ಮೂವರಿಗೆ ಕೊರೊನಾ ಶಂಕೆ
Team Udayavani, Mar 16, 2020, 3:04 AM IST
ವಿಜಯಪುರ: ಮೆಕ್ಕಾ ಪ್ರವಾಸ ಮುಗಿಸಿ ವಿಜಯಪುರ ಜಿಲ್ಲೆಗೆ ಬಂದಿರುವ 25 ವರ್ಷದ ಯುವಕನಲ್ಲಿ ಕೊರೊನಾ ಲಕ್ಷಣ ಕಂಡು ಬಂದಿವೆ. ಹೀಗಾಗಿ ಆ ಯುವಕನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಶಂಕಿತ ರೋಗಿ ಮಾ.5ರಂದು ಮೆಕ್ಕಾದಿಂದ ವಿಜಯಪುರಕ್ಕೆ ಮರಳಿದ್ದ. ಆತನಲ್ಲಿ ಕೆಮ್ಮು-ನೆಗಡಿಯಂಥ ರೋಗ ಲಕ್ಷಣಗಳಿದ್ದರೂ ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಿರಲಿಲ್ಲ.
ಇದೀಗ ಯುವಕನ ಪೋಷಕರು ಧೈರ್ಯ ಹೇಳಿ ವೈದ್ಯಕೀಯ ಪರೀಕ್ಷೆಗೆ ಒಪ್ಪಿಸಿದ್ದಾರೆ. ಪರೀಕ್ಷೆ ಬಳಿಕ ಯುವಕನನ್ನು ವಿಜಯಪುರ ಜಿಲ್ಲಾಸ್ಪತ್ರೆ ಐಸೋಲೇಷನ್ ವಿಶೇಷ ಘಟಕದಲ್ಲಿ ಇರಿಸಿ ವೈದ್ಯಕೀಯ ನಿಗಾ ಇರಿಸಲಾಗಿದೆ.ಶಂಕಿತನ ಗಂಟಲು ದ್ರವ ಮಾದರಿಯನ್ನು ತಪಾಸಣೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾವೇರಿಯಲ್ಲೂ ಇಬ್ಬರಿಗೆ ಕೊರೊನಾ ಶಂಕೆ: ಹಾನಗಲ್ಲ ಪಟ್ಟಣದ ವೃದ್ಧ ಹಾಗೂ ಆತನ 3 ವರ್ಷದ ಮೊಮ್ಮಗನಲ್ಲಿ ಶಂಕಿತ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿದ್ದು, ಇಬ್ಬರನ್ನೂ ಜಿಲ್ಲಾಸ್ಪತ್ರೆ ಪ್ರತ್ಯೇಕ ವಾರ್ಡ್ನಲ್ಲಿರಿಸಲಾಗಿದೆ. ಆರೋಗ್ಯಾಧಿಕಾರಿಗಳು ಈ ಇಬ್ಬರ ರಕ್ತ ಮತ್ತು ಕಫ ಮಾದರಿಯನ್ನು ಭಾನುವಾರ ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಶಂಕಿತ ಕೊರೊನಾ ಸೋಂಕು ಲಕ್ಷಣ ಹೊಂದಿರುವ ಅಜ್ಜ ಹಾಗೂ ಮೊಮ್ಮಗ ಹಾನಗಲ್ಲ ಪಟ್ಟಣದವರಾಗಿದ್ದಾರೆ. 60 ವರ್ಷದ ಈ ವೃದ್ಧ ಹಜ್ ಯಾತ್ರೆ ಮುಗಿಸಿ ಮಾ.3ರಂದು ಹುಬ್ಬಳ್ಳಿಗೆ ಬಂದಿದ್ದರು. ಅಲ್ಲಿ ಕೆಲ ದಿನ ಸಂಬಂಧಿ ಕರ ಮನೆಯಲ್ಲಿ ವಾಸವಾಗಿ ಮಾ.12ರಂದು ಹಾನಗಲ್ಲಿನ ಮನೆಗೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?