ಕೊರೊನಾಗೆ ಕುಸಿದ ಷೇರು, ತೈಲ


Team Udayavani, Mar 17, 2020, 2:12 AM IST

ಕೊರೊನಾಗೆ ಕುಸಿದ ಷೇರು, ತೈಲ

ಕೊರೊನಾ ವೈರಸ್‌ ಹೊಡೆತಕ್ಕೆ ಬಾಂಬೆ ಷೇರು ಪೇಟೆ ಸಹಿತ ಜಗತ್ತಿನ ಎಲ್ಲ ಸ್ಟಾಕ್‌ಎಕ್ಸ್‌ಚೇಂಜ್‌ಗಳಲ್ಲಿ ವಹಿವಾಟು ಸೋಮವಾರ ಕುಸಿದು ಬಿದ್ದಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 29 ಡಾಲರ್‌ಗಳಿಗಿಂತ ಕಡಿಮೆಗೆ ಇಳಿದಿದೆ. ಅಮೆರಿಕದ ವಾಲ್‌ಸ್ಟ್ರೀಟ್‌ನಲ್ಲಿ ವಹಿವಾಟು ಶೇ.8.1ರಷ್ಟು ಕುಸಿದ ಹಿನ್ನೆಲೆಯಲ್ಲಿ ಕೊಂಚ ಕಾಲ ವಹಿವಾಟು ಸ್ಥಗಿತಗೊಳಿಸಿ ಮತ್ತೆ ಪುನರಾರಂಭ ಮಾಡಲಾಯಿತು.

ವಾಲ್‌ಸ್ಟ್ರೀಟ್‌ನಲ್ಲಿ ವಹಿವಾಟಿಗೆ ತಡೆ; ಪುನಾರಂಭ
ಅಮೆರಿಕದ ವಾಲ್‌ಸ್ಟ್ರೀಟ್‌ ಷೇರು ಮಾರುಕಟ್ಟೆಯಲ್ಲಿ ಸೋಮವಾರ ವಹಿವಾಟು ಶುರುವಾದರೂ ಎಸ್‌ಆ್ಯಂಡ್‌ ಪಿ ಸೂಚ್ಯಂಕ 2, 490.47ರಷ್ಟು ಕುಸಿಯಿತು. ಹೀಗಾಗಿ, 15 ನಿಮಿಷ ಗಳ ಕಾಲ ವಹಿವಾಟು ಸ್ಥಗಿತಗೊಳಿಸಿ ಮತ್ತೆ ಮುಂದುವರಿಸಲಾಯಿತು.

ಡೌ ಜಾನ್ಸ್‌ ಇಂಡಸ್ಟ್ರಿಯಲ್‌ ಇಂಡೆಕ್ಸ್‌ ಕೂಡ ಸರಾಸರಿ ಶೇ.9.7ರಷ್ಟು ಪತನಗೊಂಡಿದೆ. ಅಂದರೆ 2, 250 ಪಾಯಿಂಟ್‌ಗಳಷ್ಟು ಕುಸಿತಗೊಂಡು, 20, 935.16ಕ್ಕೆ ಕುಸಿದಿದೆ. ನಾಸ್ಡಾಕ್‌ ಕೂಡ ಶೇ.6.1ರಷ್ಟು ಅಂದರೆ 7,392.73ರಲ್ಲಿ ಸೂಚ್ಯಂಕ ಮುಕ್ತಾಯವಾಯಿತು.

ಹೂಡಿಕೆದಾರರಿಗೆ 7.62 ಕೋಟಿ ರೂ. ನಷ್ಟ
ಬಾಂಬೆ ಷೇರು ಪೇಟೆಯಲ್ಲಿ ಸಂವೇದಿ ಸೂಚ್ಯಂಕ 2,713 ಪಾಯಿಂಟ್‌ಗಳಷ್ಟು ಕುಸಿದಿದೆ. ನಿಫ್ಟಿ ಸೂಚ್ಯಂಕ 9,200 ಅಂಕ ಕುಸಿದಿದೆ. ಬಿಎಸ್‌ಇ ಸೂಚ್ಯಂಕ 2,713. 41ರಷ್ಟು ಕುಸಿದು ದಿನದ ಅಂತ್ಯಕ್ಕೆ 31,390.07ರಲ್ಲಿ ಮುಕ್ತಾಯವಾಗಿದೆ.

