ಶ್ರೀಕಂಠೇಶ್ವರನ ಆಸ್ತಿ ಸರ್ವೆ ಶುರು


Team Udayavani, Mar 19, 2020, 3:00 AM IST

srikanteshawa

ನಂಜನಗೂಡು: ಶ್ರೀಕಂಠೇಶ್ವರ ದೇವಾಲಯದ ಆಸ್ತಿಗಳ ಸರ್ವೆ ಕಾರ್ಯ ಬುಧವಾರದಿಂದ ಆರಂಭವಾಗಿದ್ದು, ದೇವಾಲಯದ ಭೂಮಿಯನ್ನು ಆಕ್ರಮಿಸಿಕೊಂಡವರಲ್ಲಿ ನಡುಕ ಹುಟ್ಟಿಸಿದೆ. ಮಹಾರಾಜರ ಆರಾಧ್ಯ ದೇವರಾಗಿದ್ದ ನಂಜನಗೂಡಿನ ನಂಜುಂಡಪ್ಪನಿಗೆ ರಾಜರ ಕಾಲದಲ್ಲಿ ಸಾವಿರಾರು ಎಕರೆ ಆಸ್ತಿ ಇದ್ದು, ಕಾಲಕ್ರಮೇಣ ಈ ಪೈಕಿ ಸಾಕಷ್ಟು ಭೂಮಿಯನ್ನು ಅತಿಕ್ರಮಿಸಿಕೊಳ್ಳಲಾಗಿದೆ ಎಂದು ದೂರುಗಳು ಕೇಳಿ ಬಂದಿದ್ದವು.

ಈ ಹಿನ್ನೆಲೆಯಲ್ಲಿ ಶಾಸಕ ಹರ್ಷವರ್ಧನ, ದೇವಾಲಯದ ಆಸ್ತಿಗಳನ್ನು ರಾಜ್ಯ ಮುಜರಾಯಿ ಇಲಾಖೆಯಿಂದಲೇ ಸರ್ವೆ ಮಾಡಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಇದಕ್ಕಾಗಿ ಸರ್ಕಾರಕ್ಕೆ 2018ರಲ್ಲೇ ಪತ್ರ ಬರೆದಿದ್ದರು. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಇದೀಗ ಮುಜರಾಯಿ ಇಲಾಖೆ ಅಧಿಕಾರಿಗಳು ಬುಧವಾರ ನಂಜನಗೂಡಿಗೆ ಆಗಮಿಸಿದ್ದು, ಆಸ್ತಿಗಳ ನಿಖರವಾದ ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ.

ರಾಜ್ಯ ಮುಜರಾಯಿ ಇಲಾಖೆಯ ಅಳತೆ ವಿಭಾಗದ ಅಧಿಕಾರಿಗಳಾದ ರವಿಕುಮಾರ್‌ ಹಾಗೂ ಸೋಮಶೇಖರ್‌ ಶ್ರೀಕಂಠೇಶ್ವರ ದೇವಾಲಯಕ್ಕೆ ಆಗಮಿಸಿ ದಾಸೋಹ ಭವನದ ಸಭಾಂಗಣದಲ್ಲಿ ತಾಲೂಕಿನ ಸರ್ವೆ, ಕಂದಾಯ, ನಗರಸಭೆ ಹಾಗೂ ದೇವಾಲಯದ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪ್ರಥಮ ಮಾಹಿತಿ ಸಂಗ್ರಹಿಸಿ ಬಳಿಕ ದೇವಾಲಯದ ಸುತ್ತಲಿನ ಜಾಗಗಳ ಸರ್ವೆ ಆರಂಭಿಸಿದರು.

ಸರ್ವೆ ಕಾರ್ಯದಲ್ಲಿ ತಾಲೂಕು ಸರ್ವೆ ಅಧಿಕಾರಿ ಮಂಟೆಲಿಂಗಯ್ಯ, ನಗರಸಭೆ ಕಂದಾಯ ಅಧಿಕಾರಿ ರಾಣಿ, ಶ್ರೀನಿವಾಸ್‌, ಕಂದಾಯ ಇಲಾಖೆಯ ಪ್ರಕಾಶ್‌, ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಶಿವಕುಮಾರಯ್ಯ, ಅಭಿವೃದ್ಧಿ ಸಮಿತಿ ಸದಸ್ಯರಾದ ರವಿ, ಮಂಜುಳಾ, ಪುಟ್ಟಲಿಂಗಶೆಟ್ಟಿ, ಶಶಿರೇಖಾ ಇತರರಿದ್ದರು.

ಒತ್ತುವರಿ ತೆರವು ಶತಸಿದ್ಧ: ಈ ಕುರಿತು ಪ್ರತಿಕ್ರಿಯಿಸಿದ ಅಳತೆ ವಿಭಾಗದ ಅಧಿಕಾರಿಗಳಾದ ರವಿಕುಮಾರ್‌, ತಾವು ಇಲ್ಲಿನ ಅಧಿಕಾರಿಗಳ ಬಳಿ ಇರುವ ಮಾಹಿತಿಯನ್ನು ಸಂಗ್ರಹಿಸಿದ ನಂತರ ತಮ್ಮ ಇಲಾಖೆಯಲ್ಲಿರುವ ಹಳೆಯ ದಾಖಲೆಗಳೊಂದಿಗೆ ತಾಳೆ ಹಾಕಿ ವರದಿ ಸಿದ್ಧª ಪಡಿಸಿಕೊಂಡ ನಂತರವೇ ಆಸ್ತಿಯ ಒತ್ತುವರಿ ಲೆಕ್ಕ ಸಿಗಲಿದೆ. ಇಲ್ಲಿನ ಸ್ಥಿತಿಗತಿಗಳನ್ನು ನೋಡಿದರೆ ಈ ಕಾರ್ಯಕ್ಕೆ ತಿಂಗಳು ಸಮಯ ಬೇಕಾಗುತ್ತದೆ. ಸರ್ವೆ ಕಾರ್ಯ ಪೂರ್ಣಗೊಂಡ ನಂತರ ದೇವಾಲಯದ ಆಸ್ತಿ ಒತ್ತುವರಿಯನ್ನು ತೆರವುಗೊಳಿಸುವುದು ಶತಸಿದ್ಧ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.