ಗ್ರೀನ್‌ ಲಿಸ್ಟ್‌ಗೆ ಸೇರಲು ಗ್ರೀನ್‌ ಸಿಗ್ನಲ್‌!

ರೈತರ 1 ಲಕ್ಷ ರೂಪಾಯಿ ಸಾಲಮನ್ನಾ

Team Udayavani, Mar 20, 2020, 6:29 AM IST

ಗ್ರೀನ್‌ ಲಿಸ್ಟ್‌ಗೆ ಸೇರಲು ಗ್ರೀನ್‌ ಸಿಗ್ನಲ್‌!

ಪುತ್ತೂರು: ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಘೋಷಿಸಿದ ರೈತರ 1 ಲ.ರೂ. ಸಾಲ ಮನ್ನಾ ಯೋಜನೆಯಲ್ಲಿ ವಿವಿಧ ಕಾರಣಗಳಿಂದ ಗ್ರೀನ್‌ ಲೀಸ್ಟ್‌ಗೆ ಸೇರಲು ಬಾಕಿ ಉಳಿದಿರುವವರಿಗೆ ಸಮರ್ಪಕ ದಾಖಲೆ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಲು ಸರಕಾರ ಹಸುರು ನಿಶಾನೆ ನೀಡಿದೆ. ಈಗಾಗಲೇ ಮಂಜೂರಾತಿ ದೊರೆತು ಹಣ ಬಿಡುಗಡೆಗೊಂಡ ಎಲ್ಲ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುತ್ತಿದ್ದು, ಬಾಕಿ ಇರುವ ಅರ್ಹ ಫಲಾನುಭವಿಗಳನ್ನೂ ಪರಿಗಣಿಸುವುದಕ್ಕೆ ಸರಕಾರ ಮಾ.25ರ ವರೆಗೆ ಕಾಲಾವಕಾಶ ನೀಡಿದೆ.

ಬೇಡಿಕೆ ಪಟ್ಟಿ ಸಲ್ಲಿಕೆ ಹಂತದಲ್ಲೇ ತಿರಸ್ಕಾರ!
ಸಾಲಮನ್ನಾಕ್ಕೆ ಸಂಬಂಧಿಸಿ ಆರಂಭಿಕ ಹಂತದಲ್ಲಿ ಆಯಾ ಸಹಕಾರ ಸಂಘಗಳು ಅರ್ಹರನ್ನು ಪಟ್ಟಿ ಮಾಡಿ ಸರಕಾರಕ್ಕೆ ಬೇಡಿಕೆ ಸಲ್ಲಿಸಿದ್ದವು. ಮಂಜೂರಾತಿ ದೊರೆತ ಬಳಿಕ ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಆಗುವುದು ಪ್ರಕ್ರಿಯೆ. ಉಭಯ ಜಿಲ್ಲೆಗಳ ಬೇಡಿಕೆ ಪಟ್ಟಿಯಲ್ಲಿದ್ದ 14,537 ಮಂದಿಯ ಹೆಸರುಗಳನ್ನು (145.88 ಲಕ್ಷ ರೂ.) ವಿವಿಧ ಕಾರಣಗಳಿಗಾಗಿ ಮಂಜೂರಾತಿ ಹಂತದಲ್ಲಿ ಕೈ ಬಿಡಲಾಯಿತು. ಇದರಿಂದ ಈ ಫಲಾನುಭವಿಗಳು ಗ್ರೀನ್‌ ಲೀಸ್ಟ್‌ ನಿಂದ ಹೊರಗುಳಿದಿದ್ದರು.

ತಿರಸ್ಕೃತರಿಗೆ ಅವಕಾಶ
ಸಾಲಮನ್ನಾಕ್ಕೆ ಘೋಷಣೆ ಸಂದರ್ಭ ಹೊಸ ಪಡಿತರ ಚೀಟಿ ಪಡೆದಿದ್ದ ಫಲಾನುಭವಿಗಳ ಖಾತೆಯಲ್ಲಿ ಹೊಸ ನಂಬರ್‌ ಅಪ್‌ಡೇಟ್‌ ಆಗದ ಹಳೆ ನಂಬರ್‌ ಉಳಿದುಕೊಂಡಿರುವುದರಿಂದ ಲಿಂಕ್‌ ಆಗದಿರುವಂತಹ ಸಮಸ್ಯೆ ಕಂಡು ಬಂದಿತ್ತು. ಇಂತಹ ಲೋಪಗಳು ಗ್ರೀನ್‌ ಪಟ್ಟಿಗೆ ಸೇರದಿರಲು ಕಾರಣ ಎನ್ನಲಾಗಿದೆ. ತಿರಸ್ಕೃತ ಪ್ರಕರಣಗಳಲ್ಲಿ ಅರ್ಹ ಫಲಾನುಭವಿಗಳಿದ್ದು, ಅಂತಹವ ರಿಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲು ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಸರಕಾರ ಈಗ ಅವಕಾಶ ಕಲ್ಪಿಸಿದೆ.

