ಪೊಲೀಸರಿಂದ ಅರೆಸ್ಟ್ ಕೋವಿಡ್ 19 ಜಾಗೃತಿ
Team Udayavani, Mar 20, 2020, 11:28 AM IST
ಬೆಂಗಳೂರು: ನಗರದಲ್ಲಿ ಕೋವಿಡ್ 19 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸರು ಸಾರ್ವಜನಿಕ ಜಾಗೃತಿಗೆ ಮುಂದಾಗಿದ್ದು, ಸಿಬ್ಬಂದಿ/ಅಧಿಕಾರಿಗಳು ಆರೋಗ್ಯದ ಕಡೆ ಹೆಚ್ಚು ಒತ್ತು ಕೊಡುವ ನಿಟ್ಟಿನಲ್ಲಿ “ಅರೆಸ್ಟ್ ಕೋವಿಡ್ 19 ‘ ಅಭಿಯಾನ ನಡೆಸುತ್ತಿದ್ದಾರೆ.
ನಿತ್ಯ ನೂರಾರು ಮಂದಿ ಠಾಣೆಗೆ ಭೇಟಿ ನೀಡುತ್ತಾರೆ. ಕರ್ತವ್ಯದ ವೇಳೆ ಆಸ್ಪತ್ರೆ ಸೇರಿ ಎಲ್ಲೆಡೆ ಸಂಚರಿಸಬೇಕಾದ ಅನಿವಾರ್ಯತೆ ಇದೆ. ಆ ಸಂದರ್ಭದಲ್ಲಿ ಸೋಂಕು ತಗಲುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಗ್ಯದ ಕಡೆ ಹೆಚ್ಚು ಎಚ್ಚರಿಕೆವಹಿಸಬೇಕು. ಅಲ್ಲದೆ, ಜನರಲ್ಲಿಯೂ ಕೋವಿಡ್ 19 ಭೀತಿ ಹೆಚ್ಚಾಗುತ್ತಿದ್ದು, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನಗರ ಪೊಲೀಸರ ಫೇಸ್ಬುಕ್, ಟ್ವಿಟರ್, ಟಿಕ್-ಟಾಕ್, ಇನ್ಸ್ಟ್ರಾಗ್ರಾಂ ಖಾತೆ ಸೇರಿ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷ ಜಾಗೃತಿ ಪೋಸ್ಟ್ಗಳನ್ನು ಹರಿಯಬಿಡಲಾಗುತ್ತಿದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಕರೊನಾ ಜಾಗೃತಿ ಹಾಗೂ ಅದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ವಹಿಸಬೇಕು.
ಪ್ರತಿ ಅರ್ಧ ಗಂಟೆಗೆ ಒಮ್ಮೆಯಾದರೂ ಸ್ಯಾನಿಟೈಸರ್ನಿಂದ ಕೈ ತೊಳೆಯಬೇಕು. ಅಲ್ಲದೆ, ಮಾಸ್ಕ್ ಧರಿಸುವುದು ಕಡ್ಡಾಯ. ಠಾಣೆಗೆ ಭೇಟಿ ನೀಡುವರಿಗೂ ಸ್ಯಾನಿಟೈಸರ್ ಮೂಲಕ ಕೈತೊಳೆಸುವುದು ಹಾಗೂ ಅವರಿಗೂ ಮಾಸ್ಕ್ ಧರಿಸುವಂತೆ ಸಲಹೆ ನೀಡಬೇಕು. (ಈ ನಿಟ್ಟಿನಲ್ಲಿ ಪ್ರತಿ ಠಾಣೆ ಆವರಣದಲ್ಲಿ ಕೈತೊಳೆಯಲು ನೀರು ಮತ್ತು ಹ್ಯಾಂಡ್ ಸ್ಯಾನಿಟೈಸರ್ಸ್ ಇಡವಾಗಿದೆ). ಸಾಧ್ಯವಾದ ಮಟ್ಟಿಗೆ ದೂರದಿಂದಲೇ ಮಾತಾಡಿಸಿ, ಈ ವೇಳೆ ಯಾವುದೇ ಕಾರಣಕ್ಕೂ ಅನ್ಯರ ಜತೆ ಕೈ ಕುಲಕದಂತೆ ಸೂಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