ಬೆಂಗರೆಯಲ್ಲಿ ಮಲ್ಪೆ ಮಾದರಿಯ “ಸೀ ವಾಕ್‌’ ಅನುಷ್ಠಾನಕ್ಕೆ ಸರಕಾರ ಉತ್ಸುಕ

ಮಂಗಳೂರು ಬೀಚ್‌ ಪ್ರವಾಸೋದ್ಯಮದಲ್ಲಿ ಹೊಸ ನಿರೀಕ್ಷೆ

Team Udayavani, Mar 16, 2020, 5:02 AM IST

ಬೆಂಗರೆಯಲ್ಲಿ ಮಲ್ಪೆ ಮಾದರಿಯ “ಸೀ ವಾಕ್‌’ ಅನುಷ್ಠಾನಕ್ಕೆ ಸರಕಾರ ಉತ್ಸುಕ

ಸಾಂದರ್ಭಿಕ ಚಿತ್ರ.

ಮಹಾನಗರ: ಕೇರಳ ಹಾಗೂ ಉಡುಪಿಯ ಮಲ್ಪೆಯಲ್ಲಿ ಪ್ರವಾಸೋದ್ಯಮಕ್ಕೆ ಹೊಸ ಆಕರ್ಷಣೆ ಸೃಷ್ಟಿಸಿರುವ “ಸೀ ವಾಕ್‌’ ಪರಿಕಲ್ಪನೆಯನ್ನು ಮಂಗಳೂರಿನ ಬೆಂಗರೆ ಪರಿಸರದ ಬ್ರೇಕ್‌ ವಾಟರ್‌ನಲ್ಲಿ ಕೈಗೊಳ್ಳುವ ಬಗ್ಗೆ ರಾಜ್ಯಸರಕಾರ ಇಚ್ಛಾಶಕ್ತಿ ತೋರಿದೆ.
ಮಂಗಳೂರು ಪರಿಸರದ ಬೀಚ್‌ ಅಭಿವೃದ್ಧಿ ನಿಟ್ಟಿನಲ್ಲಿ ಯಾವುದೇ ಹೊಸ ಯೋಜನೆಯನ್ನು ಆರಂಭ ಮಾಡುತ್ತಿಲ್ಲ ಎಂಬ ಪ್ರವಾಸಿಗರ ಆಕ್ಷೇಪದ ಮಧ್ಯೆಯೇ ಇದೀಗ ಸೀ ವಾಕ್‌ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರಕಾರ ಉತ್ಸುಕತೆ ತೋರಿದೆ. ಇದು ಸಾಧ್ಯವಾದರೆ, ಇಲ್ಲಿನ ಬೀಚ್‌ ಪ್ರವಾಸೋದ್ಯಮದಲ್ಲಿ ಹೊಸ ನಿರೀಕ್ಷೆ ಮೂಡಿದಂತಾಗುತ್ತದೆ.

ಕೇರಳದಲ್ಲಿ ಯಶಸ್ವಿ
ಕೇರಳದ ಹಲವು ಕಡಲ ಕಿನಾರೆಗಳಲ್ಲಿ ಈಗಾಗಲೇ ಸೀ ವಾಕ್‌ ಪರಿಕಲ್ಪನೆ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಪ್ರವಾಸೋದ್ಯಮ ಕೇಂದ್ರಗಳಾಗಿ ಬೆಳೆದಿದೆ. ರಾಜ್ಯದಲ್ಲಿ ಮೊದಲ ಸೀ ವಾಕ್‌ ಮಲ್ಪೆಯಲ್ಲಿ ಎರಡು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, ಇಲ್ಲೂ ಪ್ರವಾಸಿಗರು ಸಾಕಷ್ಟು ಸಂಖ್ಯೆಯಲ್ಲಿ ಭೇಟಿ ನೀಡಿ ಸಮುದ್ರದ ಸೌಂದರ್ಯ ಆಸ್ವಾದಿಸುತ್ತಿದ್ದಾರೆ. ಮಲ್ಪೆ ಬೋಟ್‌ ಜೆಟ್ಟಿಯ ಬಳಿ ಸಮುದ್ರದಲ್ಲಿ ಹಿಂದೆ ಇದ್ದ ಬ್ರೇಕ್‌ ವಾಟರ್‌ ಕಲ್ಲಿನ ಹಾದಿಯ ಮೇಲೆ ರಾಜ್ಯದ ಮೊದಲ ಸೀ ವಾಕ್‌ ವೇ ನಿರ್ಮಾಣಗೊಂಡಿದೆ. ಸಮುದ್ರ ಮೇಲ್ಭಾಗದಲ್ಲಿ 450 ಮೀ. ಉದ್ದ ಹಾಗೂ 2.4 ಮೀ. ಅಗಲವಿದೆ. ಇಲ್ಲಿ ಪ್ರವಾಸಿಗರು ನಡೆದಾಡಲು ಅನುಕೂಲವಾಗುವಂತೆ ಇಂಟರ್‌ಲಾಕ್‌ ಅಳವಡಿಸಲಾಗಿದೆ. ಸಮುದ್ರ ಸೌಂದರ್ಯವನ್ನು ಕುಳಿತು ವೀಕ್ಷಿಸಲು ಕಲ್ಲಿನ ಬೆಂಚ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ವಾಕ್‌ವೆà ಅಂತರದಲ್ಲಿ ಸುಂದರ ಕಲಾಕೃತಿ, ಅಲಂಕಾರಿಕಾ ದೀಪಗಳನ್ನು ಅಳವಡಿಸಲಾಗಿದೆ.

