ಹಣ ಕೊಡದಿದ್ದಕ್ಕೆ ಬಾಡಿಗೆ ತಾಯಿಯ ಗರ್ಭಪಾತ!


Team Udayavani, Mar 16, 2020, 3:08 AM IST

hana-koda

ಸಾಂದರ್ಭಿಕ ಚಿತ್ರ

ಬೆಂಗಳೂರು: ಕಾನೂನ್ಮಾತಕವಾಗಿ ಬಾಡಿಗೆ ತಾಯ್ತನಕ್ಕಾಗಿ ಗರ್ಭ ಧರಿಸಿದ್ದ ಮಹಿಳೆ ಬಳಿ ಹಣಕ್ಕೆ ಬೇಡಿಕೆ ಇಟ್ಟಿದಲ್ಲದೆ, ಹಣ ಕೊಡಲು ನಿರಾಕರಿಸಿದಾಗ ಆಕೆ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಗರ್ಭ ಪಾತ ಮಾಡಿಸಿರುವ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ.

ಮೈಕೋ ಲೇಔಟ್‌ ನಿವಾಸಿ 27 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬೊಮ್ಮನಹಳ್ಳಿಯ ಸ್ವಾತಿ ಮಹಿಳಾ ಸಂಘಟನೆಯ ಪೂಜಾ, ಪ್ರೇಮಾ, ಆಶಾ, ರೀಟಾ, ಪ್ರಮೀಳಾ ಮತ್ತು ಮಂಜುನಾಥ್‌ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಂದ ಗರ್ಭಪಾತಕ್ಕೊಳದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ ದ್ದಾರೆ ಎಂದು ಪೊಲೀಸರು ಹೇಳಿದರು.

ಬಡ ಕುಟುಂಬದ ಸಂತ್ರಸ್ತೆ ಸಂಸಾರದ ನಿರ್ವಹಣೆಗಾಗಿ ಬಾಡಿಗೆ ತಾಯ್ತನಕ್ಕೆ ಒಪ್ಪಿಕೊಂಡಿದ್ದು, ವಿಶ್ವಾಸ್‌ ಫರ್ಟಿಲಿಟಿ ಸೆಂಟರ್‌ ಮೂಲಕ ಬಾಡಿಗೆ ತಾಯಿಯಾಗಿದ್ದರು. ಕಾನೂನ್ಮಾತಕವಾ ಗಿಯೂ ಎಲ್ಲ ಪ್ರಕ್ರಿಯೆ ನಡೆಸಲಾಗಿದೆ. ಮದುರೀಮನಾಗ್‌ ಮತ್ತು ದೀಪಾಂ ಜನಾಗ್‌ ದಂಪತಿಯ ಪ್ರನಾಳ ಶಿಶು ವಿಧಾನದಲ್ಲಿ ಗರ್ಭಧರಿಸಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು.

ವಿಶ್ವಾಸ್‌ ಫರ್ಟಿಲಿಟಿ ಸೆಂಟರ್‌ನ ಬಾಡಿಗೆ ತಾಯಂದಿರನ್ನು ನೋಡಿಕೊಳ್ಳುವ ಸಾಯಿ ಆರ್ಟ್‌ ಬ್ಯಾಂಕ್‌ ಸಂಸ್ಥೆಯ ಮಾಲೀಕರಾದ ಗೀತಾ ಅವರ ಪಿಜಿ (ಪೇಯಿಂಗ್‌ ಗೆಸ್ಟ್‌)ಯಲ್ಲಿ ಸಂತ್ರಸ್ತೆ ಯನ್ನು ಪೋಷಣೆ ಮಾಡಲಾಗುತ್ತಿತ್ತು. ಈ ಮಧ್ಯೆ ಆರೋಪಿಗಳು ಪಿಜಿಗೆ ನುಗ್ಗಿ ತಾವುಗಳು ಬೊಮ್ಮನಹಳ್ಳಿಯ “ಸ್ವಾತಿ ಮಹಿಳಾ ಸಂಘಟನೆ’ ಸದಸ್ಯರು ಎಂದು ಹೇಳಿ, ಬಾಡಿಗೆ ತಾಯ್ತನಕ್ಕೆ ಪಡೆಯುತ್ತಿರುವ ಹಣದಲ್ಲಿ ತಮಗೂ ಪಾಲು ಕೊಡುವಂತೆ ಕೇಳಿದ್ದಾರೆ.

