ರೈಲು ನಿಲ್ದಾಣದಲ್ಲಿ ಸೋಂಕು ನಿರೋಧಕ ಔಷಧ ಸಿಂಪಡಿಸಿ


Team Udayavani, Mar 19, 2020, 3:00 AM IST

railu-nilada

ಮೈಸೂರು: ಕೊರೊನಾ ವೈರಸ್‌ ಸೋಂಕು ಹರಡದಂತೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಅಪರ್ಣಾ ಗಾರ್ಗ್‌ ಅವರು ತಮ್ಮ ಸಹೋದ್ಯೋಗಿ ಅಧಿಕಾರಿಗಳೊಂದಿಗೆ ಬುಧವಾರ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಪ್ರಯಾಣಿಕರು ಮತ್ತು ರೈಲ್ವೆ ಸಿಬ್ಬಂದಿ ಅತಿ ಹೆಚ್ಚು ಬಳಸುವ, ಮುಟ್ಟುವ ಸ್ಥಳಗಳನ್ನು ಆಗಿಂದಾಗ್ಗೆ ಸೋಂಕು ನಿರೋಧಕ ಔಷಧಗಳಿಂದ ಸಿಂಪಡಿಸಬೇಕೆಂದು ಸೂಚಿಸಿದರು. ಅಲ್ಲದೇ ರೈಲು ನಿಲ್ದಾಣದ ಪ್ರವೇಶ ದ್ವಾರ ಮತ್ತು ಹೊರಗೆ ಹೋಗುವ ದ್ವಾರಗಳು,

ಕಾಲು ಮೇಲ್ಸೇತುವೆ ( ಫ‌ುಟ್‌ ಓವರ್‌ ಬ್ರಿಡ್ಜಸ್‌), ಎಸ್ಕಲೇಟರ್‌ಗಳು, ಲಿಫ್ಟ್ಗಳು, ಟಿಕೆಟ್‌ ಬುಕ್‌ ಮಾಡುವ ಹಾಗೂ ರಿಸವೇರ್ಶನ್‌ ಕಚೇರಿಗಳಲ್ಲಿನ ಸೂಕ್ತ ಸ್ಥಳಗಳಲ್ಲಿ ರೈಲು ನಿಲ್ದಾಣದಲ್ಲಿರುವ ಕೋವಿದ್‌-19 ಸಹಾಯ ಕೇಂದ್ರ ಇರುವ ಬಗ್ಗೆ ಮಾರ್ಗದರ್ಶನ ಫ‌ಲಕಗಳನ್ನು ಅಳವಡಿಸಬೇಕೆಂದು ಆರೋಗ್ಯ ವಿಭಾಗದ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜತೆಗೆ ಪ್ರಯಾಣಿಕರನ್ನು ಕರೆದೊಯ್ಯುವ ಎಲ್ಲಾ ಬೋಗಿಗಳ ಹೊರ ಮತ್ತು ಒಳಾವರಣ, ಗಾಜಿನ ಕಿಟಕಿಗಳು, ಬಾಗಿಲುಗಳನ್ನು ಸೋಂಕು ನಿರೋಧಕ ಔಷಧ ಬಳಸಿ ಆಗಿಂದಾಗ್ಗೆ ಸ್ವತ್ಛ‚ಗೊಳಿಸಬೇಕು ಎಂದು ಮೆಕಾನಿಕಲ್‌ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ರೈಲು ಪ್ರಯಾಣಿಕರಲ್ಲಿ ಕೊರೊನಾ ವೈರಸ್‌ ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಕುರಿತು ಸ್ಥಳೀಯ ಭಾಷೆಗಳಲ್ಲಿ ಕರಪತ್ರಗಳ ಮೂಲಕ ತಿಳಿಸಿಕೊಡಬೇಕು.

ಸಾರ್ವಜನಿಕ ಧ್ವನಿ ವರ್ಧಕಗಳ ಮೂಲಕ ಪ್ರಯಾಣಿಕರಿಗೆ ಎಚ್ಚರ ನೀಡಬೇಕೆಂದರು. ನಂತರ ಅಶೋಕಪುರಂನಲ್ಲಿರುವ ಮಲ್ಟಿ ಡಿಸಿಪ್ಲನರಿ ತರಬೇತಿ ಕೇಂದ್ರದಲ್ಲಿ ಕೊರೊನಾ ಕ್ವಾರಂಟೈನ್‌ ಸೌಲಭ್ಯವನ್ನು ಪರಿಶೀಲಿಸಿದರು.

ಪ್ಲ್ರಾಟ್‌ಫಾರಂ ಟಿಕೆಟ್‌ ದರ 50 ರೂ.ಗೆ ಏರಿಕೆ: ರೈಲು ನಿಲ್ದಾಣಗಳ ಪ್ಲಾಟ್‌ಫಾರಂಗಳಲ್ಲಿ ಹೆಚ್ಚಿನ ಜನಸಂದಣಿಯನ್ನು ತಪ್ಪಿಸುವ ಸಲುವಾಗಿ ಭಾರತೀಯ ರೈಲ್ವೆ ಮಂಡಳಿಯ ನಿರ್ದೇಶನದಂತೆ ಮೈಸೂರು, ಹಾಸನ, ಶಿವಮೊಗ್ಗ ಮತ್ತು ದಾವಣಗೆರೆ ರೈಲು ನಿಲ್ದಾಣಗಳಲ್ಲಿನ ಪ್ಲ್ರಾಟ್‌ ಫಾರಂ ಟಕೆಟ್‌ ಬೆಲೆಯನ್ನು 10 ರೂ.ನಿಂದ 50 ರೂ.ಗೆ ಹೆಚ್ಚಿಸಿ ತಕ್ಷಣದಿಂದಲೇ ಜಾರಿಗೆ ತರಲಾಗಿದೆ ಎಂದು ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.