ಬಿಡುಗಡೆಯತ್ತ ಗರುಡಾಕ್ಷ
Team Udayavani, Mar 20, 2020, 10:42 AM IST
ಸುಮಾರು ಎರಡು ವರ್ಷಗಳ ಹಿಂದೆ ಸೆಟ್ಟೇರಿದ್ದ, ಬಹುತೇಕ ಹೊಸ ಪ್ರತಿಭೆಗಳ “ಗರುಡಾಕ್ಷ’ ಚಿತ್ರ ಅಂತೂ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರುವ ಹಂತಕ್ಕೆ ಬಂದಿದೆ. ಇತ್ತೀಚೆಗೆ ಫಸ್ಟ್ಕಾಪಿಯೊಂದಿಗೆ ಹೊರಬಂದಿರುವ “ಗರುಡಾಕ್ಷ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ “ಯು/ಎ’ ಸರ್ಟಿಫಿಕೆಟ್ ಕೊಟ್ಟು ಬಿಡುಗಡೆಗೆ ಅಸ್ತು ಎಂದಿದೆ. ಈ ಹಿಂದೆ “ಉಡುಂಬ’ ಚಿತ್ರದಲ್ಲಿ ದ್ವಿತೀಯ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗಿದ್ದ ಯದು ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ನವನಟಿ ರಕ್ಷಾ ಕಾಣಿಸಿಕೊಂಡಿದ್ದಾರೆ. ಉಳಿದಂತೆ ವಸಂತ ಕುಮಾರ್, ಕುಮುದಾ, ರಫೀಕ್, ಶ್ರೀಧರ್ ವೈಷ್ಣವ್, ಸತ್ಯಾರ್ಜುನ, ವಿಶ್ರುತ್ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
“ಕ್ಷಿರಪಥ ಮೂವೀಸ್’ ಬ್ಯಾನರ್ ಅಡಿಯಲ್ಲಿ ನರಸಿಂಹ ಮೂರ್ತಿ. ಎಸ್ ಬಂಡವಾಳ ಹೂಡಿ ನಿರ್ಮಿಸಿರುವ “ಗರುಡಾಕ್ಷ’ ಚಿತ್ರಕ್ಕೆ ಶ್ರೀಧರ್ ವೈಷ್ಣವ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. “ತನ್ನ ತಂದೆಯ ಸಾವು ಆಕಸ್ಮಿಕವಲ್ಲ ಅದು ಕೊಲೆ ಎಂದು ತಿಳಿದ ಮಗ, ಆ ರಹಸ್ಯವನ್ನು ಹೇಗೆ ಭೇದಿಸುತ್ತಾನೆ ಅನ್ನೋದು ಚಿತ್ರದ ಕಥೆಯ ಒಂದು ಎಳೆ. “ಗರುಡಾಕ್ಷ’ ಚಿತ್ರದಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ, ಬಾಂಧವ್ಯ, ಜೊತೆಗೆ ಹಣ, ಸ್ವಾರ್ಥ, ದುರಾಸೆ ಹೀಗೆ ಹಲವು ಅಂಶಗಳನ್ನು ಹೇಳಲಾಗಿದೆ. ಸಂಬಂಧಗಳ ಮೌಲ್ಯದ ಜೊತೆಗೆ ಒಂದು ಸಂದೇಶ ಕೂಡ ಇದೆ’ ಎನ್ನುತ್ತದೆ ಚಿತ್ರತಂಡ. ಸೆಂಟಿಮೆಂಟ್ ಕಂ ಆ್ಯಕ್ಷನ್-ಕ್ರೈಂ ಕಥಾ ಹಂದರ ಈ ಚಿತ್ರವನ್ನು ಸುಮಾರು 35 ದಿನಗಳ ಕಾಲ ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರದ ಹಾಡುಗಳಿಗೆ ಶ್ರೀವತ್ಸ ಸಂಗೀತ ಸಂಯೋಜನೆಯಿದ್ದು, ಅನುರಾಧ ಭಟ್, ಸಂತೋಷ್ ವೆಂಕಿ, ಅಪೂರ್ವ ಶ್ರೀಧರ್, ನೇಹಾ ವೇಣುಗೋಪಾಲ್ ಮೊದಲಾದವರು ಹಾಡಿಗೆ ಧ್ವನಿಯಾಗಿದ್ದಾರೆ. ಅರಸು ಅಂತಾರೆ, ರಾಜು ಭಾಯಿ ಚಿತ್ರದ ಗೀತೆಗಳಿಗೆ ಸಾಹಿತ್ಯ ರಚಿಸಿದ್ದಾರೆ. ಚಿತ್ರಕ್ಕೆ ಎನ್.ಟಿ. ಎ ವೀರೇಶ್ ಛಾಯಾಗ್ರಹಣ, ಎನ್.ಎಂ ವಿಶ್ವ ಸಂಕಲನ ಕಾರ್ಯವಿದೆ. ಸದ್ಯ ಸೆನ್ಸಾರ್ನಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡಿರುವ “ಗರುಡಾಕ್ಷ’ ಏಪ್ರಿಲ್ ಕೊನೆ ಅಥವಾ ಮೇ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