ಕೊರೊನಾ ಭೀತಿ; ಮೆಕ್ಕೆಜೋಳ ಬೇಡಿಕೆ ಕುಸಿತ!


Team Udayavani, Mar 17, 2020, 1:08 PM IST

ಕೊರೊನಾ ಭೀತಿ; ಮೆಕ್ಕೆಜೋಳ ಬೇಡಿಕೆ ಕುಸಿತ!

ಸಾಂದರ್ಭಿಕ ಚಿತ್ರ

ಮಾಯಕೊಂಡ: ಮಾಯಕೊಂಡ ಮತ್ತು ಆನಗೋಡು ಹೋಬಳಿಯ ರೈತರಿಗೆ ಮೆಕ್ಕೆಜೋಳ ಬೆಳೆಗಾರರಿಗೆ ಕೊರೊನಾ ಬಿಸಿ ತಟ್ಟಿದೆ. ಕೊರೊನಾ ಬಿಸಿ ಕುಕ್ಕುಟೋದ್ಯಮದ ಮೇಲೆ ಪರಿಣಾಮ ಬೀರಿರುವ ಕಾರಣಕ್ಕೆ ಕೋಳಿಯ ಪ್ರಮುಖ ಆಹಾರ ಧಾನ್ಯವಾದ ಮೆಕ್ಕೆಜೋಳದ ಬೇಡಿಕೆ ಕುಸಿದಿದ್ದು, ದರ ದಿನದಿಂದ ದಿನಕ್ಕೆ ಕುಸಿಯುತ್ತಿದೆ.  ಇದರಿಂದ ಕಳೆದ ಮುಂಗಾರಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ಮಾರಾಟ ಮಾಡದೆ ರೈತರು ಕಣಗಳಲ್ಲಿ ಸಂಗ್ರಹಣೆ ಮಾಡಿಟ್ಟುಕೊಂಡ ಪರಿಣಾಮ ಬೆಳೆಗಾರರು ಕಂಗಾಲಾಗಿದ್ದಾರೆ.

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಕೊರೊನಾ ಭೀತಿಗಿಂತ ಮೊದಲು ಮೆಕ್ಕೆಜೋಳದ ದರ 1900-2000 ರೂ. ಗಡಿ ದಾಟಿತ್ತು. 2000 ರೂ. ದರ ನಿರೀಕ್ಷೆ ಮಾಡಿದ್ದ ರೈತರುಗಳು ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಬಂಗಾರದ ಬೆಲೆ ಸಿಕ್ಕಿತ್ತು ಎಂದು ಸಂತಸಗೊಂಡಿದ್ದರು. ಈಗ ದಿಢೀರ್‌ ದರ ಕುಸಿದು ಸಾವಿರದಿಂದ ಸಾವಿರದ ಇನ್ನೂರು ರೂ.ಗೆ ವ್ಯಾಪಾರ ನಡೆಯುತ್ತಿರುವುದರಿಂದ ರೈತರು ಇನ್ನು ಬೆಲೆ ಕುಸಿಯಬಹುದು ಎಂಬ ಅತಂಕದಲ್ಲಿದ್ದಾರೆ.

ಮುಂಗಾರಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ತೆನೆ ಸಮೇತ ಕಣಗಳಲ್ಲಿ ಸಂಗ್ರಹಿಸಿಡುವ ರೈತರು ಜನವರಿ ತಿಂಗಳ ನಂತರ ಮಾರಾಟ ಮಾಡುವುದು ವಾಡಿಕೆ. ಮೆಕ್ಕೆಜೋಳವನ್ನು ಜನವರಿ ಬಳಿಕ ಮಾರಾಟ ಮಾಡಿ ಹೆಚ್ಚಿನ ಆದಾಯ ಗಳಿಸುತ್ತಿದ್ದ ರೈತರಿಗೆ ಇದೀಗ ಕೊರೊನಾ ವೈರಸ್‌ ರೈತರ ಮಗ್ಗಲ ಮುಳ್ಳು ಮುರಿಯುತ್ತಿದೆ.

