ಮುಂದುವರಿದ ರೌದ್ರಾವತಾರ!

ಹಳ್ಳಿಗಳಲ್ಲೂ ಹೈ ಅಲರ್ಟ್‌ ಸೋಂಕು ನಿಯಂತ್ರಿಸುವ ತಲೆ ಬಿಸಿಚಿಂಚೋಳಿ-ಚಿತ್ತಾಪುರದಲ್ಲೂ ಶಂಕಿತ ಪ್ರಕರಣ ಪತ್ತೆ

Team Udayavani, Mar 18, 2020, 10:38 AM IST

18-March-1

ಕಲಬುರಗಿ: ಮಹಾಮಾರಿ ಕೊರೊನಾ ಸೋಂಕಿಗೆ ಕಲ್ಯಾಣ ಕರ್ನಾಟಕ ಭಾಗದ ಕೇಂದ್ರ ಸ್ಥಾನ ಕಲಬುರಗಿ ಅಕ್ಷರಶಃ ನಲುಗಿ ಹೋಗಿದೆ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆಯಿಂದ ಜಿಲ್ಲಾದ್ಯಂತ ಅಘೋಷಿತ ಬಂದ್‌ ವಾತಾವರಣ ಮುಂದುವರಿದಿದೆ.

ನಗರದಲ್ಲಿ 76 ವರ್ಷದ ವೃದ್ಧನ ಸಾವಿನ ನಂತರ ಕೊರೊನಾ ತನ್ನ ರೌದ್ರಾವತಾರ ಪ್ರದರ್ಶಿಸುತ್ತಿದೆ. ವೃದ್ಧನ ಕುಟುಂಬಸ್ಥರು ಹಾಗೂ ಆತನೊಂದಿಗೆ ನೇರ ಸಂರ್ಪಕದಲ್ಲಿದ್ದವರಿಗೂ ಸೋಂಕು ಹರಡಿರುವುದು ಖಚಿತವಾಗುತ್ತಿದ್ದಂತೆ, ದಿನದಿಂದ ದಿನಕ್ಕೆ ಆತಂಕ ಹೆಚ್ಚುತ್ತಲೇ ಇದೆ.

ಈಗಾಗಲೇ ವೃದ್ಧನೊಂದಿಗೆ ನೇರ ಸಂಪರ್ಕದಲ್ಲಿದ್ದ 71 ಜನರನ್ನು ಗುರುತಿಸಿದ್ದರೆ, ಎರಡನೇ ಸಂಪರ್ಕದಲ್ಲಿದ್ದ 238ಕ್ಕೂ ಹೆಚ್ಚು ಜನರಿದ್ದು, ಎಲ್ಲರನ್ನೂ ಮನೆಯಲ್ಲಿ ಇರಿಸಿ ನಿಗಾ ವಹಿಸಲಾಗುತ್ತಿದೆ. ಆರು ಜನರನ್ನು ಇಎಸ್‌ಐ ಆಸ್ಪತ್ರೆಯಲ್ಲಿ ಐಸೋಲೇಷನ್‌ ಮಾಡಲಾಗಿದೆ. ವಿದೇಶದಿಂದ ಬಂದ ಬಳಿಕ ವೃದ್ಧ ಅನೇಕ ಕಡೆಗಳಲ್ಲಿ ಸುತ್ತಾಡಿರುವ ಸಂಶಯಗಳು ವ್ಯಕ್ತವಾಗಿವೆ.

ಹೈದ್ರಾಬಾದ್‌ನಿಂದ ಬರುವಾಗ ಕಮಲಾಪುರದ ಬಳಿಯ ಢಾಬಾವೊಂದಲ್ಲಿ ಊಟ ಮಾಡಿದ್ದು, ಆ ಢಾಬಾದ ಮಾಲೀಕ ಸೇರಿ ಏಳು ಜನರ ಮೇಲೂ ನಿಗಾ ವಹಿಸಲಾಗಿದೆ. ಹೀಗೆ ಹಲವು ಕಡೆಗಳಲ್ಲಿ ವೃದ್ಧ ಸುತ್ತಾಡಿರುವ ಅನುಮಾನಗಳು ಇವೆ. ಈ ನಡುವೆ ವೃದ್ಧನೊಂದಿಗೆ ನೇರ ಸಂಪರ್ಕದಲ್ಲಿದ್ದವರ ಬಗ್ಗೆಯೂ ಭೀತಿ ಉಂಟಾಗಿದೆ.

ಎರಡು ದಿನಗಳ ಹಿಂದೆ ವೃದ್ಧನ ಕುಟುಂಬದ ಮಹಿಳೆಗೆ ಸೋಂಕು ಹರಡಿದ್ದು ಖಚಿತವಾಗಿತ್ತು. ಇದರ ಬೆನ್ನಲ್ಲೇ ವೃದ್ಧನಿಗೆ ಮನೆಗೆ ಬಂದು ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯನಿಗೂ ಸೋಂಕು ಹರಡಿದ್ದು, ಸೋಂಕು ನಿಯಂತ್ರಿಸುವಲ್ಲಿ ತೊಡಗಿರುವ ಜಿಲ್ಲಾಡಳಿತದ ಜವಾಬ್ದಾರಿ ಹೆಚ್ಚಿಸುವಂತೆ ಮಾಡಿದೆ. ಗ್ರಾಮೀಣದಲ್ಲೂ ಹೈ ಅಲರ್ಟ್‌: ಕೊರೊನಾ ಪೀಡಿತ ವೃದ್ಧನ ಸಾವು ಹಾಗೂ ಮತ್ತಿಬ್ಬರಿಗೆ ಸೋಂಕು ದೃಢ ಪಟ್ಟಿದ್ದರಿಂದ ಕಲಬುರಗಿ ನಗರಾದ್ಯಂತ ಭಯದ ವಾತಾವರಣ ಇದೆ. ಇತ್ತ, ವಿದೇಶಗಳಿಂದ ಜಿಲ್ಲೆಗೆ ನೂರಕ್ಕೂ ಹೆಚ್ಚು ಜನರು ಬಂದಿದ್ದಾರೆ ಎನ್ನಲಾಗಿದೆ.

61 ಜನರ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಲಭ್ಯವಾಗಿದ್ದು, ಅವರ ಮೇಲೂ ನಿಗಾ ವಹಿಸಲಾಗಿದೆ. ವಿದೇಶದಿಂದ ಆಗಮಿಸಿದ ಚಿತ್ತಾಪುರ ಮತ್ತು ಚಿಂಚೋಳಿಯ ಇಬ್ಬರಿಗೆ ಶಂಕಿತ ಕೊರೊನಾ ಲಕ್ಷಣಗಳು ಪತ್ತೆಯಾಗಿದ್ದು ಆಘಾತಕಾರಿಯಾಗಿದೆ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದೆ. ಕೆಲ ಹಳ್ಳಿಗಳಲ್ಲಿ ಡಂಗೂರ ಸಾರಿಸುವ ಮೂಲಕ ಜಾಗೃತಿ ಮೂಡಿಸುವ ಕೆಲಸ ಶುರು ಮಾಡಲಾಗಿದೆ.

„ರಂಗಪ್ಪ ಗಧಾರ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.