ಹೊಸ ಗ್ರಾಪಂನಲ್ಲೂ ಖಾತ್ರಿ ಕಾಮಗಾರಿ ಜೋರು

ಕೂಲಿಕಾರರಿಗೆ ಮೂರು ವಾರದ ಕೂಲಿ ಜಮೆ ಸಮುದಾಯ ಆಧಾರಿತ ಕಾಮಗಾರಿಗಳಿಗೆ ಆದ್ಯತೆ230 ಕೂಲಿಗಾರರಿಗೆ ಉದ್ಯೋಗ

Team Udayavani, Mar 19, 2020, 10:37 AM IST

19-March-1

ಚಿತ್ತಾಪುರ: ತಾಲೂಕಿನಲ್ಲಿ ಹೊಸದಾಗಿ ರಚನೆಯಾದ ಡೋಣಗಾಂವ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಮಹಾತ್ಮ ಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ಭರದಿಂದ ಸಾಗಿವೆ.

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಮೊದಲು ಎಲ್ಲ ಕೂಲಿಕಾರರ ಸಭೆ ನಡೆಸಿ ಅವರಿಗೆ ನರೇಗಾ ಯೋಜನೆ ಕುರಿತು ಸವಿವರ ಮಾಹಿತಿ ನೀಡಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರು ಕೆಲಸಕ್ಕೆ ಮುಂದಾಗಿದ್ದಾರೆ ಎಂಬುದು ಪಿಡಿಒ ರಾಚಣ್ಣಗೌಡರ ತಿಳಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆ ಅನ್ವಯ 100 ದಿನಗಳ ಉದ್ಯೋಗ ಕಲ್ಪಿಸಲು ಅವಕಾಶವಿದೆ. ಬರಪೀಡಿತ ಪ್ರದೇಶದಲ್ಲಿ 150 ದಿನ ಉದ್ಯೋಗ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿದ್ದಾರೆ. ಡೋಣಗಾಂವ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನವೆಂಬರ್‌ ಒಂದೇ ತಿಂಗಳಲ್ಲಿ ಎರಡು ಸಾವಿರ ಮಾನವ ದಿನಗಳಾಗಿ ಮಾಡಿದ್ದು, ಇಲ್ಲಿಯ ತನಕ 2800 ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. ಇದಕ್ಕೆ ಕೂಲಿಕಾರರಿಗೆ ಸುಮಾರು 5.20 ಲಕ್ಷ ರೂ. ಪಾವತಿ ಮಾಡಲಾಗಿದೆ.

ಉದ್ಯೋಗ ಖಾತ್ರಿಯಡಿ ಕೆಲಸ ಮಾಡುವ ಕೂಲಿಕಾರರಿಗೆ ಈಗಾಗಲೇ ಮೂರು ವಾರದ ಕೂಲಿಯನ್ನು ಅವರವರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ. ಗ್ರಾಮದಲ್ಲಿ ಮೂರು ಸಾರ್ವಜನಿಕ ಸಮುದಾಯ ಆಧಾರಿತ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಕರೆ ಹೂಳೆತ್ತುವುದು, ನಾಲಾ ಹೂಳು ತೆಗೆಯುವುದು, ಚೆಕ್‌ ಡ್ಯಾಮ್‌ ನಿರ್ಮಾಣ ಕೆಲಸ ಪ್ರಗತಿಯಲ್ಲಿದೆ. ಹೊಲದಲ್ಲಿ ರಾಶಿ ಕೆಲಸ ಮುಗಿದ ನಂತರ ರೈತರಿಗೆ ಉಪಯೋಗವಾಗುವ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬಾಂದಾರ ನಿರ್ಮಾಣ, ಕೃಷಿ ಹೊಂಡ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪಿಡಿಒ ತಿಳಿಸಿದ್ದಾರೆ.

ಬರಗಾಲದ ಬವಣೆಯಿಂದ ಬೇಸತ್ತಿದ್ದ ಇಲ್ಲಿನ ಜನತೆಗೆ ಕೆಲಸದ ಚಿಂತೆಯಾಗಿತ್ತು. ಕೆಲವರು ಉದ್ಯೋಗಕ್ಕಾಗಿ ಮಹಾನಗರಗಳಿಗೆ ಗುಳೆ ಹೋಗಿದ್ದಾರೆ. ಉದ್ಯೋಗಕ್ಕಾಗಿ ದಿನವೂ ಪಂಚಾಯತಿಗೆ ಅಲೆದು ಬೇಸತ್ತಿದ್ದವರಿಗೆ ಕೊನೆಗೂ ಗ್ರಾ.ಪಂ ಪಿಡಿಒ ಗ್ರಾಮದ ನೂರಾರು ಕೂಲಿಕಾರರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕಲ್ಪಿಸಿದ್ದಾರೆ.