ತತ್ತರಿಸಿದ ಪೌಲ್ಟ್ರಿ ಉದ್ಯಮ ಕೋಳಿ ತಿಂದರೆ ಕೊರೊನಾ ವೈರಸ್‌ ಬರುತ್ತದೆ ಎಂಬ ವದಂತಿಗಳಿಂದಾಗಿ ಉದ್ಯಮ ತಲ್ಲಣಿಸಿದ ಕಾರಣಕ್ಕೆ ಕೋಳಿಗಳ ಪ್ರಮುಖ ಆಹಾರ ಧಾನ್ಯ ಮೆಕ್ಕೆಜೋಳವನ್ನು ಖರೀದಿ ಮಾಡಲು ಖರೀದಿದಾರರು ಮುಂದೆ ಬಾರದ ಕಾರಣಕ್ಕೆ ಮೆಕ್ಕೆಜೋಳ ದರ ಕೂಡ ದಿನೇ ದಿನೇ ಕುಸಿತಗೊಳ್ಳುತ್ತಿದೆ. ಪ್ರತಿ ಕ್ವಿಂಟಲ್‌ ಮೆಕ್ಕೆಜೋಳ ದರ 1000-1200 ರೂ.ಗೆ ಖರೀದಿ ನಡೆಯುತ್ತಿದೆ. ಇನ್ನೂ ದರ ಕುಸಿಯುವ ಸಾಧ್ಯತೆ ದಟ್ಟವಾಗಿದೆ ಎಂದು ಹೋಬಳಿಯ ರೈತರು ಸರ್ಕಾರದ ಮೆಕ್ಕೆಜೋಳ ಸಂರಕ್ಷಣ ಘಟಕಗಳಲ್ಲಿ ಸಂಗ್ರಹ ಮಾಡುತ್ತಿದ್ದಾರೆ. ಇನ್ನೂ ಕೆಲವು ರೈತರು ವರ್ತಕರಿಗೆ ತಿಂಗಳ ನಂತರ (ಸಾಲ) ನಂತರ ಹಣ ಪಡೆದುಕೊಳ್ಳಲು 1400 -1600 ರೂ.ಗೆ ಮಾರಟ ಮಾಡುತ್ತಿರುವುದು ಸಾಮಾನ್ಯವಾಗಿ ಹೋಬಳಿಯ ಗ್ರಾಮಗಳಲ್ಲಿ ಕಂಡು ಬರುತ್ತದೆ. ದಾವಣಗೆರೆ ತಾಲೂಕಿನ ಮಾಯಕೊಂಡ, ಆನಗೋಡು ಹೋಬಳಿಗಳಲ್ಲಿ ಶೇ.40% ರಷ್ಟು ಮೆಕ್ಕೆಜೋಳ ಇದುವರೆಗೆ ಮಾರಾಟವಾಗಿದೆ. ಇನ್ನೂ ಶೇ. 60%ರಷ್ಟು ರೈತರು ಉತ್ತಮ ಬೆಲೆಗಾಗಿ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ. ಕೊರೊನಾ ವೈರಸ್‌ನಿಂದ ಹಠಾತ್‌ ಬೆಲೆ ಇಳಿಕೆ ಕಂಡಿರುವುದರಿಂದ ರೈತರನ್ನು ಚಿಂತೆಗೀಡು ಮಾಡಿದೆ.

ಒಂದು ಎಕ್ಕರೆ ಮೆಕ್ಕೆಜೋಳ ಬೆಳೆಯಲು 20 ರಿಂದ 25 ಸಾವಿರ ರೂ. ಖರ್ಚು ತಗಲುತ್ತದೆ. ಬಿತ್ತನೆ ಬೀಜ ಪ್ಯಾಕೆಟ್‌ ಸುಮಾರು ಸಾವಿರದಿಂದ ಎರಡು ಸಾವಿರ ರೂಪಾಯಿವರೆಗೂ ಬೆಲೆ ಇದೆ. ಇಂತಹ ಸಂದಿಗ್ಧ ಕಾಲದಲ್ಲಿ ಸರ್ಕಾರ ಬೆಂಬಲ ಬೆಲೆ ಘೋಷಿಸಿ 2500 ದರ ನಿಗದಿಪಡಿಸಿ ಸಕಾಲದಲ್ಲಿ ಖರೀದಿಸಲು ಖರೀದಿ ಕೇಂದ್ರ ತೆರೆಯಬೇಕು. ಖರೀದಿ ಕೇಂದ್ರ ತೆರೆದರೆ ರೈತರನ್ನು ಸಂಕಷ್ಟದಿಂದ ದೂರ ಮಾಡಬಹುದು ಎಂಬುದು ರೈತಪರ ಸಂಘಟನೆಗಳು ಮತ್ತು ಈ ಭಾಗದ ರೈತರ ಒತ್ತಾಯವಾಗಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಬರಗಾಲದಿಂದ ತತ್ತರಿಸಿ ಹೋಗಿದ್ದ ರೈತರಿಗೆ ಕೊರೊನಾದಿಂದ ಮೆಕ್ಕೆಜೋಳದ ಬೆಲೆ ಕುಸಿತ ಒಂದು ಕಡೆ ಅದರೆ, ಕಣದಲ್ಲಿ ಸಂಗ್ರಹಣೆ ಮಾಡಿದ ಜೋಳದ ರಾಶಿ ಬಿಸಿಲಿನ ತಾಪಮಾನದಿಂದ ತೇವಾಂಶ ಕಳೆದುಕೊಂಡು ತೂಕ ಕಡಿಮೆ ಅಗಿರುವುದು. ನಾನಾ ಸಂಕಷ್ಟಗಳಿಂದ ನೊಂದಿರುವ ರೈತರ ಕಷ್ಟಕ್ಕೆ ಸರ್ಕಾರ ನೆರವಿಗೆ ಬಾರದಿರುವುದು ವಿಪರ್ಯಸವೇ ಸರಿ.

 

-ಶಶಿಧರ್‌ ಶೇಷಗಿರಿ

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.