ದೇವಾಲಯಗಳ ಅಭಿವೃದ್ಧಿಗೆ 291.87 ಕೋಟಿ ರೂ.: ಶ್ರೀನಿವಾಸ ಪೂಜಾರಿ
Team Udayavani, Mar 16, 2020, 8:00 PM IST
ವಿಧಾನಸಭೆ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮುಜರಾಯಿ ಮತ್ತು ಆರಾಧನಾ ದೇವಸ್ಥಾನಗಳ ಅಭಿವೃದ್ಧಿಗೆ 291.87 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಾಜಕುಮಾರ್ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದೇವಾಲಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಂದು ಕೋಟಿ ರೂ.ವರೆಗಿನ ಪ್ರಸ್ತಾವನೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲೇ ಅನುಮತಿ ದೊರೆಯಲಿದೆ. ಆದಕ್ಕಿಂತ ಹೆಚ್ಚಿನ ಮೊತ್ತ ಇದ್ದರೆ ಮಾತ್ರ ಆಯುಕ್ತರ ಹಂತಕ್ಕೆ ಬರಲಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ರಾಜಕುಮಾರ್ ಪಾಟೀಲ್, ಕೋಟ್ಯಂತರ ರೂ. ಮುಜರಾಯಿ ಇಲಾಖೆಯಲ್ಲಿ ಇದ್ದರೂ ದೇವಾಲಯಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿದರು.
ಕ್ರಮ
ಬಿಜೆಪಿಯ ಲಾಲಾಜಿ ಆರ್. ಮೆಂಡನ್ ಅವರ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸಪೂಜಾರಿ, ಮೀನುಗಾರಿಕೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಮತ್ಸಾéಶ್ರಯ ವಸತಿ ಯೋಜನೆ 2017-18 ನೇ ಸಾಲಿನಿಂದ ರಾಜೀವ್ ಗಾಂಧಿ ವಸತಿ ನಿಗದಮ ಮೂಲಕ ಅನುಷ್ಟಾನ ಮಾಡಲಾಗುತ್ತಿದ್ದು ಕೆಲವೊಂದು ತಾಂತ್ರಿಕ ಕಾರಣಳಿಂದ ಅನುಷ್ಟಾನದಲ್ಲಿ ವಿಳಂಬವಾಗಿರುತ್ತದೆ. ಹೀಗಾಗಿ, ಯೋಜನೆಯನ್ನು ರಾಜೀವ್ಗಾಂಧಿ ವಸತಿ ನಿಗಮದಿಂದ ವಾಪಸ್ ಪಡೆದು ಹಿಂದೆ ಇದ್ದಂತೆ ಕರ್ನಾಟಕ ಮೀನುಗಾರಿಕೆ ಅಭವೃದ್ಧಿ ನಿಗಮಕ್ಕೆ ವಹಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