ಜ್ಞಾನದ ಹಸಿವು ನೀಗಿಸುವ ಗ್ರಂಥಾಲಯ


Team Udayavani, Mar 16, 2020, 4:44 PM IST

hv-tdy-1

ಹಾವೇರಿ: ಜ್ಞಾನ ವಿಕಾಸಕ್ಕೆ ಗ್ರಂಥಾಲಯಗಳು ಸಂವರ್ಧನಾ ಶಕ್ತಿ ಕೇಂದ್ರಗಳಾಗಿ ಕಾರ್ಯ ನಿರ್ವಹಿಸುತ್ತ ಕಿರಿಯರಾದಿಯಾಗಿ ಹಿರಿಯರ ವರೆಗೂ ಜ್ಞಾನದ ಹಸಿವು ನೀಗಿಸುವ ಮಹತ್ವಪೂರ್ಣ ಕಾರ್ಯ ಮಾಡುತ್ತ ಬಂದಿವೆ ಎಂದು ಹುಬ್ಬಳ್ಳಿ ಪಿ.ಸಿ. ಜಾಬೀನ್‌ ಕಾಲೇಜಿನ ಪ್ರಧಾನ ಗ್ರಂಥಪಾಲಕ ಬಸವರಾಜ ಎಸ್‌. ಮಾಳವಾಡ ಹೇಳಿದರು.

ನಗರದ ಗುದೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಗ್ರಂಥಾಲಯ ವಿಭಾಗವು ಆಯೋಜಿಸಿದ್ದ “ಶೈಕ್ಷಣಿಕ ವರ್ಷದಲ್ಲಿ ಗ್ರಂಥಾಲಯ ಸಂಪನ್ಮೂಲಗಳ ಉಪಯೋಗ’ ಎಂಬ ವಿಷಯದಡಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಜ್ಞಾನ ಹೆಚ್ಚಿಸಿ ಕೊಳ್ಳಬೇಕಾದರೆ ಗ್ರಂಥಾಲಯಗಳು ಅತೀ ಅವಶ್ಯಕವಾಗಿದ್ದು, ಶಿಕ್ಷಣದಲ್ಲಿ ಗ್ರಂಥಾಲಯವು ತನ್ನದೇ ಆದ ಮಹತ್ವ ಹೊಂದಿದೆ. ಪುಸ್ತಕಗಳು ಹಾಗೂ ಗ್ರಂಥಾಲಯಗಳು ಜೀವಂತ ದೇವಾಲಯಗಳಿದ್ದಂತೆ. ಉತ್ತಮ ಜ್ಞಾನಾಸಕ್ತರಿಗೆ ಪೂರಕ ಮಾಹಿತಿ ಮತ್ತು ವಿಷಯಗಳನ್ನು ಅರ್ಜಿಸಲು ಸಂಪೂರ್ಣವಾದ ಸಂಪನ್ಮೂಲವನ್ನು ಒದಗಿಸಿಕೊಡುತ್ತವೆ. ಓದುವ ಹವ್ಯಾಸದ ಜತೆಗೆ ಬೌದ್ಧಿಕ ಮತ್ತು ಮಾನಸಿಕ ಸ್ಥಿಮಿತತೆ ಕಾಯ್ದುಕೊಳ್ಳಲು ಸಹಕಾರಿ ಎಂದರು.

ಅಪಾರ ಜ್ಞಾನದ ಭಂಡಾರವೇ ಆಗಿರುವ ಗ್ರಂಥಾಲಯವು ಬದುಕಿನ ಶಾಂತಿ ಮತ್ತು ನೆಮ್ಮದಿ ಕಟ್ಟಿಕೊಡುವ ಕೆಲಸ ಮಾಡುತ್ತವೆ. ಪಠ್ಯ ಹಾಗೂ ಪಠ್ಯೇತರ ವಿಷಯಗಳನ್ನು ಏಕಕಾಲಕ್ಕೆ ಬೋಧನೆ ಮಾಡುವ ಸ್ಥಳ ಗ್ರಂಥಾಲಯ. ಸಹಪಠ್ಯವು ಒಳಗೊಳ್ಳುವ ಏಕೈಕ ಸಾಧನೆ. ಗ್ರಂಥಾಲಯವು ಶಿಕ್ಷಣ ಪ್ರಗತಿಗೆ ಪೂರಕವಾದ ಕಾರ್ಯ ನಿರ್ವಹಿಸುತ್ತದೆ. ಜತೆಗೆ ನಾವಿಣ್ಯತೆಯ ತಾಂತ್ರಿಕ ಗ್ರಂಥಾಲಯಗಳು ಇಂದು ಎಲ್ಲೆಡೆ ಲಭ್ಯವಿದ್ದು, ಅಂಗೈಯಲ್ಲಿಯೇ ಗ್ರಂಥಾಲಯವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಬಹುದು ಎಂದರು.