230 ಕೂಲಿಕಾರರು ಕಳೆದ ಹಲವು ತಿಂಗಳಿಂದ ಕೆರೆಯ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದಾರೆ. ಪ್ರತಿ ಕೂಲಿಕಾರನಿಗೆ ಪ್ರತಿ ದಿನಕ್ಕೆ 249ರೂ. ಜೊತೆಗೆ ಸಲಕರಣಾ ವೆಚ್ಚ 10ರೂ. ಸೇರಿದಂತೆ ಒಟ್ಟು 259ರೂ. ಕೂಲಿ ಪಾವತಿ ಮಾಡಲಾಗುತ್ತಿದೆ. ಇದರಿಂದಾಗಿ ಕೂಲಿಕಾರರರು ಖುಷಿಯಾಗಿದ್ದಾರೆ. ಗ್ರಾಮದಲ್ಲಿ ಇನ್ನೂ ಉದ್ಯೋಗಕ್ಕಾಗಿ 100 ಜನರು ಅರ್ಜಿ ಸಲ್ಲಿಸಿದ್ದಾರೆ.

ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳುವಾಗ ಜಮೀನಿನ ರೈತರೆ ಕೂಲಿ ಕಾರ್ಮಿಕರಾಗಿ ಕೆಲಸ ಮಾಡಲು ಮುಂದೆ ಬಂದರೆ ಅವರಿಗೂ ಸಹ ಜಾಬ್‌ ಕಾರ್ಡ್‌ ನೀಡಲಾಗುತ್ತದೆ. ಉದ್ಯೋಗ ಖಾತ್ರಿ ಕಾಮಗಾರಿ ನಡೆಯುವ ಸ್ಥಳದಲ್ಲಿ 75 ಜನ ಕೂಲಿ ಕಾರ್ಮಿಕರಿಗೊಬ್ಬರಂತೆ ಕಾಯಕ ಬಂಧು ಎಂದು ನೇಮಿಸಲಾಗಿದೆ.

ಇವರು ಪ್ರತಿ ದಿನ ಕಾಮಗಾರಿಯ ಅಳತೆ ಮಾಡಿ ಕಾಮಗಾರಿ ನೀಡುತ್ತಾರೆ. ಉದ್ಯೋಗ ಖಾತ್ರಿ ಯೋಜನೆ ಯಶಸ್ವಿಗೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಅನಿತಾ ಪೂಜಾರಿ, ಗ್ರಾ.ಪಂ ಅಧ್ಯಕ್ಷೆ ಈರಮ್ಮ ಪೀರಪ್ಪ ರಾಜೋಳಾ, ಉಪಾಧ್ಯಕ್ಷೆ ಜಗದೇವಿ ಹಲಕರ್ಟಿ ಸಾಥ್‌ ನೀಡಿದ್ದಾರೆ.

ಹೊಸದಾಗಿ ರಚನೆಯಾದ ಡೋಣಗಾಂವ ಗ್ರಾ.ಪಂನಲ್ಲಿ ಮೊದಲ ಬಾರಿಗೆ ಉದ್ಯೋಗ ಖಾತ್ರಿ ಯೋಜನೆ ಪ್ರಾರಂಭವಾಗಿದೆ. ಅಲ್ಲದೇ ಗ್ರಾಮದ 230 ಕೂಲಿಕಾರರು ಹೆಸರು ನೋಂದಾಯಿಸಿಕೊಂಡು ಕೆಲಸದಲ್ಲಿ ನಿರತರಾಗಿರುವುದು ಸಂತೋಷವಾಗಿದೆ.
ರಾಚಣ್ಣಗೌಡ ಪಿಡಿಒ,
ಡೋಣಗಾಂವ

ನರೇಗಾ ಯೋಜನೆ ಮೂಲಕ ಚೆಕ್‌ ಡ್ಯಾಂ, ಸಿಸಿ ರಸ್ತೆ ಚರಂಡಿ ನಿರ್ಮಾಣ ಜೊತೆಗೆ ವೈಯಕ್ತಿಕ ಕಾಮಗಾರಿಗಳನ್ನು ಮಾಡಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಅಭಿವೃದ್ಧಿ ಕೆಲಸ ಮಾಡಲು ಈ ಯೋಜನೆ ಪೂರಕವಾಗಿದೆ.
ನಿಂಗಣ್ಣ ಹೆಗಲೇರಿ,
ಡೋಣಗಾಂವ ಗ್ರಾಪಂ ಸದಸ್ಯ

ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ. ಗ್ರಾಮದ ಜನತೆಗೆ ವರ್ಷದಲ್ಲಿ 100 ದಿನ ಉದ್ಯೋಗ ಸೃಷ್ಟಿಸಲಾಗಿದೆ.
ಕಾಶಪ್ಪ ಡೋಣಗಾಂವ,
ಮುಖಂಡ

ಎಂ.ಡಿ. ಮಶಾಖ

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.