ಕೊರೊನಾ ವೈರಸ್‌ ಭೀತಿ: ಹಣ್ಣುಗಳಿಗೆ ಗಿರಾಕಿ ಇಳಿಕೆ- ಸಂತೆ ವ್ಯಾಪಾರಸ್ಥರಿಗೆ ಚಿಂತೆ


Team Udayavani, Mar 17, 2020, 5:33 AM IST

ಕೊರೊನಾ ವೈರಸ್‌ ಭೀತಿ: ಹಣ್ಣುಗಳಿಗೆ ಗಿರಾಕಿ ಇಳಿಕೆ- ಸಂತೆ ವ್ಯಾಪಾರಸ್ಥರಿಗೆ ಚಿಂತೆ

ಉಡುಪಿ: ನಗರದ ತರಕಾರಿ ಮತ್ತು ಹಣ್ಣು ಹಂಪಲು ಮಾರುಕಟ್ಟೆಗಳಲ್ಲಿ ಹಣ್ಣು ಹಂಪಲು ಕೊಂಡುಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ. ಇದು ವ್ಯಾಪಾರಸ್ಥರಿಗೆ ಚಿಂತೆ ಉಂಟು ಮಾಡಿದೆ.

ಕೊರೊನಾ ವೈರಸ್‌ ಭೀತಿಗೆ ಮಾಂಸಪ್ರಿಯರು ಮಾಂಸ ಸೇವನೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ತರಕಾರಿಗೆ ಬೇಡಿಕೆಯಿದ್ದರೂ ಜನ ನಗರಗಳತ್ತ ಬಾರದೆ ಇರುವುದರಿಂದ ವ್ಯಾಪಾರ ವಹಿವಾಟು ಕಡಿಮೆಯಾಗಿದೆ ಅನ್ನುವ ಆತಂಕವನ್ನು ನಗರದ ತರಕಾರಿ ಮತ್ತು ಹಣ್ಣು ಹಂಪಲು ವ್ಯಾಪಾರಿಗಳು ವ್ಯಕ್ತಪಡಿಸುತ್ತಿದ್ದಾರೆ.

ಸರಕಾರ ಮಾಲ್‌ಗ‌ಳನ್ನು ಬಂದ್‌ ಮಾಡಿದ್ದ ರಿಂದ ಸ್ಥಳೀಯವಾಗಿ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಬೇಕಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿಲ್ಲ. ಜನರು ಕೊರೊನಾ ವೈರಸ್‌ ಭೀತಿಯಿಂದ ಪೇಟೆ ಕಡೆ ಬಾರದೆ ಮನೆಯಲ್ಲೆ ಉಳಿದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ.

ತರಕಾರಿ ಮುಟ್ಟಲೂ ಹೆದರಿಕೆ
ಮಾರುಕಟ್ಟೆಗೆ ತರಕಾರಿ ಖರೀದಿಗೆಂದು ಬರುವ ಗ್ರಾಹಕರು ಖರೀದಿ ವೇಳೆಯೂ ಸಾಕಷ್ಟು ಸಂದೇಹ ಗಳನ್ನು ವ್ಯಕ್ತಪಡಿಸುತ್ತಾರೆ. ಹಣ್ಣು ಹಂಪಲು ಮುಟ್ಟುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟರ ಮಟ್ಟಿಗೆ ಜನ ಕೊರೊನಾ ಸೋಂಕಿಗೆ ಹೆದರಿದ್ದಾರೆ. ತರಕಾರಿ ಜತೆ ಹಣ್ಣು ಹಂಪಲು ಪಡೆದು ತೆರಳುತ್ತಿದ್ದವರೂ ಈಗ ತರಕಾರಿ ಮಾತ್ರ ಪಡೆದು ಹಣ್ಣ್ಣುಹಂಪಲು ಸ್ವಲ್ಪ ಮಾತ್ರ ಪಡೆದು ಹೋಗುತ್ತಿದ್ದಾರೆ. ಹಣ್ಣು ಹಂಪಲು ಖರೀದಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ವ್ಯಾಪಾರಿಗಳು ವ್ಯಾಪಾರ ಕಡಿಮೆಯಾಗುವುದಕ್ಕೆ ಕಾರಣ ನೀಡುತ್ತಿದ್ದಾರೆ.

ಕಳೆದೊಂದು ವಾರದಿಂದ ವ್ಯಾಪಾರ ಕಡಿಮೆ ಯಾಗಿತ್ತು. ಶನಿವಾರ ಮತ್ತು ರವಿವಾರ ಸ್ವಲ್ಪ ಜನ ಮಾರುಕಟ್ಟೆಗೆ ಬಂದಿದ್ದರು.