ಮಾ.25: ಕೊನೆ ದಿನಾಂಕ
ನಿರ್ಧಾರವನ್ನು ಮಾ.12, 2020ರಂದು ಸಹಕಾರ ಸಚಿವರು ಅಧಿಕಾರಿಗಳ ಸಭೆಯಲ್ಲಿ ಪ್ರಕಟಿಸಿದ್ದು, ವಂಚಿತ ರೈತರು ಮಾ.25ರೊಳಗೆ ದಾಖಲೆ ಸಲ್ಲಿಸಿದರೆ ಸೌಲಭ್ಯ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಈ ರೈತರು ದಾಖಲೆಗಳ ನ್ಯೂನತೆ ಸರಿಪಡಿಸಿಕೊಂಡು ಪುನಃ ಅರ್ಜಿ ದಾಖಲೆ ಸಲ್ಲಿಸಬಹುದು. ಒಂದು ವೇಳೆ ದಾಖಲೆ ಸಲ್ಲಿಸದಿದ್ದಲ್ಲಿ ಅಂಥವರು ಈ ಸೌಲಭ್ಯದಿಂದ ವಂಚಿತರಾಗುತ್ತಾರೆ. ರೈತರು ದಾಖಲೆ ಸಲ್ಲಿಸಿದರೂ

ಎಸ್‌ಎಸ್‌ಡಿ ತಂತ್ರಾಂಶದಲ್ಲಿ ಸಮರ್ಪಕವಾಗಿ ಮಾಹಿತಿ ತುಂಬದಿದ್ದಲ್ಲಿ ಅಥವಾ ಸಕಾಲಕ್ಕೆ ಮಾಹಿತಿ ಒದಗಿಸದಿದ್ದಲ್ಲಿ ಸಂಘದ ಸಿಇಒ ಸೇರಿದಂತೆ ಸಂಬಂಧಿಸಿದ ಅಧಿಕಾರಿ/ಸಿಬಂದಿಯನ್ನೇ ಹೊಣೆಗಾರರನ್ನಾಗಿಸುವ ಜತೆಗೆ ಅವರಿಂದಲೇ ವಸೂಲಿ ಮಾಡಿ ರೈತರಿಗೆ ಸೌಲಭ್ಯ ಒದಗಿಸುವ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಸಹಕಾರ ಸಂಘದಿಂದ ಕಳುಹಿಸಿದ ಬೇಡಿಕೆ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಅನಂತರ ಮಂಜೂರಾತಿ (ಗ್ರೀನ್‌ ಲಿಸ್ಟ್‌) ಹಂತದಲ್ಲಿ ಹೆಸರು ಕೈ ಬಿಡಲಾಗಿತ್ತು. ಇದಕ್ಕೆ ಕಾರಣ ತಿಳಿದಿಲ್ಲ. ಸಮಸ್ಯೆ ಸರಿಪಡಿಸಿ ಮನ್ನಾ ಹಣ ನೀಡಲಾಗುವ ಭರವಸೆ ನೀಡಿ ವರ್ಷ ಸಮೀಪಿಸಿದ್ದರೂ ಅದಕ್ಕೆ ಸ್ಪಂದನೆ ಸಿಕ್ಕಿರಲಿಲ್ಲ. ಈಗ ದಾಖಲೆ ಸಲ್ಲಿಸಲು ಅವಕಾಶ ಸಿಕ್ಕಿದೆ.
– ಶ್ರೀನಿವಾಸ ಸುಳ್ಯ

ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾದ ರೈತರು ಮಾರ್ಚ್‌ 25 ರೊಳಗೆ ದಾಖಲೆ ಸಲ್ಲಿಸಿದರೆ ಸೌಲಭ್ಯ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
-ಶಿವಲಿಂಗಯ್ಯ, ಸಹಕಾರ ಇಲಾಖಾಧಿಕಾರಿ, ಮಂಗಳೂರು

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.