ವಾಹನ ನೋಂದಣಿಗೆ ಮುಗಿಬಿದ್ದ ಜನ

ಮಾರ್ಚ್‌ 15ರ ವರೆಗೆ 2 ಸಾವಿರ ದ್ವಿಚಕ್ರ-120 ಕಾರು-334 ಸಾರಿಗೆ ವಾಹನ ನೋಂದಣಿ

Team Udayavani, Mar 20, 2020, 12:28 PM IST

20-March-8

ಯಾದಗಿರಿ: ಬಿಎಸ್‌-4 ಮಾದರಿ ದ್ವಿಚಕ್ರ ವಾಹನಗಳ ನೋಂದಣಿಗೆ ಮಾರ್ಚ್‌
31ಕ್ಕೆ ಗಡುವು ನೀಡಲಾಗಿದ್ದು, ಕೊರೊನಾ ಭೀತಿ ಮದ್ಯೆಯೂ ಸಾರಿಗೆ ಇಲಾಖೆಯಲ್ಲಿ ಹೊಸ ವಾಹನಗಳ ನೋಂದಣಿಗೆ ಜನರು ಮುಗಿಬಿದ್ದಿದ್ದಾರೆ.

ಈ ಹಿಂದೆಯೇ ವಾಹನ ಖರೀದಿಸಿ ನೋಂದಾಯಿಸದೆ ಇರುವ ವಾಹನಗಳು ಹಾಗೂ ಹೊಸ ವಾಹನಗಳನ್ನು ಖರೀದಿಸಿ ಇದುವರೆಗೂ ನೋಂದಣಿ ಮಾಡಿಸದೆ ವಾಹನ ಚಾಲನೆ ಮಾಡುತ್ತಿರುವ ಬಿಎಸ್‌-4 ವಾಹನ ಮಾಲೀಕರು ಅವಶ್ಯಕ ಶುಲ್ಕ, ತೆರಿಗೆ ಪಾವತಿ ಮಾಡಿ ಸಂಬಂಧಿಸಿದ ದಾಖಲಾತಿಗಳೊಂದಿಗೆ ತಮ್ಮ ವಾಹನ ಹಾಜರುಪಡಿಸಿ ನೋಂದಾಯಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಏಪ್ರಿಲ್‌ 1ರಿಂದ ದೇಶದಲ್ಲಿ ಭಾರತ್‌ ಸ್ಟೇಜ್‌-4 ಮಾಪನದ ವಾಹನಗಳನ್ನು ಮಾರಾಟ ಅಥವಾ ನೋಂದಣಿ ಮಾಡಿಸುವಂತಿಲ್ಲ. ಏಪ್ರಿಲ್‌ 1ರಿಂದ ಬಿಎಸ್‌-6 ವಾಹನಗಳ ನೋಂದಣಿ ಆರಂಭಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ 2020ರ ಫೆ.1ರಿಂದ ಮಾರ್ಚ್‌ 15ರ ವರೆಗೆ ಜಿಲ್ಲೆಯಲ್ಲಿ 2 ಸಾವಿರ ದ್ವಿಚಕ್ರ ವಾಹನಗಳ ನೋಂದಣಿಯಾಗಿದೆ. 120 ಕಾರು, 334 ಸಾರಿಗೆ ವಾಹನ (ಗೂಡ್ಸ್‌, ಬಸ್‌ ಇತರೆ) ನೋಂದಣಿಯಾಗಿರುವ ಮಾಹಿತಿ ಲಭ್ಯವಾಗಿದೆ. ಆದರೆ ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ಭೀತಿಯಿಂದಾಗಿ ಜನರು ಮನೆ ಬಿಟ್ಟು ಹೊರಬಾರದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರ ಮುನ್ನೆಚ್ಚರಿಕೆಯಾಗಿ ಶಾಲೆ, ಕಾಲೇಜು, ಸಾರ್ವಜನಿಕರು ಸೇರುವ ಮಾಲ್‌, ಸಿನಿಮಾ ಮಂದಿರ ಮುಚ್ಚಲು ಆದೇಶಿಸಿದೆ. ಆದರೆ ಸಾರ್ವಜನಿಕರು ಹೆಚ್ಚಾಗಿ ಸೇರುವ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಆತಂಕದ ಮಧ್ಯೆಯೂ ಸಿಬ್ಬಂದಿ ಮಾಸ್ಕ್ ಧರಿಸಿ ಎಚ್ಚರದಿಂದ ನಿತ್ಯದ ಕಾರ್ಯ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ಸಾರ್ವಜನಿಕರನ್ನು ಹೆಚ್ಚಿನ ಸಮಯ ಕಾಯಲು ಬಿಡದೇ ಅಧಿಕಾರಿಗಳು ತಕ್ಷಣವೇ ವಾಹನಗಳನ್ನು ಪರಿಶೀಲಿಸಿ ನೋಂದಣಿ ಪ್ರಕ್ರಿಯೆ ನಡೆಸುತ್ತಿದ್ದಾರೆ. ಜಗತ್ತಿನೆಲ್ಲೆಡೆ ಕೊರೊನಾ ಭೀತಿಯಿರುವ ಹಿನ್ನೆಲೆಯಲ್ಲಿ ಬಿಎಸ್‌4 ವಾಹನಗಳ ನೋಂದಣಿಗೆ ಹೆಚ್ಚಿನ ಕಾಲಾವಕಾಶ ಕೊಡಬೇಕು ಎನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬಿಎಸ್‌ 4 ವಾಹನಗಳನ್ನು ಮಾರ್ಚ್‌ 31ರೊಳಗೆ ನೋಂದಣಿ ಮಾಡಿಸಿಕೊಳ್ಳಲು ಅವಕಾಶವಿದೆ. ಬಳಿಕ ಅಂತಹ ವಾಹನಗಳ ನೋಂದಣಿ ಸಾಧ್ಯವಾಗಲ್ಲ. ಏಪ್ರಿಲ್‌ 1ರಿಂದ ಬಿಎಸ್‌ 6
ಮಾದರಿ ವಾಹನಗಳ ನೋಂದಣಿ ಆರಂಭವಾಗಲಿದೆ.
ವಸಂತ ಚವ್ಹಾಣ,
ಪ್ರಾದೇಶಿಕ ಸಾರಿಗೆ ಅಧಿಕಾರಿ

ಮಾರ್ಚ್‌ 31ರೊಳಗೆ ಬಿಎಸ್‌-4 ವಾಹನ ನೋಂದಣಿ ಮಾಡಿಸಿಕೊಳ್ಳಬೇಕು. ಈಗ ಯುಗಾದಿ ಹಬ್ಬವೂ ಹತ್ತಿರದಲ್ಲಿಯೇ ಇದೆ. ಆಗ ಸಾಕಷ್ಟು ಜನರು ಹೊಸ ವಾಹನ ಖರೀದಿಸುತ್ತಾರೆ. ಮೇಲಾಗಿ ಕೊರೊನಾ ಆತಂಕದಿಂದ ಜನರು ಹೊರಗಡೆ ಬರಲು ಹೆದರುವಂತಾಗಿದೆ.ಆದ್ದರಿಂದ ನೋಂದಣಿಗೆ ಹೆಚ್ಚಿನ ಸಮಯಾವಕಾಶ ನೀಡಿದರೆ ಅನುಕೂಲವಾಗುತ್ತದೆ.
 ಸಾಯಬಣ್ಣ,
ವಾಹನ ಮಾಲೀಕ

„ಅನೀಲ ಬಸೂದೆ

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.