ನಿಷೇಧಿಸಿದ್ದರೂ ನಡೆದ ರವಿವಾರದ ಸಂತೆ

ಗ್ರಾಪಂ ಅಧ್ಯಕ್ಷೆಯಿಂದ ಸಂತೆಯಲ್ಲಿ ಕೊರೊನಾ ಜಾಗೃತಿ

Team Udayavani, Mar 16, 2020, 4:40 PM IST

16-March-23

ಆಲಮಟ್ಟಿ: ಸರ್ಕಾರ ಸಂತೆಯನ್ನು ನಿಷೇಧಿಸಿದರೂ ಕೂಡ ಇಲ್ಲಿನ ರವಿವಾರದ ಸಂತೆ ಪ್ರತಿ ವಾರದಂತೆ ಈ ವಾರವೂ ಕೂಡ ಜನರು ಆಗಮಿಸಿ ಖರೀದಿ ಮಾಡಿದರು.

ಜಗತ್ತಿನಲ್ಲೆಡೆ ಕೊರೊನಾ ವೈರಸ್‌ ಹಾವಳಿ ಪರಿಣಾಮ ರಾಜ್ಯ ಸರ್ಕಾರ ಏಳು ದಿನಗಳ ಕಾಲ ಬಂದ್‌ ಆದೇಶ ಮಾಡಿದ ಹಿನ್ನೆಲೆಯಲ್ಲಿ ಎರಡನೇ ದಿನವಾದ ರವಿವಾರ ಜರುಗುವ ಆಲಮಟ್ಟಿ ಸಂತೆಯು ಎಂದಿನಂತೆ ನಡೆದರೂ ಕೆಲವು ವಿಶೇಷತೆಗಳಿಗೆ ಕಾರಣವಾಯಿತು.

ವಿಜಯಪುರ ಜಿಲ್ಲಾಧಿಕಾರಿಗಳ ಆದೇಶದಂತೆ ಇಲ್ಲಿನ ಗ್ರಾಪಂನಿಂದ ಶನಿವಾರದಿಂದ ರವಿವಾರದ ಸಂತೆಯನ್ನು ರದ್ದುಗೊಳಿಸಲಾಗಿದೆ ಹಾಗೂ ಕೊರೊನಾ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಧ್ವನಿವರ್ಧಕದ ಮೂಲಕ ಸುತ್ತಲಿನ ಎಲ್ಲ ಗ್ರಾಮಗಳಿಗೆ ತೆರಳಿ ಪ್ರಚಾರ ಮಾಡಿದರು.

ಆಲಮಟ್ಟಿ ಸಂತೆಗೆ ಸುಮಾರು 40 ಹಳ್ಳಿಗಳ ಜನರು ಹಾಗೂ ಮುದ್ದೇಬಿಹಾಳ, ಬಾಗಲಕೋಟೆ, ವಿಜಯಪುರ, ತಾಳಿಕೋಟೆ ಸೇರಿದಂತೆ ವಿವಿಧ ಭಾಗಗಳಿಂದ ವ್ಯಾಪಾರಸ್ಥರು ಆಗಮಿಸುತ್ತಾರೆ. ಸಂತೆ ರದ್ದಿನ ಬಗ್ಗೆ ಎಷ್ಟೇ ಧ್ವನಿವರ್ಧಕದ ಮೂಲಕ ಹೇಳಿದರೂ ಕೂಡ ಗ್ರಾಹಕರು ಹಾಗೂ ವ್ಯಾಪಾರಿಗಳು ತಮ್ಮ ಕಾಯಕದಲ್ಲಿ ತೊಡಗಿದರು.

ಮಾತಿನಚಕಮಕಿ: ದೂರದ ಊರುಗಳಿಂದ ಆಗಮಿಸಿದ್ದ ಜನರಿಗೆ ಆಲಮಟ್ಟಿ ಗ್ರಾಪಂ ಅಧ್ಯಕ್ಷೆ ಸೈದಮ್ಮ ಬೆಣ್ಣಿಯವರು ಗ್ರಾಪಂ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಸಂತೆ ಆವರಣಕ್ಕೆ ತೆರಳಿ ಸಂತೆ ರದ್ದಾಗಿರುವ ಕುರಿತು ಜನರಿಗೆ ಮಾಹಿತಿ ನೀಡುವ ವೇಳೆ ರೈತರು ಹಾಗೂ ಗ್ರಾಹಕರು ಅಧ್ಯಕ್ಷೆಯೊಂದಿಗೆ ಮಾತಿನ ಚಕಮಕಿ ನಡೆಸಿದರು. ನಂತರ ಆಲಮಟ್ಟಿ ಪೊಲೀಸ್‌ ಠಾಣೆ ಸಿಬ್ಬಂದಿ ನೆರವಿನೊಂದಿಗೆ ಸಂತೆ ಹಾಗೂ ಆಲಮಟ್ಟಿ ಪಟ್ಟಣದ ವಿವಿಧ ಭಾಗಗಳಲ್ಲಿದ್ದ ಮಾಂಸದ ಚಿಕನ್‌, ಮಟನ್‌, ಮೀನಿನ ಅಂಗಡಿಗಳು, ಮಿಠಾಯಿ ಅಂಗಡಿಗಳು ಹಾಗೂ ಚಹಾ ಹೋಟೆಲ್‌ಗ‌ಳನ್ನು ಬಂದ್‌ ಮಾಡಿಸಿದರು.