ನಿಫ್ಟಿ ಸೂಚ್ಯಂಕ 757.80 ಪಾಯಿಂಟ್‌ಗಳಷ್ಟು ಕುಸಿತ ಅನುಭವಿಸಿ 9, 200ರಲ್ಲಿ ಮುಕ್ತಾಯವಾಗಿದೆ. ಮಾ.12ರ ಬಳಿಕ ಇದು ಎರಡನೇ ಅತ್ಯಂತ ದೊಡ್ಡ ಕುಸಿತವಾಗಿದೆ. ಬಿಎಸ್‌ಇ ಸೂಚ್ಯಂಕ ಕುಸಿತಗೊಂಡ ಕಾರಣ ಹೂಡಿಕೆದಾರರಿಗೆ 7.62 ಲಕ್ಷ ಕೋಟಿ ರೂ. ನಷ್ಟವಾಗಿದೆ. ಎಲ್ಲ ಪ್ರಮುಖ ಕಂಪೆನಿಗಳ ಷೇರುಗಳಿಗೆ ಬೇಡಿಕೆ ವ್ಯಕ್ತವಾಗಲಿಲ್ಲ.

ಕಚ್ಚಾ ತೈಲ ಬೆಲೆ ಕುಸಿತ
ತೈಲ ವಹಿವಾಟು ಪ್ರಧಾನವಾಗಿರುವ ಕೊಲ್ಲಿ ರಾಷ್ಟ್ರಗಳಲ್ಲಿ ಕೂಡ ಷೇರು ಪೇಟೆ ಮತ್ತು ಕಚ್ಚಾ ತೈಲ ಬೆಲೆ ಮುಗ್ಗರಿಸಿದೆ. ಕೆಲವು ದಿನಗಳ ಹಿಂದಷ್ಟೇ ರಷ್ಯಾ ಮತ್ತು ಸೌದಿ ಅರೇಬಿಯಾ ನಡುವಿನ ದರ ಸಮರದಿಂದ 29 ವರ್ಷಗಳಷ್ಟು ಹಿಂದಿನ ಪ್ರಮಾಣಕ್ಕೆ ಕುಸಿದು, ಚೇತರಿಕೆ ಕಂಡಿತ್ತು. ಅಬುದಾಭಿ ಮತ್ತು ದುಬಾೖ ಷೇರುಪೇಟೆಗಳು ಕ್ರಮವಾಗಿ ಶೇ.7.8 ಮತ್ತು ಶೇ.6.2ರಷ್ಟು ಇಳಿಕೆ ಕಂಡವು. ಕಚ್ಚಾ ತೈಲ ಬೆಲೆ ಕೂಡ ಕುಸಿದಿದೆ.

ವೆಸ್ಟ್‌ ಟೆಕ್ಸಸ್‌ ಇಂಟರ್‌ ಮೀಡಿಯೇಟ್‌ ಕಚ್ಚಾ ತೈಲ ಶೇ.10ರಷ್ಟು ಅಂದರೆ ಪ್ರತಿ ಬ್ಯಾರೆಲ್‌ಗೆ 28.57 ಡಾಲರ್‌ಗೆ ಕುಸಿದಿದೆ. ಬ್ರೆಂಟ್‌ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ ಶೇ.12.1 ಅಂದರೆ 29. 74 ಡಾಲರ್‌ಗೆ ಇಳಿಕೆಯಾಗಿದೆ. ಕೊರೊನಾ ಹಾವಳಿ ಮತ್ತಷ್ಟು ಮುಂದುವರಿದರೆ ಕಚ್ಚಾ ತೈಲ ಬೇಡಿಕೆ ಮತ್ತು ಪೂರೈಕೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗ ಲಿದೆ. ಈ ಬಗ್ಗೆ ಎಚ್ಚರಿಕೆ ನೀಡಿರುವ ಬ್ರಿಟಿಷ್‌ ಪೆಟ್ರೋಲಿಯಂ (ಬಿ.ಪಿ.)ಯ ಮುಖ್ಯ ಹಣಕಾಸು ಅಧಿಕಾರಿ ಬ್ರೈನ್‌ ಗಿಲ್ವರಿ 2020ರಲ್ಲಿ ತೈಲೋದ್ದಿಮೆಯ ಕ್ಷೇತ್ರಕ್ಕೆ ಭಾರಿ ಸವಾಲು ಎದುರಾಗಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.