ಲಿಂಗಾಪುರ-ತಿಮ್ಮಸಾಗರ ಜನರಿಗಿಲ್ಲ ನೀರು


Team Udayavani, Mar 20, 2020, 4:34 PM IST

ಲಿಂಗಾಪುರ-ತಿಮ್ಮಸಾಗರ ಜನರಿಗಿಲ್ಲ ನೀರು

ಸಾಂದರ್ಭಿಕ ಚಿತ್ರ

ಗುಳೇದಗುಡ್ಡ: ಗ್ರಾಮದಲ್ಲಿ ಕಳೆದ ಏಳೆಂಟು ತಿಂಗಳಿಂದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯಲು ಜಂಗುಗೊಂಡ ನೀರೇ ಜನರಿಗೆ ಗತಿಯಾಗಿದ್ದು, ನಿತ್ಯವೂ ಶುದ್ಧ ಕುಡಿಯುವ ನೀರಿನ ಘಟಕದ ವೇಸ್ಟ್‌ ನೀರನ್ನು ದಿನಬಳಕೆಗೆ ಬಳಸುವಂತಾಗಿದೆ.

ಕೆಲವಡಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಲಿಂಗಾಪುರ ಗ್ರಾಮದ ಸದ್ಯದ ಸ್ಥಿತಿ.ಗ್ರಾಮದಲ್ಲಿ ಅಂದಾಜು 3 ಸಾವಿರ ಜನರಿದ್ದು, 450 ಕ್ಕೂ ಹೆಚ್ಚು ಮನೆಗಳಿವೆ. ಆದರೆ ಇಲ್ಲಿ ಹೇಳಿಕೊಳ್ಳುವಷ್ಟು ನೀರಿನ ಸೌಲಭ್ಯವಿಲ್ಲ. ಬಾವಿ ಇದ್ದರೂ ಕುಡಿಯುವ ನೀರಿಲ್ಲ.

ಅರ್ಧ ಇಂಚು ನೀರು: ಗ್ರಾಮದ ಜನರಿಗೆ ನೀರು ಪೂರೈಸುವ ಸಲುವಾಗಿ 6-7 ಕೊಳವೆ ಬಾವಿ ಕೊರೆಸಲಾಗಿತ್ತು. ಆದರೆ, ಅದರಲ್ಲಿ ಎರಡು ಮಾತ್ರ ನೀರು ಬಿದ್ದಿದ್ದು, ಅವು ಕೂಡಾ ತಲಾ ಅರ್ಧ ಇಂಚಿನಷ್ಟು ಮಾತ್ರ ನೀರು ಕೊಡುತ್ತವೆ. ಇದರಿಂದ ಲಭ್ಯವಿರುವ ನೀರಿನಲ್ಲಿಯೇ ಗ್ರಾಮ ಪಂಚಾಯಿತಿಯು ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸಿದೆ. ಗ್ರಾಮದಲ್ಲಿ ಮೂರು ವರ್ಷಗಳಿಂದ ನೀರಿನ ಸಮಸ್ಯೆಯಿದೆ. ಆದರೆ, ಯಾರೊಬ್ಬರು ಗಮನಹರಿಸುತ್ತಿಲ್ಲ.

ವೇಸ್ಟ್‌ ನೀರು: ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದು, ಆ ಘಟಕದಿಂದ ಫಿಲ್ಟರ್‌ ಆಗಿ ಬಂದ ನಂತರ ಬರುವ ವೇಸ್ಟ್‌ ನೀರನ್ನು ಸಹ ಜನರು ತುಂಬಿಕೊಳ್ಳುತ್ತಿದ್ದಾರೆ. ನೀರಿನ ಸಮಸ್ಯೆ ಇರುವುದರಿಂದ ಶುದ್ಧೀಕರಣ ಘಟಕದ ವೇಸ್ಟ್‌ ನೀರನ್ನು ಸಹ ಅನಿವಾರ್ಯವಾಗಿ ಜನರು ದಿನಬಳಕೆಗೆ ಬಳಸುವಂತಾಗಿದೆ.

ತಿಮ್ಮಸಾಗರದಲ್ಲಿಯೂ ಇದೇ ಗೋಳು: ತಿಮ್ಮಸಾಗರ ಗ್ರಾಮದ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ಈ ಗ್ರಾಮದಲ್ಲಿಯು ಸಹ ಜನರಿಗೆ ನಿತ್ಯ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು, ನಿತ್ಯ ಕುಡಿಯುವ ನೀರು ತರಲು ಅರ್ಧ ಕಿ.ಮೀ ದೂರದ ಬಾವಿಯಿಂದ ತರಬೇಕು. ಇನ್ನೂ ಕೊಳವೆಬಾವಿ ನೀರೆ ಜನರಿಗೆ ಆಸರೆಯಾಗಿದ್ದು, ಕೈ ಕೊಟ್ಟರೇ ದೇವರೆ ಗತಿ ಈ ಜನರಿಗೆ. ತಿಮ್ಮಸಾಗರ ಗ್ರಾಮದಲ್ಲಿ ಸುಮಾರು 2 ಸಾವಿರದಷ್ಟು ಜನರಿದ್ದು, 400ಕ್ಕೂ ಹೆಚ್ಚು ಮನೆಗಳಿವೆ. ಗ್ರಾಮದಲ್ಲಿ ಎರಡು ಕೊಳವೆಬಾವಿಗಳಿವೆ. ಆದರೆ ಅವುಗಳ ಪೈಪ್‌ ಗಳು ಕುಸಿದ್ದು ಬಿದ್ದಿವೆ. ಅಲ್ಲದೇ ಎರಡು ಬಾವಿಗಳಿದ್ದು, ಒಂದು ಗ್ರಾಮದಿಂದ ಅರ್ಧ ಕಿ.ಮೀ. ದೂರದಲ್ಲಿದ್ದರೆ, ಇನ್ನೊಂದು ಗ್ರಾಮದ ಮುಂಭಾಗದಲ್ಲಿದೆ. ಆದರೆ ಅದು ಇದ್ದು ಇಲ್ಲದಂತಾಗಿದೆ. ಈ ಬಾವಿ ನೀರನ್ನು ಕೇವಲ ದಿನಬಳಕೆ ಉಪಯೋಗಿಸುವಂತಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ಇದ್ದು ಇಲ್ಲದಂತಾಗಿದೆ. ನಿತ್ಯ ನೀರಿಗಾಗಿ ಪರದಾಡುವಂತಾಗಿದೆ. ಜನರಿಗೆ ಕುಡಿಯಲು ನೀರೇ ಸಿಗುತ್ತಿಲ್ಲ. ಇನ್ನೂ ಶೌಚಾಲಯಕ್ಕೆ ಎಲ್ಲಿಂದ ನೀರು ತರಬೇಕು ಎಂಬುದು ಗ್ರಾಮಸ್ಥರ ಅಳಲು.

