ಬಿಡಿಎ ತೆಕ್ಕೆಗೆ 40 ಎಕರೆಗೂ ಅಧಿಕ ಆಸ್ತಿ


Team Udayavani, Mar 18, 2020, 3:08 AM IST

bda-tekke

ಬೆಂಗಳೂರು: ತನ್ನ ಸ್ವತ್ತಿನಲ್ಲಿ ನಿರ್ಮಿಸಿರುವ ಅನಧಿಕೃತ ಕಟ್ಟಡ, ಶೆಡ್‌ಗಳ ತೆರವು ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಡೆಸುತ್ತಿದ್ದು, ಮೂರು ವರ್ಷದಲ್ಲಿ ವಿವಿಧ ಕಡೆ ನೂರಾರು ಕೋಟಿ ರೂ. ಮೌಲ್ಯದ 40 ಎಕರೆಗೂ ಅಧಿಕ ಆಸ್ತಿ ವಶಕ್ಕೆ ಪಡೆದಿದೆ.

ನಗರದ ಹಲವೆಡೆ ಪ್ರಾಧಿಕಾರದ ಆಸ್ತಿಗಳಿದ್ದು, ಕೆಲ ಆಸ್ತಿಗಳು ಒತ್ತುವರಿಯಾಗಿವೆ. ಬಿಡಿಎ ಪೊಲೀಸ್‌ ದಳ ಸಹಕಾರದಲ್ಲಿ ಅಧಿಕಾರಿಗಳು ತೆರವು ಕಾರ್ಯ ನಡೆಸುತ್ತಿದ್ದು, 2017-18ನೇ ಸಾಲಿನಲ್ಲಿ ವಿವಿಧ ಬಡಾವಣೆಗಳಲ್ಲಿ 24.10 ಎಕರೆ, 2018-19ನೇ ಸಾಲಿನಲ್ಲಿ 12.24 ಎಕರೆ, 2019-20ನೇ ಸಾಲಿನಲ್ಲಿ 5 ಎಕರೆಗೂ ಅಧಿಕ ಜಾಗವನ್ನು ತೆರವುಗೊಳಿಸಿ ಪ್ರಾಧಿಕಾರದ ಸುಪರ್ದಿಗೆ ಪಡೆಯಲಾಗಿದೆ.

2017-18ನೇ ಸಾಲಿನಲ್ಲಿ ಎಚ್‌ಬಿಆರ್‌1ನೇ ಹಂತ, 5ನೇ ಬ್ಲಾಕ್‌ ಬಡಾವಣೆ, ವಿಶ್ವೇಶ್ವರಯ್ಯ ಬಡಾವಣೆ, ಬಿಟಿಎಂ 2ನೇ ಹಂತ, ಎಚ್‌ಎಸ್‌ಆರ್‌ 6ನೇ ಸೆಕ್ಟರ್‌, ಎಚ್‌ಎಸ್‌ಆರ್‌ 7ನೇ ಸೆಕ್ಟರ್‌, ಎಂಆರ್‌ಸಿಆರ್‌ ಬಡಾವಣೆ, ಬಿಟಿಎಂ ಲೇಔಟ್‌, ಎಚ್‌ಎಸ್‌ಆರ್‌ ಲೇಔಟ್‌, ಬನಶಂಕರಿ 6ನೇ ಹಂತ, ಸಾದರಮಂಗಲ ಮತ್ತು ಹೂಡಿ , ಜೆ.ಪಿ.ನಗರ 2ನೇ ಫೇಸ್‌ ಬಡಾವಣೆ, ಜ್ಞಾನಭಾರತಿ ಬಡಾವಣೆ, ಅರ್ಕಾವತಿ ಬಡಾವಣೆ , ರಾಜೀವ್‌ ಗಾಂಧಿ ಬಡಾವಣೆಗಳಲ್ಲಿ ಒತ್ತುವರಿಯಾದ ಹಲವು ಜಾಗವನ್ನು ಬಿಡಿಎ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

2018-19ರ ಸಾಲಿನಲ್ಲಿ ಎಚ್‌.ಎಸ್‌.ಆರ್‌ 1ನೇ ಸೆಕ್ಟರ್‌, ಸರ್‌.ಎಂ.ವಿಶ್ವೇಶ್ವರಯ್ಯ ಬಡಾವಣೆ, ಚಂದ್ರಾ ಬಡಾವಣೆ, ಬನಶಂಕರಿ 3ನೇ ಹಂತ , ಕೋರಮಂಗಲ 4ನೇ ಬ್ಲಾಕ್‌, ಎಸ್‌ಎಂವಿಎಲ್‌ 7ನೇ ಬ್ಲಾಕ್‌ಗಳಲ್ಲಿ ಒತ್ತುವರಿಯಾದ ಕೆಲವು ಜಾಗವನ್ನು ತೆರವುಗೊಳಿಸಿದ್ದಾರೆ.

