ತ್ರಾಸಿ-ಮರವಂತೆ ಕಡಲತೀರ, ಉದ್ಯಾನವನದಲ್ಲಿ ಜನರ ವಿಹಾರ

ನಿರ್ಬಂಧವಿದ್ದರೂ ಅನುಷ್ಠಾನವಾಗದ ಆದೇಶ

Team Udayavani, Mar 20, 2020, 6:21 AM IST

ತ್ರಾಸಿ-ಮರವಂತೆ ಕಡಲತೀರ, ಉದ್ಯಾನವನದಲ್ಲಿ ಜನರ ವಿಹಾರ

ಮರವಂತೆ: ಕೋವಿಡ್‌ 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೀಚ್‌/ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದ್ದರೂ ಕೂಡ ಕೆಲವೆಡೆಗಳಲ್ಲಿ ಇದು ಇನ್ನೂ ಅನುಷ್ಠಾನಕ್ಕೆ ಬಂದಂತೆ ಕಾಣಿಸುತ್ತಿಲ್ಲ. ತ್ರಾಸಿ – ಮರವಂತೆ ಕಡಲ ಕಿನಾರೆಯು ಇದರಿಂದ ಹೊರತಲ್ಲ. ಕೋವಿಡ್‌ 19 ಭೀತಿ ಕಡಿಮೆಯಾಗುವವರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಎನ್ನುವ ಕೂಗು ಸ್ಥಳೀಯರಿಂದ ವ್ಯಕ್ತವಾಗಿದೆ.

ತ್ರಾಸಿ – ಮರವಂತೆ ಕಡಲ ತೀರದಲ್ಲಿ ಇತ್ತೀಚಿನ ದಿನಗಳಿಗೆ ಹೋಲಿಸಿದರೆ ಪ್ರವಾಸಿಗರ ಸಂಖ್ಯೆ ಕಡಿಮೆ ಯಾಗಿದ್ದರೂ ಉದ್ಯಾನವನ ಸ್ಥಳಗಳಲ್ಲಿ ಅಲ್ಲಲ್ಲಿ ಸಾರ್ವಜನಿಕರು, ಪ್ರವಾಸಿಗರು ಕಂಡು ಬರುತ್ತಿದ್ದಾರೆ.

ಜಿಲ್ಲಾಧಿಕಾರಿಯವರು ಬೀಚ್‌/ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರೂ ಆದೇಶ ಪಾಲಿಸಲು ಯಾವೊಬ್ಬ ಅಧಿಕಾರಿ ಅಥವಾ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಲ್ಲ. ಹೀಗಾಗಿ ಸಾರ್ವಜನಿಕರು ಕಡಲ ತೀರಕ್ಕೆ ಆಗಮಿಸಿ ವಿಹರಿಸುತ್ತಿದ್ದಾರೆ.

ಕಡಲ ತೀರದಲ್ಲಿರುವ ಫಾಸ್ಟ್‌ಫುಡ್‌ ಅಂಗಡಿ ತೆರೆದಿದ್ದು, ಉದ್ಯಾನವನದ ಹೊರಗೆ ಮತ್ತು ತ್ರಾಸಿ – ಮರವಂತೆ ಹೆದ್ದಾರಿ ಸಮೀಪದಲ್ಲಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎನ್ನುವ ಸರಕಾರದ ಕಟ್ಟುನಿಟ್ಟಿನ ಸೂಚನೆ ತ್ರಾಸಿ – ಮರವಂತೆ ಕಡಲ ತೀರದಲ್ಲಿ ಹಾಗೂ ಉದ್ಯಾನವನ ಪರಿಸರದಲ್ಲಿ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಕೋವಿಡ್‌ 19 ವೈರಸ್‌ ಹರಡುವುದನ್ನು ತಡೆಗಟ್ಟಲು ಅನೇಕ ಕಟ್ಟುನಿಟ್ಟಿನ ವಿಶೇಷ ಕ್ರಮಗಳನ್ನು ಪಾಲಿಸಬೇಕೆಂದು ಸರಕಾರ ಸೂಚನೆ ನೀಡಿದ್ದರೂ ಅದನ್ನು ಅನುಷ್ಠಾನಗೊಳಿಸುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರವಾಸಿ ತಾಣಗಳಿಗೆ ನಿರ್ಬಂಧ
ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿಯವರೆಗೆ 144(3) ಸೆಕ್ಷನ್‌ ಜಾರಿಗೊಳಿಸಲಾಗಿದ್ದು, ಇದರಲ್ಲಿ ಪ್ರವಾಸಿ ತಾಣಗಳಿಗೆ ನಿರ್ಬಂಧ ಕೂಡ ಸೇರಿಸಲಾಗಿದೆ. ಆಯಾಯ ತಾಣಗಳಲ್ಲಿ ಪ್ರವಾಸಿಗರು ಬಾರದಂತೆ, ಜನ ಸೇರದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಅಲ್ಲಿ ವಹಿಸಿಕೊಟ್ಟ ಖಾಸಗಿಯವರದ್ದಾಗಿದೆ. ಇಲಾಖೆಯಿಂದಲೂ ನಿಗಾ ವಹಿಸ ಲಾಗುವುದು.
– ಚಂದ್ರಶೇಖರ ನಾಯ್ಕ, ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಉಡುಪಿ

ಟಾಪ್ ನ್ಯೂಸ್

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.