ಸಮುದ್ರದ ಸೊಬಗು
ಸವಿಯುವ ಅವಕಾಶ
ಸಾಮಾನ್ಯವಾಗಿ ಮಳೆಗಾಲದ ಅವಧಿಯಲ್ಲಿ ಸಮುದ್ರಕ್ಕೆ ಇಳಿಯಲು ಅವಕಾಶ ಇರುವುದಿಲ್ಲ. ಸಮುದ್ರ ಹೆಚ್ಚು ರಫ್‌ ಆಗಿರುವುದರ ಜತೆಯಲ್ಲಿ ಹೆಚ್ಚು ಅಪಾಯಕಾರಿಯಾಗಿರುತ್ತದೆ. ಸೀ ವಾಕ್‌ ನಿರ್ಮಾಣವಾದರೆ ಮಳೆಗಾಲದ ಸಂದರ್ಭದಲ್ಲೂ ಸಮುದ್ರದ ಸೊಬಗನ್ನು ಸವಿಯುವ ಅವಕಾಶ ಲಭ್ಯವಾಗಲಿದೆ.

ಏನಿದು ಸೀ ವಾಕ್‌?
ಸೀ ವಾಕ್‌ ಅಂದರೆ ಸಮುದ್ರದ ಮೇಲೆ ನಡೆದಾಡುವುದು ಎಂದರ್ಥ. ಈಗಾಗಲೇ ಇರುವ ಬ್ರೇಕ್‌ವಾಟರ್‌ನ ಮೇಲೆ ಪ್ರವಾಸಿಗರಿಗೆ ನಡೆದಾಡುವ ಪಾಥ್‌ ನಿರ್ಮಿಸಲಾಗುವುದು. ಸಮುದ್ರದಲ್ಲಿ ಸುಮಾರು ಒಂದು ಕಿ.ಮೀ. ದೂರದವರೆಗೆ ನಡೆದಾಡುವ ಅನುಭವವನ್ನು ಇದು ನೀಡಲಿದೆ. ಸಮುದ್ರದ ಅಲೆಗಳಿಂದ ಏಳುವ ರಭಸದ ಗಾಳಿಗೆ ಮೈಯೊಡ್ಡುವ ಅವಕಾಶ, ಯುವಜನರ ಕ್ರೇಜಿಗಾಗಿ ಸೆಲ್ಫಿ ಪಾಯಿಂಟ್‌, ಸುಂದರ ದೀಪಸ್ತಂಭಗಳು, ನಡೆದಾಡಲು ಅನುಕೂಲ ಆಗುವ ವ್ಯವಸ್ಥೆ ಇದರಲ್ಲಿ ಒಳಗೊಳ್ಳಲಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವುದು ಈ ಯೋಜನೆಯ ಉದ್ದೇಶ.

ವರದಿಗೆ ಸೂಚನೆ
ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಮಂಗಳೂರಿನ ಸಮುದ್ರದಲ್ಲೂ ಸೀ ವಾಕ್‌ ನಿರ್ಮಿಸುವ ಸಾಧ್ಯತೆಗಳ ಬಗ್ಗೆ ವರದಿ ನೀಡುವಂತೆ ಬಂದರು, ಒಳನಾಡು ಜಲಸಾರಿಗೆ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯು ಈ ಬಗ್ಗೆ ವಿಶೇಷ ಆದ್ಯತೆ ನೀಡಿ ಕಾರ್ಯ ನಡೆಸಲಿದೆ. ಸೀ ವಾಕ್‌ನಿಂದ ಕಡಲ ಕಿನಾರೆಗೆ ಇನ್ನಷ್ಟು ಪ್ರವಾಸಿಗರು ಬರುವ ನಿರೀಕ್ಷೆಯಿದೆ.
 -ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.