2019-20ನೇ ಸಾಲಿನಲ್ಲಿ ರಾಜಾಜಿನಗರ ಕೈಗಾರಿಕಾ ಬಡಾವಣೆಯ (ಸಾಣೆಗುರುವನಹಳ್ಳಿ ಗ್ರಾಮ) 10 ಕೋಟಿ ರೂ. ಮೌಲ್ಯದ 8 ಸಾವಿರ ಅಡಿ ಜಾಗ ತೆರವು, ನಾಗರಭಾವಿ ಗ್ರಾಮದ 40 ಕೋಟಿ ರೂ. ಬೆಲೆಬಾಳುವ 24 ಗುಂಟೆ ಜಾಗ ತೆರವು, ನಾಗವಾರ ಗ್ರಾಮದ 300 ಕೋಟಿ ರೂ. ಬೆಲೆಬಾಳುವ ಜಾಗ ತೆರವು ಸೇರಿದಂತೆ ಹಲವು ಜಾಗಗಳನ್ನು ತೆರವುಗೊಳಿಸಿದ್ದಾರೆ.

ಪ್ರಭಾವಿಗಳಿಂದ ಒತ್ತುವರಿ?: ಬಿಡಿಎ ಹಲವಾರು ವರ್ಷಗಳಿಂದ ಒತ್ತುವರಿಯಾದ ಆಸ್ತಿಗಳನ್ನು ತೆರವುಗೊಳಿಸಿ ಜಾಗದಲ್ಲಿ ಪ್ರಾಧಿಕಾರದ ಬೋರ್ಡ್‌ ಹಾಕಲಾಗುತ್ತಿದೆ. ಆದರೂ, ಒತ್ತುವರಿ ತೆರವು ಇನ್ನೂ ಬಾಕಿ ಇದೆ. ಬಿಡಿಎ ಜಾಗವನ್ನು ಕೆಲ ಪ್ರಭಾವಿ ನಾಯಕರೇ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿವೆ. ಕೆಲ ಆಸ್ತಿಗಳನ್ನು ತೆರವುಗೊಳಿಸಲು ಅಧಿಕಾರಿಗಳು ಪರದಾಡಬೇಕಿದ್ದು, ಕಳೆದ 3 ವರ್ಷದಲ್ಲಿ ಒತ್ತುವರಿ ತೆರವು ಪ್ರಮಾಣ ಕಡಿಮೆಯಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ದೊಡ್ಡ ಕಾರ್ಯಾಚರಣೆಗೆ ಚಿಂತನೆ: ಮುಂದಿನ ದಿನಗಳಲ್ಲಿ 5 ಸಾವಿರ ಕೋಟಿ ರೂ. ಮೌಲ್ಯದಷ್ಟು ಒತ್ತುವರಿ ಯಾಗಿರುವ ಜಾಗವನ್ನು ಬಿಡಿಎ ವಶಪಡಿಸಿಕೊಳ್ಳುವ ಕಾರ್ಯಾಚರಣೆಗೆ ಚಿಂತನೆ ನಡೆಸಲಾಗಿದೆ. ಈ ಸಂಬಂಧ ಸರ್ವೇ ಹಾಗೂ ಸ್ಥಳ ಗುರುತಿಸುವ ಕಾರ್ಯ ನಡೆಯುತ್ತಿದೆ. ಹಂತ -ಹಂತವಾಗಿ ತೆರವು ಮಾಡಲಾಗುವುದು ಎಂದು ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒತ್ತುವರಿಯಾದ ಪ್ರಾಧಿಕಾರದ ಆಸ್ತಿ ಎಷ್ಟು ಎಂಬುದರ ಬಗ್ಗೆ ಸರ್ವೇ ನಡೆಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಒಂದು ತಿಂಗಳೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
-ಡಾ.ಜಿ.ಸಿ.ಪ್ರಕಾಶ್‌, ಬಿಡಿಎ ಆಯುಕ್ತ

* ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.