ ರಾಗದ ಆಡಿಸಿದಳ್‌ ಯಶೋಧೆ, ಮಧ್ಯಮಾವತಿ ರಾಗದ ಲಕ್ಷ್ಮೀ ಬಾರಮ್ಮ ಕೃತಿಗಳು ಪ್ರೇಕ್ಷಕರ ಮನ ಸೂರೆಗೊಂಡವು.

ಪಕ್ಕವಾದ್ಯದಲ್ಲಿ ಸುಹಾಸ್‌ ಹೆಬ್ಟಾರ್‌, ಪುತ್ತೂರು ಇವರು ತಬಲಾದಲ್ಲಿ, ಕೀ ಬೋರ್ಡ್‌ ನಲ್ಲಿ ಎಂ.ಕೆ. ಶ್ರೀನಿ  ಮತ್ತು ವಿಶೇಷ ಉಪಕರಣದಲ್ಲಿ ಸುಮಂತ್‌ ಹೆಬ್ಟಾರ್‌ ಸಹಕಾರ ನೀಡಿದರು.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.