ಶ್ರೀಶೈಲ ಪಾದಯಾತ್ರಿಕರಿಗೆ ಭಕ್ತರ ಭರಪೂರ ಸೇವೆ


Team Udayavani, Mar 16, 2020, 7:13 PM IST

16-March-15

ದೇವದುರ್ಗ: ಬಡವರಿಗೆ ಆರ್ಥಿಕ ಶ್ರೀಮಂತಿಕೆಗೆ ಬರವಿರಬಹುದು, ಆದರೆ ಭಕ್ತಿಗೆ ಬರವಿಲ್ಲ ಎನ್ನುವ ಮಾತಿಗೆ ಅನ್ವರ್ಥ ಎನ್ನುವಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶ್ರೀಶೈಲ ಪಾದಯಾತ್ರಿಕರ ಸೇವೆಗಾಗಿ ಗ್ರಾಮಸ್ಥರು, ಭಕ್ತರು ಟೊಂಕಕಟ್ಟಿ ನಿಂತಿದ್ದಾರೆ.

ಯುಗಾದಿ ನಿಮಿತ್ತ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನ ಶ್ರೀಶೈಲಕ್ಕೆ ಪಾದಯಾತ್ರೆ ತೆರಳುತ್ತಾರೆ. ತಾಲೂಕಿನ ಹಲವು ಗ್ರಾಮಗಳ ಮಾರ್ಗವಾಗಿ ಶ್ರೀಶೈಲಕ್ಕೆ ತೆರಳುತ್ತಾರೆ. ಹೋಳಿ ಹುಣ್ಣಿಮೆ ಮಾರನೆ ದಿನದಿಂದ ಆರಂಭವಾದ ಭಕ್ತರ ಪಾದಯಾತ್ರೆ ಯುಗಾದಿ ಅಮಾವಾಸ್ಯೆ ಎರಡ್ಮೂರು ದಿನಗಳ ಮುಂಚೆಗೆ ಸಮಾರೋಪಗೊಳ್ಳಲಿದೆ.

ಈ 8-10 ದಿನಗಳಲ್ಲಿ ಸಾವಿರಾರು ಭಕ್ತರು ತಾಲೂಕಿನ ಮಾರ್ಗವಾಗಿ ಪಾದಯಾತ್ರೆ ನಡೆಸಿ ಭಕ್ತಿಭಾವ ಮೆರೆಯುತ್ತಾರೆ. ವಿಜಯಪುರ, ಯಾದಗಿರಿ, ಕಲಬುರಗಿಯ ಗಡಿಭಾಗ, ಬಾಗಲಕೋಟೆ ಜಿಲ್ಲೆಯ ಕೊನೆ ಭಾಗದ ಹಳ್ಳಿಗಳ ಸಾವಿರಾರು ಭಕ್ತರು ದೇವದುರ್ಗ ತಾಲೂಕು ತಿಂಥಣಿ ಬ್ರಿಡ್ಜ್ ಹಾಗೂ ಹೂವಿನಹೆಡಗಿ ಸೇತುವೆ ಮೂಲಕ ರಾಯಚೂರು ರಾಜ್ಯ ಹೆದಾರಿಯಲ್ಲಿ ಪಾದಯಾತ್ರೆ ನಡೆಸುತ್ತಾರೆ.

ತಿಂಥಣಿಯಿಂದ ಗಬ್ಬೂರುವರೆಗೆ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಶಿಬಿರಗಳು ಆರಂಭವಾಗಿವೆ. ಈ ಶಿಬಿರಗಳಲ್ಲಿ ಪಾದಯಾತ್ರೆ ಕೈಗೊಳ್ಳುವ ಭಕ್ತರಿಗೆ ವಿಶ್ರಾಂತಿ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ, ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ವೇಳೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಬೆಳಗ್ಗೆ ಸ್ನಾನಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ತಾಲೂಕಿನಲ್ಲಿ ಸುಮಾರು 30ಕ್ಕೂ ಹೆಚ್ಚುಕಡೆ ಪಾದಯಾತ್ರೆಗಳ ಸೇವೆಗಾಗಿ ಅನ್ನಸಂತರ್ಪಣೆ ಶಿಬಿರವನ್ನು ಸಾರ್ವಜನಿಕರು ಆರಂಭಿಸಿದ್ದಾರೆ. ತಾಲೂಕಿನ ಹೂವಿನಹೆಡಗಿ, ದೇವದುರ್ಗ ಪಟ್ಟಣದಲ್ಲಿ ನಾಲ್ಕೈದು ಕಡೆ, ಗೌರಂಪೇಟೆ, ಕೊಪ್ಪರ ಕ್ರಾಸ್‌, ಮಿಯ್ನಾಪುರ ಕ್ರಾಸ್‌, ಚಿಕ್ಕಹೊನ್ನಕುಣಿ, ಚಿನ್ನಾಪುರ, ಸುಂಕೇಶ್ವರಹಾಳ, ಗಬ್ಬೂರು, ಸುಲ್ತಾನಪುರ ಸೇರಿ ವಿವಿಧೆಡೆ ಅನ್ನಸಂತರ್ಪಣೆ ಶಿಬಿರ ಆಯೋಜಿಸಲಾಗಿದೆ. ಕುಡಿವ ನೀರು, ತಂಪು ಪಾನೀಯ, ಔಷಧ ಸೌಲಭ್ಯ ಕಲ್ಪಿಸಲಾಗಿದೆ.

ಗೌರಂಪೇಟೆಯಲ್ಲಿ ಸತತ ನಾಲ್ಕನೇ ಬಾರಿಗೆ ರೈತರೇ ಸ್ವತಃ ಅನ್ನಸಂತರ್ಪಣೆ ಶಿಬಿರ ಆರಂಭಿಸಿದ್ದು, ನಿತ್ಯ ಸಿಹಿ ಅಡುಗೆ ತಯಾರಿಸಿ ಪಾದಯಾತ್ರಿಕರಿಗೆ ಉಣಬಡಿಸುತ್ತಿದ್ದಾರೆ.

ನಮ್ಮದು ಇಂಡಿ ತಾಲೂಕು ಚಳ್ಳಿಕೇರಿ ಗ್ರಾಮ. ನಾವು ಸುಮಾರು 30ಕ್ಕೂ ಹೆಚ್ಚು ಜನರು ಸತತ 22 ವರ್ಷಗಳಿಂದ ಶ್ರೀಶೈಲಕ್ಕೆ ಪಾದಯಾತ್ರೆ ಕೈಗೊಳ್ಳುತ್ತಿದ್ದೇವೆ. ಹೋಳಿ ಹುಣ್ಣಿಮೆ ನಂತರ ಪಾದಯಾತ್ರೆ ಕೈಗೊಳ್ಳುತ್ತೇವೆ. 10 ದಿನದಲ್ಲಿ ಶ್ರೀಶೈಲ ತಲುಪುತ್ತೇವೆ. ಸುಮಾರು 700 ಕಿಮೀ ದೂರವಿದ್ದು, ನಿತ್ಯ 60-65 ಕಿಮೀ ಪಾದಯಾತ್ರೆ ಮಾಡುತ್ತೇವೆ. ಭಕ್ತರು ಆಯೋಜಿಸುವ ಅನ್ನಸಂತರ್ಪಣೆ ಶಿಬಿರಗಳೇ ನಮಗೆ ಆಸರೆಯಾಗಿವೆ.
ಇಂಡಿ ತಾಲೂಕಿನ
ಚಳ್ಳಕೇರಿ ಗ್ರಾಮದ ಮಹಿಳೆಯರು

ಟಾಪ್ ನ್ಯೂಸ್

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.