ಭೂ ಸುಧಾರಣೆ ಕಾಯ್ದೆ ರದ್ದು ಕೈಬಿಡಲು ಆಗ್ರಹ


Team Udayavani, Mar 18, 2020, 3:00 AM IST

bhoosudha

ಕೋಲಾರ: ಸರ್ಕಾರ ಭೂ ಸುಧಾರಣೆ ಕಾಯ್ದೆಯ ಸೆಕ್ಷನ್‌ 79 ಎ ಮತ್ತು ಬಿ ಯನ್ನು ತೆಗೆದು ಹಾಕಲು ಅಧಿವೇಶನದಲ್ಲಿ ಮಂಡಿಸುವುದನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಸದಸ್ಯರು ತಹಶೀಲ್ದಾರ್‌ರಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಮಾತನಾಡಿ, ಕೃಷಿ ಭೂಮಿ ರೈತರಲ್ಲಿಯೇ ಉಳಿಯಬೇಕು. ಬಂಡವಾಳದಾರರು, ಉದ್ಯಮಿಗಳು, ವ್ಯಾಪಾರಸ್ಥರು, ರೈತರಲ್ಲದವರು, ಭೂಮಿ ಖರೀದಿ ಮಾಡಬಾರದು ಎಂದು ದೇವರಾಜ ಅರಸು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 2 ಲಕ್ಷ ರೂ.ಗಳಿಗಿಂಂತ ಹೆಚ್ಚು ಆದಾಯ ಇರುವವರು ಕೃಷಿ ಭೂಮಿ ಖರೀದಿಸಬಾರದು ಎಂದು ಭೂ ಸುಧಾರಣೆ ಜಾರಿಗೆ ತಂದರು. ನಂತರ ಸಿದ್ಧರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 2 ಲಕ್ಷ ಆದಾಯ ಮಿತಿಯನ್ನು 25 ಲಕ್ಷಕ್ಕೆ ಏರಿಕೆ ಮಾಡಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದರು ಎಂದು ಹೇಳಿದರು.

ಈಗ ರಾಜ್ಯ ಸರ್ಕಾರ ಉದ್ಯಮಿಗಳು, ಹೆಚ್ಚು ಹೂಡಿಕೆ ಮಾಡುವ ಉದ್ದೇಶದಿಂದ ಭೂಮಿ ಖರೀದಿಯನ್ನು ಸರಳ ಮಾಡಲು ಭೂ ಸುಧಾರಣೆ ಕಾಯ್ದೆಯ ಸೆಕ್ಷನ್‌ 79 ಎ ಮತ್ತು ಬಿ ಯನ್ನು ಕಾಯ್ದೆಯಿಂದ ತೆಗೆದು ಹಾಕಲು ನಿರ್ಧರಿಸಿರುವುದಾಗಿ ಹಾಗೂ ಮುಂದಿನ ಅಧಿ ವೇಶನದಲ್ಲಿ ಮಸೂದೆಯನ್ನು ಮಂಡಿಸುವುದಾಗಿ ಹೇಳಿರುವುದು ರೈತ ಸಮುದಾಯಕ್ಕೆ ಬಿಜೆಪಿ ಸರ್ಕಾರ ಮಾಡುತ್ತಿರುವ ದ್ರೋಹವಾಗಿದೆ ಎಂದು ಆರೋಪಿಸಿದರು.

ಈಗಾಗಲೇ ನೀರಾವರಿ, ರಸ್ತೆ ನಿರ್ಮಾಣ, ರೈಲು ಮಾರ್ಗ, ನಗರ ಪ್ರದೇಶಗಳಿಗೆ ಹಾಗೂ ಕೈಗಾರಿಕೆ ಪ್ರದೇಶಗಳಿಗೆ ಬಹಳಷ್ಟು ಕೃಷಿ ಭೂಮಿ ಬಳಸಲಾಗಿದೆ. ದಿನೇ ದಿನೆ ಕೃಷಿ ಭೂಮಿ ಕಡಿಮೆಯಾಗುತ್ತಿರುತ್ತದೆ. ಈ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವುದರಿಂದ ರೈತರಿಗೆ ಅಲ್ಪಕಾಲದಲ್ಲಿ ಸ್ವಲ್ಪ ಹಣ ಹೆಚ್ಚಿಗೆ ಸಿಗುವುದೇ ವಿನಾ ರೈತರು ಕೃಷಿಯಿಂದ ಶಾಶ್ವತವಾಗಿ ದೂರವಾಗುತ್ತಾರೆ. ರೈತ ಕುಟುಂಬಗಳು ಬೀದಿಗೆ ಬರುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಸ್ತೇನಹಳ್ಳಿ ನಾರಾಯಣಸ್ವಾಮಿ, ಜಿಲ್ಲಾ ಮುಖಂಡ ಹೊಳಲಿ ಚಂದ್ರಪ್ಪ, ಜಿಲ್ಲಾ ಕಾರ್ಯದರ್ಶಿ ವೀರಾಪುರ ಮಂಜುನಾಥ್‌, ಕೋಲಾರ ತಾಲೂಕು ಅಧ್ಯಕ್ಷ ದಿನ್ನೇಹೊಸಹಳ್ಳಿ ಎಂ.ರಮೇಶ್‌, ತಾಲೂಕು ಉಪಾಧ್ಯಕ್ಷ ಪೆಮ್ಮಶೆಟ್ಟಹಳ್ಳಿ ವಿ.ವೆಂಕಟರಾಮೇಗೌಡ, ತಾಲೂಕು ಕಾರ್ಯದರ್ಶಿ ವಾನರಾಶಿ ಗೋಪಾಲ್‌, ತಾಲೂಕು ಮುಖಂಡರುಗಳಾದ ಕ್ಯಾಲನೂರು ವೆಂಕಟೇಶಪ್ಪ, ವಿ.ಮುನಿವೆಂಕಟಪ್ಪ, ಖಾಜಿಕಲ್ಲಹಳ್ಳಿ ಚೌಡಪ್ಪ, ಎನ್‌.ವೆಂಕಟೇಶಪ್ಪ, ದೊಡ್ನಹಳ್ಳಿ ಕೃಷ್ಣಪ್ಪ, ಚೌಡರೆಡ್ಡಿ, ವಿ. ಶ್ರೀನಿವಾಸ್‌, ಎನ್‌.ವಿ ವೆಂಕಟರಾಮಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.