ಕಾಡುಪಾಲಾದ ಸಿದ್ದಾಪುರದ ಹಳೇ ಠಾಣೆ : ವಸತಿಗೃಹ ನಿರ್ಮಿಸಲು ಒತ್ತಾಯ


Team Udayavani, Mar 17, 2020, 5:25 AM IST

ಕಾಡುಪಾಲಾದ ಸಿದ್ದಾಪುರದ ಹಳೇ ಠಾಣೆ : ವಸತಿಗೃಹ ನಿರ್ಮಿಸಲು ಒತ್ತಾಯ

ಮಡಿಕೇರಿ : ಸರ್ಕಾರದ ಚಿಂತನೆಗಳೇ ಹೀಗೆ, ಹೊಸ ಯೋಜನೆಯೊಂದು ಸಾಕಾರಗೊಂಡರೆ ಹಳೆಯ ವ್ಯವಸ್ಥೆಗೆ ಎಳ್ಳುನೀರು ಬಿಡುವುದೇ ಹೆಚ್ಚು. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಟ್ಟಡಗಳು ಮತ್ತು ಅವುಗಳಿರುವ ಪ್ರದೇಶದ ಗತಿ ಕೂಡ ಇದೇ ಆಗಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಸಿದ್ದಾಪುರದ ಹೃದಯ ಭಾಗದಲ್ಲಿದ್ದ ಹಳೆಯ ಪೊಲೀಸ್‌ ಠಾಣೆಯ ಕಟ್ಟಡ ಇದೀಗ ಅನಾಥವಾಗಿದೆ. ಬೀಗ ಜಡಿದ ಕಟ್ಟಡದ ಸುತ್ತ ಕುರುಚಲು ಗಿಡಗಳು ಬೆಳೆಯಲಾರಂಬಿಸಿದ್ದು, ಕಟ್ಟಡ ಮತ್ತಷ್ಟು ಶಿಥಿಲಾವಸ್ಥೆಗೆ ತಲುಪಿದೆ. ಕಟ್ಟಡದೊಳಗೆ ಹಾವು, ಹೆಗ್ಗಣಗಳು ಓಡಾಡುವುದನ್ನು ಸ್ಥಳೀಯರು ನೋಡಿದ್ದಾರೆ. ಮಳೆಗಾಲದಲ್ಲಿ ಹಳೆಯ ಕಟ್ಟಡ ಸಂಪೂರ್ಣವಾಗಿ ಹಾನಿಗೀಡಾಗುವ ಮುನ್ಸೂಚನೆಯನ್ನು ನೀಡಿದೆ.

ಈ ಕಟ್ಟಡದಲ್ಲಿ ಪೊಲೀಸ್‌ ಠಾಣೆ ಕಾರ್ಯ ನಿರ್ವಹಿಸುತ್ತಿದ್ದಾಗ ಸಿದ್ದಾಪುರ ಪಟ್ಟಣದ ಸುತ್ತಮುತ್ತಲ ಚಿತ್ರಣ ಪೊಲೀಸರಿಗೆ ಸುಲಭವಾಗಿ ತಿಳಿದು ಬಿಡುತ್ತಿತ್ತು. ಅಲ್ಲದೆ ಅಪರಾಧ ಪ್ರಕರಣಗಳನ್ನು ತಕ್ಷಣ ನಿಯಂತ್ರಿಸುವುದಕ್ಕೂ ಸಹಕಾರಿಯಾಗಿತ್ತು. ಆದರೆ ಈಗ ಎಂ.ಜಿ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಪೊಲೀಸ್‌ ಇಲಾಖೆಯ ನೂತನ ಕಟ್ಟಡಕ್ಕೆ ಪೊಲೀಸ್‌ ಠಾಣೆ ಸ್ಥಳಾಂತರಗೊಂಡಿದ್ದು, ಹಳೆಯ ಠಾಣೆಯ ಕಟ್ಟಡ ಕಾಡು ಪಾಲಾಗುವ ಸ್ಥಿತಿಯಲ್ಲಿದೆ.

ಸಿದ್ದಾಪುರ ಮತ್ತು ನೆಲ್ಯಹುದಿಕೇರಿ ಗ್ರಾಮಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದು, ಅಪರಾಧ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ. ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಗೆ ಸಿದ್ದಾಪುರ, ಪಾಲಿಬೆಟ್ಟ, ಚೆನ್ನಯ್ಯನಕೋಟೆ, ಕಳತ್ಮಾಡು, ಮಾಲ್ದಾರೆ, ಕೊಂಡಂಗೇರಿ, ಹಾಲುಗುಂದ, ಅರೆಕಾಡು, ವಾಲೂ°ರು-ತ್ಯಾಗತ್ತೂರು ಗ್ರಾಮಗಳು ಒಳ ಪಡುತ್ತವೆ. ಹೆಚ್ಚಿನ ಗ್ರಾಮಗಳು ಮತ್ತು ಹೆಚ್ಚಿನ ಜನಸಂಖ್ಯೆ ಇರುವುದರಿಂದ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್‌ ಸಿಬಂದಿ ಅಗತ್ಯಇದೆ.