ಸೋಮವಾರ ಬೆಳಗ್ಗೆಯಿಂದಲೆ ಮಾರುಕಟ್ಟೆಗೆ ಖರೀದಿಗೆ ಅತಿ ವಿರಳ ಮಂದಿ ಬಂದಿದ್ದು ವ್ಯಾಪಾರವೇ ಆಗಿಲ್ಲ. ನಾವು ನಷ್ಟಕ್ಕೆ ಒಳಗಾಗಿದ್ದೇವೆ ಎಂದು ವ್ಯಾಪಾರಿಗಳು ಬೇಸರ ವ್ಯಕ್ತಪಡಿದರು.

ನಗರಕ್ಕೆ ಸ್ಥಳಿಯವಾಗಿ ತರಕಾರಿ, ಹಣ್ಣು ಹಂಪಲು ಪೂರೈಕೆಯಾಗುವುದು ಕಡಿಮೆ. ಬಯಲು ಸೀಮೆ ಪ್ರದೇಶಗಳಿಂದ ಸರಬರಾಜು ಆಗುತ್ತಿದೆ. ತರಕಾರಿ ಪೂರೈಕೆಯಲ್ಲಿ ಅಥವಾ ದರದಲ್ಲಿ ಹೆಚ್ಚಿನ ವ್ಯತ್ಯಾಸ ಆಗಿಲ್ಲ. ಸರಕಾರಿ ರಜೆ ಹಾಗೂ ನಗರದ ಪ್ರಮುಖ ಸಂಸ್ಥೆಗಳಿಗೆ ರಜೆ ಇರುವ ಕಾರಣ ಮಕ್ಕಳು, ಕೂಲಿ ಕಾರ್ಮಿಕರು ಮನೆಯಲ್ಲೆ ಉಳಿದುಕೊಂಡಿದ್ದಾರೆ. ಪರವೂರಿನ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ತಮ್ಮ ಊರುಗಳಿಗೆ ಮರಳಿದ್ದಾರೆ. ಈ ಎಲ್ಲ ಕಾರಣಗಳಿಂಗ ಪೇಟೆಗಳಲ್ಲಿ ಜನಸಂಚಾರವಿಲ್ಲ. ಇದೆಲ್ಲ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿದೆ ಅನ್ನುವ ಅಭಿಪ್ರಾಯವನ್ನು ವ್ಯಾಪಾರಿಗಳು ವ್ಯಕ್ತಪಡಿಸಿದ್ದಾರೆ.

ವ್ಯಾಪಾರದ ಮೇಲೆ ಪರಿಣಾಮ
ಕೊರೊನಾ ವೈರಸ್‌ ಹರಡುವ ಭೀತಿ ತರಕಾರಿ, ಹಣ್ಣು ಹಂಪಲು ವ್ಯಾಪಾರದ ಮೇಲೆ ಪರಿಣಾಮ ಬೀರಿದೆ. ತರಕಾರಿಗೆ ಬೇಡಿಕೆಯಿದೆ. ಆದರೆ ಹಣ್ಣು ಹಂಪಲುಗಳಿಗೆ ಬೇಡಿಕೆ ಕಮ್ಮಿಯಾಗಿದೆ. ದರದಲ್ಲಿ ವ್ಯತ್ಯಾಸವಿಲ್ಲದೆ ಇದ್ದರೂ ಜನರು ನಗರದ ಕಡೆ ಮುಖ ಮಾಡದೆ ಇರುವುದರಿಂದ ಗ್ರಾಹಕರ ಕೊರತೆ ಉಂಟಾಗಿದೆ.
-ಸಿದ್ಧಿಕ್‌, ವ್ಯಾಪಾರಿ.ತರಕಾರಿ ಮಾರುಕಟ್ಟೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿ

ವಾರದೊಳಗೆ ಮಾರುಕಟ್ಟೆ ಸುಧಾರಿಸುವ ನಿರೀಕ್ಷೆ
ವ್ಯಾಪಾರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದೆನಿಸುವುದಿಲ್ಲ. ಎಂದಿನ ದಿನಗಳಿಗಿಂತ ಸ್ವಲ್ಪ ಕಡಿಮೆ ಆಗಿದೆ. ಬೆಲೆ ಯಥಾಸ್ಥಿತಿಯಲ್ಲಿದೆ. ವಾರದೊಳಗೆ ಮಾರುಕಟ್ಟೆ ಸುಧಾರಿಸಿಕೊಳ್ಳುವ ನಿರೀಕ್ಷೆ ಇರಿಸಿಕೊಂಡಿದ್ದೇವೆ.
-ಶೇಖರ, ಬೀದಿಬದಿ ವ್ಯಾಪಾರಿ ಉಡುಪಿ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.