ಕೊರೋನಾ ವೈರಸ್ ತಡೆಗೆ ಖಾಸಗಿ ವೈದ್ಯರು ಸಹಕರಿಸಿರಿ: ಜಿಲ್ಲಾಧಿಕಾರಿ ಶರತ್.ಬಿ ಮನವಿ


Team Udayavani, Mar 15, 2020, 6:04 PM IST

ಕೊರೋನಾ ವೈರಸ್ ತಡೆಗೆ ಖಾಸಗಿ ವೈದ್ಯರು ಸಹಕರಿಸಿರಿ

ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯರು ಜಿಲ್ಲಾಡಳಿತ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಅವರು ಸಹಕಾರ ಕೋರಿದ್ದಾರೆ.

ಕಲಬುರಗಿ ನಗರದ ಪಂಡಿತ್ ರಂಗಮಂದಿರದಲ್ಲಿ ಭಾರತೀಯ ವೈದ್ಯಕೀಯ ಮಂಡಳಿ (ಐಎಂಎ) ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಖಾಸಗಿ ವೈದ್ಯರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಸ್ಕ್ ಧರಿಸುವುದು ಸೇರಿದಂತೆ ಮುಂಜಾಗ್ರತೆ ವಹಿಸಿದರೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ವೈದ್ಯರಲ್ಲಿ ಕೊರೋನಾ ವೈರಸ್ ಬಗ್ಗೆ ಮೂಡಿದ್ದ ಆತಂಕವನ್ನು ಅವರು ಈ ಸಂದರ್ಭದಲ್ಲಿ ಅವರು ನಿವಾರಿಸಿದರು.

ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುವ ಯಾವುದೇ ರೋಗಿಯನ್ನು ಉಪಚರಿಸಬೇಕು,ಒಂದು ವೇಳೆ ಕೆಮ್ಮು,ಜ್ವರ,ಶೀತ, ಉಸಿರಾಟದ ಸಮಸ್ಯೆ ಇದ್ದು,ಶಂಕಿತ ಕರೋನಾ ವೈರಸ್ ಲಕ್ಷಣಗಳಿದ್ದಲ್ಲಿ ಮಾತ್ರ ಸಹಾಯವಾಣಿ -1047ಕ್ಕೆ ಕರೆ ಮಾಡಬೇಕು.ಆರೋಗ್ಯ ಇಲಾಖೆಯ ಸಿಬ್ಬಂದಿ ಬಂದು ರೋಗಿಗಳನ್ನು ಕರೆದೊಯ್ಯಲಿದ್ದಾರೆ. ಬಳಿಕ ಅವರಿಗೆ ಕಲಬುರಗಿ ನಗರದ ಜಿಮ್ಸ್ ಮತ್ತು ಇಎಸ್ಐಸಿಯ ಕ್ವಾರಾಂಟೀನ್ ಹಾಗೂ ಐಸೋಲೇಷನ್ ವಾರ್ಡಗಳಲ್ಲಿ ದಾಖಲಿಸಿ, ನಿಗಾವಹಿಸಲಾಗುವುದು ಎಂದು ಡಿಸಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವಿಭಾಗೀಯ ಸರ್ವೇಕ್ಷಣಾಧಿಕಾರಿ (ಎಸ್ಎಮ್ಓ) ಅನಿಲ್ ತಾಳಿಕೋಟೆ ಅವರು ಕೊರೋನಾ ವೈರಸ್ ಹೇಗೆ ಹರಡುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿದರು.

ವೈರಸ್ ಹರಡುವುದನ್ನು ತಡೆಯಲು ಜಿಲ್ಲಾ ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳು,ಐಸೋಲೇಷನ್ ಹಾಗೂ ಕ್ವಾರಾಂಟೀನ್ ವಾರ್ಡ್ ಗಳ ಸ್ಥಾಪನೆ, ಅರಿವು ಕಾರ್ಯಕ್ರಮಗಳು ಮುಂತಾದವುಗಳ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಕಲಬುರಗಿ ಸಂಸದ ಉಮೇಶ್ ಜಾಧವ್, ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಶ್ರೀಮತಿ ಕನೀಜ್ ಫಾತಿಮಾ, ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ,ಚಿಂಚೋಳಿ ಶಾಸಕ ಅವಿನಾಶ್ ಜಾಧವ್, ಭಾರತೀಯ ವೈದ್ಯಕೀಯ ಮಂಡಳಿಯ ಜಿಲ್ಲಾಧ್ಯಕ್ಷ ಡಾ. ಅಮೋಲ್ ಪತಂಗೆ, ಆರೋಗ್ಯ ಇಲಾಖೆಯ ಕೋವಿಡ್-19 ನೋಡಲ್ ಅಧಿಕಾರಿ ಡಾ.ಸಜ್ಜನ ಶೆಟ್ಟಿ, ಜಂಟಿ ನಿರ್ದೇಶಕ ಶಿವಾನಂದ.ಬಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಬ್ಬಾರ್ ವಿವಿಧ ಖಾಸಗಿ ಆಸ್ಪತ್ರೆಯ ಹಿರಿಯ ವೈದ್ಯರು ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.