ಚಾಲಕರು ಕಡ್ಡಾಯ ಮಾಸ್ಕ್ ಬಳಸಿ
Team Udayavani, Mar 20, 2020, 3:22 PM IST
ಕೆ.ಆರ್.ಪೇಟೆ: ದೇಶದ ಮೂಲೆ ಮೂಲೆಗಳಿಗೂ ವಾಹನ ಚಾಲನೆ ಮಾಡಿಕೊಂಡು ಹೋಗುವ ಚಾಲಕರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಆಧಿಕಾರಿ ನಿಂಗಪ್ಪ ಅಗಸರ ತಿಳಿಸಿದರು.
ತಾಲೂಕಿನ ಗಂಜೀಗೆರೆ ಗ್ರಾಮದಲ್ಲಿ ಕೆರೆ ಹೂಳೆತ್ತುವ ಜೆಸಿಬಿ ವಾಹನ ಚಾಲಕರಿಗೆ ಉಚಿತ ಮಾಸ್ಕ್ ವಿತರಿಸಿ ಮಾತನಾಡಿದ ಅವರು, ಚಾಲಕರು ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ವಾಹನ ಸಂಚಾರಕ್ಕೆ ಅನಿವಾರ್ಯವಾಗಿ ಹೋಗಲೇ ಬೇಕಿದೆ. ಹಾಗಾಗಿ ಅವರು ಕೋವಿಡ್ 19 ಸೋಂಕಿನಿಂದ ಪಾರಾಗಲು ಕಡ್ಡಾಯವಾಗಿ ಮಾಸ್ಕ್ ಮತ್ತಿತರೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಹೇಳಿದರು.
ಈಗ ಕೋವಿಡ್ 19 ವೈರಾಣು ಹರಡುತ್ತಿದೆ ಎಂಬ ಕಾರಣಕ್ಕೆ ಮಾಸ್ಕ್ ಹಾಕಿಕೊಳ್ಳುವ ಬದಲು ಸದಾಕಾಲ ಹಾಕಿಕೊಳ್ಳಬೇಕು. ಈಗ ಬೇಸಿಗೆ ಆರಂಭವಾಗಿದ್ದು, ದೂಳು ಹೆಚ್ಚಾಗಿ ನಮ್ಮ ದೇಹ ಸೇರುವುದರಿಂದ ಶ್ವಾಸಕೋಶಕ್ಕೆ ತೊಂದರೆಯಾಗುತ್ತದೆ. ಇರದ ಜೊತೆಗೆ ವಿವಿಧ ಭಾಗಗಳಲ್ಲಿ ಅಲ್ಲಿನ ಪರಿಸರಕ್ಕೆ ಅನುಗುಣವಾಗಿ ಸಾಂಕ್ರಾಮಿಕ ರೋಗಗಳು ಬರುತ್ತವೆ. ಅವುಗಳಿಂದ ರಕ್ಷಣೆ ಪಡೆದುಕೊಳ್ಳಲು ಮಾಸ್ಕ್ಗಳು ಸಹಕಾರಿಯಾಗುತ್ತವೆ. ಆದ್ದರಿಂದ ಚಾಲಕರು ತಾವು ಕರ್ತವ್ಯ ನಿರ್ವಹಿಸುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಚಾಲನೆ ಮಾಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