ಸಮಸ್ಯೆ ಬಗೆಹರಿದರೆ ಶಾಶ್ವತ ಪರಿಹಾರ: ಕೆಲವಡಿ ಪಂಚಾಯತ ವ್ಯಾಪ್ತಿಯಲ್ಲಿನ ಕೆಲವಡಿ, ಲಿಂಗಾಪುರ, ತಿಮ್ಮಸಾಗರ ಗುಳೇದಗುಡ್ಡ ರೇಲ್ವೆ ಸ್ಟೇಶನ್‌ ಈ ನಾಲ್ಕು ಗ್ರಾಮಗಳಿಗೆ ಅನಗವಾಡಿಯ ಘಟಪ್ರಭಾ ನದಿಗೆ ಪೈಪ್‌ ಲೈನ್‌ ಮಾಡಿ ಅಲ್ಲಿಂದ ನೀರು ಪೂರೈಸಲಾಗುತ್ತಿತ್ತು. ಆದರೆ ಕಳೆದ ವರ್ಷ ಆಗಸ್ಟ್‌ನಲ್ಲಿ ಉಂಟಾದ ಪ್ರವಾಹದಿಂದ ಅನಗವಾಡಿ ಬ್ಯಾರೇಜ್‌ನಲ್ಲಿ ಹಾಕಲಾಗಿದ್ದ ಪೈಪ್‌, ಮೋಟಾರ್‌ ಸುಟ್ಟಿದ್ದು, ಇದರಿಂದ ನೀರು ಸರಬರಾಜು ಸ್ಥಗಿತಗೊಂಡಿದೆ. ಆ ಪೈಪ್‌ಲೈನ್‌ ದುರಸ್ತಿಗೊಂಡರೇ ಈ ನಾಲ್ಕು ಗ್ರಾಮಗಳಿಗೆ ಶಾಶ್ವತವಾಗಿ ನೀರಿನ ಸಮಸ್ಯೆ ಬಗೆಹರಿಯಲಿದೆ.

ಗ್ರಾಮಕ್ಕೆ ಅನಗವಾಡಿಯಿಂದ ನೀರು ಪೂರೈಸಲು ಯೋಜನೆ ಮಾಡಲಾಗಿದೆ. ಆದರೆ ಕಳೆದ ವರ್ಷದ ಪ್ರವಾಹದಿಂದ ಪೈಪ್‌ ಹಾಳಾಗಿದ್ದು, ಆದ್ದರಿಂದ ಇಷ್ಟೇಲ್ಲ ಸಮಸ್ಯೆಯಾಗುತ್ತಿದೆ. ಅನಗವಾಡಿಯಿಂದ ನೀರು ಪೂರೈಸಿ ಸಂಗ್ರಹಿಸಲು ಈಗಾಗಲೇ ಟ್ಯಾಂಕ್‌ ಕೂಡಾ ನಿರ್ಮಾಣವಾಗುತ್ತಿದೆ. 15 ದಿನಗಳಲ್ಲಿ ಲಿಂಗಾಪುರ, ತಿಮ್ಮಸಾಗರ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ಈ ವಾರದಲ್ಲಿ ಬಾದಾಮಿ ತಾಲೂಕಿನ ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲು ಟೆಂಡರ್‌ ಆಹ್ವಾನಿಸಲಾಗುವುದು. ಆ ನಂತರವೇ ಗ್ರಾಮಗಳಿಗೆ ಟ್ಯಾಕರ್‌ ಮೂಲಕ ನೀರು ಪೂರೈಸಲಾಗುವುದು. ಖಾಸಗಿ ಒಡೆತನದ ಬೊರವೆಲ್‌ಗ‌ಳಿಂದ ನೀರು ಪಡೆದು ಜನರಿಗೆ ನೀರು ಕೊಡಿ. ಒಪ್ಪದಿದ್ದರೇ ಸ್ವಾಧೀನಪಡಿಸಿಕೊಂಡು ಜನರಿಗೆ ನೀರು ಕೊಡಿಸುವ ವ್ಯವಸ್ಥೆ ಮಾಡುವೆ.-ಸುಹಾಸ್‌ ಇಂಗಳೆ, ತಹಶೀಲ್ದಾರ್‌

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.