ಈ ವೇಳೆ ಪ್ರತಿ ಅಂಗಡಿಕಾರರೊಂದಿಗೆ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಸೈದಮ್ಮ ಬೆಣ್ಣಿ, ಕೊರೊನಾ ರೋಗ ಭಯಾನಕವಾಗಿದ್ದು ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದೆ. ಈ ಹಿನ್ನೆಲೆಯಲ್ಲಿ ರೋಗ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜನರ ಹಿತಕ್ಕಾಗಿ ಸರ್ಕಾರ ಆದೇಶ ಮಾಡಿದೆ, ಆದ್ದರಿಂದ ನೀವು ಬದುಕಿ ಇನ್ನೊಬ್ಬರನ್ನೂ ಬದುಕಲು ಬಿಡಿ ಎಂದರು.

ಸರ್ಕಾರದ ನಿರ್ದೇಶನದಂತೆ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ತಮಗೂ ಸೇರಿದಂತೆ ಪಕ್ಕದ ಯಾರಿಗಾದರೂ ಕೊರೊನಾ ರೋಗ ಲಕ್ಷಣಗಳು ಕಂಡು ಬಂದಲ್ಲಿ ಸಮೀಪದ ಆಸ್ಪತ್ರೆಗಳಿಗೆ ತೆರಳಿ ಗುಣಮುಖರಾಗಬೇಕು ಎಂದು ಹೇಳಿದರು.

ಪಟ್ಟಣದಲ್ಲಿರುವ ಮಾಂಸಾಹಾರಿ ಖಾನಾವಳಿ ಹಾಗೂ ಮಾಂಸದ ಅಂಗಡಿ ಸೇರಿದಂತೆ ಕರಿದ ಪದಾರ್ಥಗಳನ್ನು ತಯಾರಿಸುವ ಹಾಗೂ ಮಾರಾಟ ಮಾಡುವ ಎಲ್ಲ ಕೇಂದ್ರಗಳನ್ನು ಮುಚ್ಚಿಸಿ ಸರ್ಕಾರದ ಆದೇಶ ಬರುವವರೆಗೆ ಅಂಗಡಿಗಳನ್ನು ತೆರೆಯದಂತೆ ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಲಾಯಿತು.

ಸಂತೆಯಲ್ಲಿ ತರಕಾರಿ, ಹಣ್ಣುಗಳು, ಬಟ್ಟೆ ಹಾಗೂ ಕಿರಾಣಿ ಸಾಮಗ್ರಿಗಳನ್ನು ಮಾತ್ರ ಮಾರಾಟಕ್ಕೆ ಅನುವು ಮಾಡಿಕೊಡಲಾಯಿತು. ಅಧ್ಯಕ್ಷರೊಂದಿಗೆ ಆಲಮಟ್ಟಿ ಎಎಸೈ ಆರ್‌.ಜಿ. ನಗರಕರ ಜನರಿಗೆ ಮುಂಜಾಗ್ರತಾ ಕ್ರಮದ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ ಗ್ರಾಪಂನ ರಾಮಸ್ವಾಮಿ ಗಾಯಕವಾಡ, ಟಿ.ಆರ್‌. ಬಂಡಿವಡ್ಡರ, ರವಿ ಆಲಮಟ್ಟಿ, ಅಂದಾನಿ ಲಮಾಣಿ, ಪೊಲೀಸ್‌ ಇಲಾಖೆಯ ಎಸ್‌.ಜಿ. ಲಾಡ್‌, ರಣಧೀರ ಚವ್ಹಾಣ, ಪ್ರಕಾಶ ಗಣಾಚಾರಿ, ಅನಿಲ ರೂಗಿ, ಕೃಷ್ಣಾ ಕೆರಿಕಟ್ಟಿ ಮೊದಲಾದವರಿದ್ದರು.

ಟಾಪ್ ನ್ಯೂಸ್

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.