ಮತ್ತೆಂದೂ ಎದುರಾಗಬೇಡ ಪ್ಲೀಸ್‌…


Team Udayavani, Mar 17, 2020, 4:30 AM IST

ಮತ್ತೆಂದೂ ಎದುರಾಗಬೇಡ ಪ್ಲೀಸ್‌…

ಬೀದಿ ದೀಪದ ಬೆಳಕಲ್ಲಿ ಕಾಲ ಸರಿದದ್ದೇ ಗೊತ್ತಾಗಲಿಲ್ಲ ನೋಡು. ಹೆತ್ತವರ ಕನಸಿನ ಭಾರ ಹೊತ್ತು ನಾನು ಕಾಣದೂರಿಗೆ ಬಂದು ಬಿದ್ದೆ. ಊರು ಬಿಡುವ ದಿನ ಬಾಗಿಲ ಸಂಧಿಯಲಿ ನಿಂತು ನೀನು ಕಣ್ಣೀರಾಗಿದ್ದು ಯಾಕೆ?

ಬದುಕಿಗೆ ಎಷ್ಟೊಂದು ಬಣ್ಣಗಳು ಅಲ್ವಾ? ಕೇವಲ ಎರಡೇ ವರ್ಷಗಳು, ಬದುಕು ಎಷ್ಟೊಂದು ಬಣ್ಣ ಬಳಿದುಕೊಂಡಿದೆ! ಅದೊಂದು ಕಾಲವಿತ್ತು, ಮರಳಿ ಬಾರದಂತಹದ್ದು. ರಾತ್ರಿ ಊಟದ ನಂತರ ಬೀದಿಯಲಿ ಚಾಪೆ ಹಾಸಿಕೊಂಡು ನಮ್ಮಮ್ಮ – ನಿಮ್ಮಮ್ಮ ಹರಟೆ ಹೊಡೆಯುತ್ತಿದ್ದದ್ದು, ನಾವಿಬ್ಬರೂ ಬೀದಿ ದೀಪದ ಬೆಳಕಲ್ಲಿ ಆಟವಾಡುತ್ತಿದ್ದದ್ದು, ನೆನಪಿದೆಯಾ ನಿನಗೆ?

“ಏನೋ, ನನ್ನ ಮಗಳನ್ನ ಕಟ್ಕೊಳ್ತಿಯೇನೋ?’ ಎಂದು ನಿಮ್ಮಮ್ಮ ನನ್ನ ಕೆನ್ನೆ ಚಿವುಟಿದ್ದು, “ಅಯ್ಯೋ, ನಮ್ಮಂತವ್ರಿಗೆಲ್ಲ ಮಗಳ ಕೊಡ್ತೀರಾ ನೀವು?’ ಎಂದು ನಮ್ಮಮ್ಮ ಕೇಳಿದ್ದು…  ಬೀದಿ ದೀಪದ ಬೆಳಕಲ್ಲಿ ಕಾಲ ಸರಿದದ್ದೇ ಗೊತ್ತಾಗಲಿಲ್ಲ ನೋಡು. ಹೆತ್ತವರ ಕನಸಿನ ಭಾರ ಹೊತ್ತು ನಾನು ಕಾಣದೂರಿಗೆ ಬಂದು ಬಿದ್ದೆ. ಊರು ಬಿಡುವ ದಿನ ಬಾಗಿಲ ಸಂಧಿಯಲಿ ನಿಂತು ನೀನು ಕಣ್ಣೀರಾಗಿದ್ದು ಯಾಕೆ? ಬಸ್ಸು ಕಣ್ಮರೆಯಾಗಿ, ಮೇಲೆ ಎದ್ದಿದ್ದ ಧೂಳು ಕ್ರಮೇಣ ಕಡಿಮೆಯಾದರೂ ನಿನ್ನ ದುಗುಡ ಕೆಳಗೆ ಇಳಿಯಲೇ ಇಲ್ಲವಲ್ಲಾ ಯಾಕೆ?