ಅದಕ್ಕೆ ಗರ್ಭಿಣಿ ಹಾಗೂ ಪಿಜಿ ಮಾಲೀಕರಾದ ಗೀತಾ ನಿರಾಕರಿಸಿದ್ದಾರೆ. ಅದಕ್ಕೆ ಆರೋಪಿಗಳು, ಒಂದು ವೇಳೆ ಹಣ ಕೊಡದಿದ್ದರೆ ಗರ್ಭಿಣಿಯರಿಗೆ ಹೊಡೆದು ಗರ್ಭಪಾತ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆಗ ಸಂತ್ರಸ್ತೆ, ಹೊಟ್ಟೆಪಾಡಿಗಾಗಿ ಬಾಡಿಗೆ ತಾಯಿ ಆಗಿದ್ದೇನೆ ಬಿಟ್ಟು ಬಿಡಿ ಎಂದು ಗೋಗರೆದಿದ್ದಾರೆ. ಆಗ ಪ್ರೇಮಾ ಎಂಬ ಆರೋಪಿ, “ನೀನು ಹಾಗೂ ನಿನ್ನ ಮಗುವನ್ನು ಉಳಿಸಿಕೊಳ್ಳಬೇಕಾದರೆ ನಮಗೆ ಹಣ ಕೊಡಲೇಬೇಕು’ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಕೂದಲಿಡಿದು ಎಳೆದಾಡಿ, ಮನಸೋಯಿಚ್ಛೆ ಹಲ್ಲೆ: ಮಾ.11ರಂದು ರಾತ್ರಿ 10 ಗಂಟೆಗೆ ಮತ್ತೂಮ್ಮೆ ಪಿಜಿಗೆ ಬಂದ ಆರೋಪಿಗಳು, “ಈ ಮೊದಲು ಹೇಳಿದಂತೆ ಮಾಮೂಲಿ ಕೊಡಬೇ ಕೆಂದು ಹೇಳಲಾಗಿತ್ತು. ಇಷ್ಟು ದಿನಗಳಾದರೂ ಏಕೆ ನೀಡಿಲ್ಲ ಎಂದು ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾರೆ. ಬಳಿಕ ಆಕೆಯ ಕೂದಲನ್ನು ಹಿಡಿದು ಎಳೆದಾಡಿ ಮನಸೋ ಇಚ್ಛೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಆಕೆಯ ಮೇಲಿನ ಹಲ್ಲೆ ತಡೆಯಲು ಮುಂದಾದ ಪಿಜಿ ಮುಖ್ಯಸ್ಥೆ ಗೀತಾ ಹಾಗೂ ಇತರೆ ಯುವತಿಯರಿಗೂ ಥಳಿಸಿದ್ದಾರೆ. ಈ ವೇಳೆ ಸಂತ್ರಸ್ತೆ, ತಾನೂ ಗರ್ಭಿಣಿ ಯಾಗಿದ್ದೇನೆ ಹೊಡೆಯಬೇಡಿ ಎಂದು ಅಂಗಲಾಚಿದರೂ ದುಷ್ಕರ್ಮಿಗಳು, ಆಕೆಯನ್ನು ನೆಲಕ್ಕೆ ಬೀಳಿಸಿ ಕಾಲಿನಲ್ಲಿ ಒದ್ದಿದ್ದಾರೆ. ಈ ವೇಳೆ ಸಂತ್ರಸ್ತೆಗೆ ತೀವ್ರ ರಕ್ತಸ್ರಾವ ವಾಗಿದ್ದು, ಅಸ್ವಸ್ಥಗೊಂಡು ಕುಸಿದು ಬಿದ್ದಿ ದ್ದಾಳೆ. ಆದರೂ ಬಿಡದ ಆರೋಪಿ ಮಹಿಳೆಯರು ಗರ್ಭಪಾತ ಮಾಡಿಯೇ ಹೋಗುತ್ತೇವೆ ಎಂದು ಕಾಲಿನಿಂದ ಹೊಟ್ಟೆಗೆ ಒದ್ದಿದ್ದಾರೆ.

ಪರಿಣಾಮ ಇನ್ನಷ್ಟು ರಕ್ತಸ್ರಾವವಾಗಿ ಸಂತ್ರಸ್ತೆ ಅರೆಪ್ರಜ್ಞಾ ಸ್ಥಿತಿ ತಲುಪಿಸಿದ್ದಾರೆ. ಅನಂ ತರ ಆರೋಪಿಗಳು ಹೋಗುತ್ತಿದ್ದಂತೆ ಪಿಜಿಯಲ್ಲಿದ್ದ ಮಹಿಳೆಯರು ಸಂತ್ರಸ್ತೆ ಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ಗರ್ಭಪಾತವಾಗಿದೆ ಎಂದು ದೃಢಪಡಿಸಿದ್ದಾರೆ. ಹೀಗಾಗಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ದೂರು ನೀಡಿ ದ್ದಾರೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಸ್ವಾತಿ ಮಹಿಳಾ ಸಂಘಟನೆಗೆ ಸೇರಿದವರಾಗಿದ್ದು, ಇದು ವರೆಗೂ ಬಂಧಿಸಿಲ್ಲ. ಸಂತ್ರಸ್ತೆ ಚೇತರಿಸಿಕೊಳ್ಳುತ್ತಿದ್ದಾರೆ.
-ಶ್ರೀನಾಥ್‌ ಮಹದೇವ್‌ ಜೋಶಿ, ಡಿಸಿಪಿ ಆಗ್ನೇಯ ವಿಭಾಗ

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.