ಇನ್ನೋರ್ವ ಭಾಷಣಕಾರ ಹುಬ್ಬಳ್ಳಿ ಅಗ್ರೀಸ್‌ ಬ್ಯುಸಿನೆಸ್‌ ಸೊಲುಷನ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವೀರು ಉಪ್ಪೀನ ಮಾತನಾಡಿ, ಗ್ರಂಥಾಲಯಗಳು ಅರಿವಿನ ದಿವ್ಯ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದುವವರಿಗೆ ಸುಜ್ಞಾನದ ಬೆಳಕು ನೀಡುವ ಅಕ್ಷಯ ತವನಿ ಗಳಿದ್ದಂತೆ. ಇಲ್ಲಿನ ಸಂಪನ್ಮೂಲ ಎಂದಿಗೂ, ಯಾವ ಕಾಲದಲ್ಲಿಯೂ ಬತ್ತಿ ಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿ ಮುದ್ರಣಾಲಯಗಳಿರಲಿಲ್ಲ. ಅಂದು ಜ್ಞಾನಾರ್ಜನೆಗಾಗಿ ಬಹಳವೇ ಕಷ್ಟಪಡುವ ಸಂದರ್ಭವಿತ್ತು. ಆದ್ದರಿಂದ ಹೊಸ ಹೊಸ ಆವಿಷ್ಕಾರಗಳ ಮೂಲಕ ಜಗತ್ತು ಕಿರಿದಾಗಿದೆ.

ಅಂತರ್ಜಾಲ ಎಲ್ಲ ಜಾಲಗಳನ್ನು ಬಂಧಿಸಿ ತನ್ನಲ್ಲಿ ಹಿಡಿದಿಟ್ಟುಕೊಂಡಿದೆ. ಅತ್ಯಂತ ಸರಳವಾಗಿ ತಾಂತ್ರಿಕ ವ್ಯವಸ್ಥೆಗಳ ಮೂಲಕ ಗ್ರಂಥಾಲಯವನ್ನು ಇದ್ದಲ್ಲಿಯೇ ಬಳಸುವ ವ್ಯವಸ್ಥೆ ಇದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳಾದವರು ನಿತ್ಯದ ಓದಿನಲ್ಲಿ ಕ್ರಮವಾಗಿ ಬಳಸುವ ಅವಶ್ಯಕತೆಯಿದೆ ಎಂದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ| ಎಂ. ಎಸ್‌. ಯರಗೊಪ್ಪ ವಹಿಸಿದ್ದರು. ಪ್ರೊ| ವೈ.ಎಚ್‌. ಯಲವಿಗಿ, ಪ್ರೊ| ಡಿ.ಎ. ಕೊಲ್ಲಾಪುರೆ, ಡಾ| ಎಸ್‌.ವಿ. ಮಡವಾಳೆ, ಪ್ರೊ| ವೆಂಕಟೇಶ ಕಲಾಲ ಇದ್ದರು. ಪ್ರಿಯಾ ಉಪ್ಪಿನ ಸಂಗಡಿಗರು ಪ್ರಾರ್ಥಿಸಿದರು. ನವರತ್ನ ಸ್ವಾಗತಿಸಿದರು. ಡಾ| ಟಿ. ರಾಜೇಶ್ವರಿ ಪ್ರಾಸ್ತಾವಿಕ ಮಾತನಾಡಿದರು. ಗ್ರಂಥಪಾಲಕ ಡಾ| ಆತ್ಮಾನಂದ ಜಿ.ಎಚ್‌. ಪರಿಚಯಿಸಿದರು. ರೂಪಾ ಕೋರೆ ನಿರೂಪಿಸಿದರು. ಶಿವಯೋಗಿ ಎ. ಚನ್ನಶೆಟ್ರ ವಂದಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.