ತಾಜ್ ಮಹಲ್ ಗೂ ತಟ್ಟಿದ ಕೊರೊನಾ ಭೀತಿ : ಮಾರ್ಚ್ 31 ರ ವರೆಗೆ ಪ್ರವಾಸಿಗರಿಗೆ ನಿರ್ಬಂಧ
Team Udayavani, Mar 17, 2020, 12:40 PM IST
ನವದಹೆಲಿ : ವಿಶ್ವದೆಲ್ಲೆಡೆ ಹರಡಿರುವ ಕೊರೊನಾ ವೃರಸ್ ಭೀತಿಯನ್ನು ತಡೆಗಟ್ಟಲು ಭಾರತ ಈಗಾಗಲೇ ಸರ್ವ ಸನ್ನದ್ಧವಾಗಿ ತನ್ನ ಎಲ್ಲಾ ಪ್ರಯತ್ನವನ್ನು ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಮಾಡುತ್ತಿದೆ. ಇದೀಗ ವಿಶ್ವ ಪಾರಂಪರಿಕ ಪ್ರವಾಸಿ ತಾಣವಾದ ತಾಜ್ ಮಹಲ್ ನ್ನು ಮಾರ್ಚ್ 31 ವರೆಗೆ ಮುಚ್ಚಲು ನಿರ್ಧರಿಸಿದೆ.
ರಾಷ್ಟ್ರ ರಾಜಧಾನಿಯಾಗಿರುವ ದೆಹಲಿಯಲ್ಲಿ ಕೋವಿಡ್ 19 ಭೀತಿಯಿಂದಾಗಿ ಮುಂಜಾಗ್ರತ ಕ್ರಮವಾಗಿ ಶಾಲಾ- ಕಾಲೇಜು, ಚಿತ್ರ ಮಂದಿರ ಹಾಗೂ ಕೆಲ ಮಾಲ್ ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಸದ್ಯ ಪ್ರವಾಸೋದ್ಯಮ ಸಚಿವಾಲಯದ ಆದೇಶದ ಮೇರೆಗೆ ಯುನೆಸ್ಕೋ ಮಾನ್ಯತೆಯ ವಿಶ್ವಪಾರಂಪರಿಕ ಪ್ರವಾಸಿ ತಾಣವಾಗಿರುವ ತಾಜ್ ಮಹಲ್ ನ್ನು ಮಾರ್ಚ್ 31 ವರೆಗೆ ಮುಚ್ಚುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಆದೇಶ ಹೊರಡಿಸಿದೆ.
ಕೊರೊನಾ ವರೈಸ್ ಭೀತಿ ವಿಶ್ವದೆಲ್ಲೆಡೆ ಹರಡಿರವುದರಿಂದ, ಭಾರತದಲ್ಲಿ ಇದರ ಸೋಂಕನ್ನು ಸಾಧ್ಯವಾದಷ್ಟು ಮಟ್ಟಿಗೆ ನಿಯಂತ್ರಣದಲ್ಲಿಡಲು ಸರ್ಕಾರ ಆಯಾ ರಾಜ್ಯಗಳಿಗೆ ನೀತಿ- ನಿಯಮಗಳನ್ನು ರೂಢಿಸಿಕೊಳ್ಳಲು ಸೂಚಿಸಿದೆ. ಈ ನಿಟ್ಟಿನಲ್ಲಿ ದೇಶದೆಲ್ಲೆಡೆ ಆಯಾ ರಾಜ್ಯಗಳಲ್ಲಿ ಸೋಂಕು ಹೆಚ್ಚಾದ ಕಡೆಗಳಲ್ಲಿ ಕಟ್ಟೆಚ್ಚೆರ ವಹಿಸಲಾಗಿದ್ದು, ಇದರ ಪರಿಣಾಮವಾಗಿ ರಾಷ್ಟ್ರ ರಾಜಧಾನಿಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ವಸ್ತು ಸಂಗ್ರಹಾಲಯವನ್ನು ಮಾರ್ಚ್ 31 ರ ವರಗೆ ಮುಚ್ಚಲು ಪ್ರವಾಸೋದ್ಯಮ ಸಚಿವಾಲಯ ಆದೇಶವನ್ನು ನೀಡಿದೆ.
ವಿಶ್ವದಾದ್ಯಂತ ಕೊರೊನಾ ಸೋಂಕಿಗೆ 6500 ಕ್ಕೂ ಹೆಚ್ಚು ಮಂದಿ ಮೃತ ಪಟ್ಟಿದ್ದರೆ, 1,68,000 ಮಂದಿಗೆ ಸೋಂಕು ತಗುಲಿದೆ. ಭಾರತದಲ್ಲಿ ಇದುವರೆಗೆ 125 ಮಂದಿಗೆ ಸೋಂಕು ತಗುಲಿದ್ದು, 3 ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
SSLC Result: ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ
ಆಟೋ ಚಾಲಕಿಯರ ಬ್ಯಾಂಕ್ ಸಾಲ ತೀರಿಸಿ ರಿಯಲ್ ಲೈಫ್ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್
Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