ಈ ಪ್ರದೇಶದಲ್ಲಿ ಅಶಾಂತಿಯ ವಾತಾವರಣ ಮೂಡಿದಾಗ ಹೆಚ್ಚಿನ ಸಂಖ್ಯೆಯ ಪೊಲೀಸ್‌ ಸಿಬಂದಿ ನಿಯೋಜಿಸುವುದು ವಾಡಿಕೆ. ಹೀಗೆ ನಿಯೋಜನೆಗೊಳ್ಳುವ ಜಿಲ್ಲಾ ಸಶಸ್ತ್ರ ಪಡೆಯ ಸಿಬಂದಿಗೆ ಸಿದ್ದಾಪುರದಲ್ಲಿ ತಂಗಲು ಸೂಕ್ತ ವ್ಯವಸ್ಥೆಗಳು ಇಲ್ಲದ ಪರಿಸ್ಥಿತಿ ಹಿಂದಿನಿಂದಲೂ ಕಾಡುತ್ತಿದೆ. ಅಲ್ಲದೆ ನಿತ್ಯ ಠಾಣಾ ಕರ್ತವ್ಯಕ್ಕೆ ಹಾಜರಾಗುವ ಪೊಲೀಸ್‌ ಸಿಬಂದಿಗೂ ವಸತಿ ವ್ಯವಸ್ಥೆಯ ಕೊರತೆ ಇದೆ. ಆದ್ದರಿಂದ ದಕ್ಷ ಅಧಿಕಾರಿ ಎನಿಸಿಕೊಂಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಳೆಯ ಪೊಲೀಸ್‌ ಠಾಣೆಯ ಕಟ್ಟಡವನ್ನು ಮತ್ತು ಅದು ಇರುವ ಪ್ರದೇಶವನ್ನು ಸದ್ಬಳಕೆ ಮಾಡಿಕೊಳ್ಳಲು ಯೋಜನೆ ರೂಪಿಸಬೇಕಾಗಿದೆ.

ಪಟ್ಟಣದ ಹೃದಯ ಭಾಗದಲ್ಲೇ ಬೆಲೆ ಬಾಳುವ ಜಾಗವಿರುವುದರಿಂದ ಪೊಲೀಸ್‌ ಸಿಬಂದಿಗಾಗಿ ವಸತಿಗೃಹವನ್ನು ನಿರ್ಮಿಸುವುದು ಸೂಕ್ತ ಎನ್ನುವ ಅಭಿಪ್ರಾಯ ಸ್ಥಳೀಯರಿಂದ ಕೇಳಿ ಬಂದಿದೆ. ಅನೇಕ ಮಂದಿ ಅವಿವಾಹಿತ ಯುವ ಪೊಲೀಸ್‌ ಸಿಬಂದಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಇವರು ತಂಗಲು ಅತಿಥಿಗೃಹ ಸಹಕಾರಿಯಾಗಲಿದೆ. ಆದ್ದರಿಂದ ಸರಕಾರದ ಭೂಮಿ ಒತ್ತುವರಿಯಾಗುವುದನ್ನು ಮತ್ತು ಹಳೆಯ ಕಟ್ಟಡ ಹಾನಿಗೀಡಾಗುವುದನ್ನು ತಪ್ಪಿಸಲು ಸುಸಜ್ಜಿತ ಹಾಗೂ ಎಲ್ಲಾ ಸೌಲಭ್ಯಗಳಿರುವ ವಸತಿಗೃಹದ ಯೋಜನೆಗೆ ಹಿರಿಯ ಅಧಿಕಾರಿಗಳು ಮುಂದಾಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹೊಸ ಯೋಜನೆಯೊಂದು ಸಾಕಾರಗೊಂಡಾಗ ಹಳೆಯ ವ್ಯವಸ್ಥೆಯನ್ನು ನಿರ್ಲಕ್ಷಿಸುವುದು ಸರಿಯಲ್ಲವೆಂದು ಅಭಿಪ್ರಾಯಪಟ್ಟಿರುವ ಹಿರಿಯ ನಾಗರೀಕರು, ಪೊಲೀಸ್‌ ವರಿಷ್ಠಾಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ನಡೆಸಿ ವಸತಿಗೃಹದ ಯೋಜನೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.