ಕಾಣದೂರಿನಿಂದ ಮರಳಿ ಬಂದವನಿಗೆ ನೀನು ಕಾಣಲೇ ಇಲ್ಲ ಕಣೆ. ಮತ್ಯಾರದೋ ಕನಸಿನರಮನೆಯ ಬೆಳಗಲು ಊರು ಬಿಟ್ಟಾಗಿತ್ತು. ನೀನು ಹಸಿರ ಚಪ್ಪರದಡಿ ಸಪ್ತಪದಿ ತುಳಿಯುವಾಗ ನನ್ನೆದೆ ಬಾಗಿಲಿನಿಂದ ಒಂದೊಂದು ಹೆಜ್ಜೆ ದೂರಾಗುತ್ತಿದ್ದೆ. ಅಲ್ಲಿ ಹೊಸ್ತಿಲ ಮೇಲಿನ ಪಡಿ ಹೊದೆಯುತ್ತಿದ್ದರೆ ಇಲ್ಲಿ ನನ್ನೆಲ್ಲಾ ಆಸೆಗಳು ಮಣ್ಣಲ್ಲಿ ಬಿದ್ದು ಹೊರಳಾಡುತ್ತಿದ್ದವು.

ನಿನ್ನನ್ನು ಸಂಪೂರ್ಣ ಮರೆಯುವ ಉದ್ದೇಶದಿಂದಲೇ ಮರಳಿ ಕಾಣದೂರಿಗೆ ಬಂದವನಿಗೆ ನೀನು ಮತ್ತೆ ಕಣ್ಣಿಗೆ ಬೀಳಬಾರದಿತ್ತು. ತಿಳಿನೀರ ಕೆಳಗಿನ ಮರಳ ಕೆಣಕಬಾರದಿತ್ತು. ಮನಸೀಗ ರಾಡಿಯಾಗಿದೆ. ನರಳುವ ಮನಸ ತಣಿಸುವ ಕೆಲಸ ಎಷ್ಟೊಂದು ಕಷ್ಟವೆಂಬ ಅರಿವಿಲ್ಲ ನಿನಗೆ. ಇದು ನಿನ್ನ ಊರು ಎಂದು ಗೊತ್ತಿದ್ದರೆ ನನ್ನ ನಕ್ಷೆಯಲ್ಲಿ ಈ ಊರನ್ನೇ ಅಳಿಸಿಹಾಕುತ್ತಿದ್ದೆ. ನಿನ್ನೆಡೆಗಿನ ದಾರಿಗಳಿಗೆ ಬಲವಂತದ ಬೇಲಿ ಬಿಗಿದು, ಬೆನ್ನು ತೋರಿಸಿ ಹೊರಟುಬಿಡುತ್ತಿದ್ದೆ. ದಯವಿಟ್ಟು ಕಣ್ಮರೆಯಾಗಿಬಿಡು. ಅರೆಸತ್ತ ಬದುಕ ಕಟ್ಟಿಕೊಳ್ಳಲು ಪರದಾಡುತ್ತಿದ್ದೇನೆ. ನೀನಿದ್ದ ಕೆಲವು ವರ್ಷಗಳು ನನ್ನ ಬದುಕನ್ನೇ ಬದಲಾಯಿಸಿಬಿಟ್ಟವು ಎಂಬ ಭ್ರಮೆಯಿಂದ ಹೊರಬರಲು ಹೆಣಗಾಡುತ್ತಿದ್ದೇನೆ. ಮತ್ತೆಂದೂ ಎದುರಾಗಬೇಡ. ನೀನು ಕಂಡಷ್ಟೂ ನೆನಪಿನ ಕುಣಿಕೆ ಬಿಗಿಯಾಗುತ್ತದೆ. ಹೇಗೋ ಉಸಿರಾಡುತ್ತೇನೆ… ಪ್ಲೀಸ್‌…

-ಲಕ್ಷ್ಮೀಸುತ ಸುರೇಶ್‌

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.