ಕೆಎಫ್‌ಡಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಆಗ್ರಹ


Team Udayavani, Mar 20, 2020, 5:58 PM IST

20-March-30

ಶಿವಮೊಗ್ಗ: ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಕಾಯಿಲೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಎಫ್‌ಡಿ ಜನಜಾಗೃತಿ ಒಕ್ಕೂಟದ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಕಳೆದ ವರ್ಷ ಸುಮಾರು 25 ಮಂದಿಯನ್ನು ಕಾಯಿಲೆ ಬಲಿ ತೆಗೆದುಕೊಂಡಿದೆ. ಮಂಗನ ಕಾಯಿಲೆ ಈ ಬಾರಿಯೂ ಈಗಾಗಲೇ ಒಂದೇ ತಿಂಗಳಲ್ಲಿ ನಾಲ್ಕು ಮಂದಿಯ ಜೀವ ತೆಗೆದಿರುವುದು ಸಾಕಷ್ಟು ಆತಂಕವನ್ನುಂಟು ಮಾಡಿದೆ ಎಂದರು.

ಕಳೆದ ಬೇಸಿಗೆಯಲ್ಲಿ ಹಾಗೂ ಅದರ ಹಿಂದಿನ ವರ್ಷದ ಡಿಸೆಂಬರ್‌ ವೇಳೆಗೆ ಆರಂಭವಾಗಿದ್ದ ಸಾವಿನ ಸರಣಿ ಇದೀಗ ಮತ್ತೆ ಆರಂಭವಾಗಿದೆ. ಅದರಲ್ಲೂ ಮುಖ್ಯವಾಗಿ ಕಳೆದ ವರ್ಷ ಸುಮಾರು 18 ಮಂದಿ ಮೃತಪಟ್ಟಿದ್ದ ಸಾಗರ ತಾಲೂಕಿನ ಭಟ್ಕಳ ಗಡಿಭಾಗದ ಅರಳಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಈ ಬಾರಿ ರೋಗ ಉಲ್ಬಣಿಸಿದೆ. ಅಲ್ಲದೆ ಈಗಾಗಲೇ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದರು.

ಕಳೆದ ವರ್ಷ ರೋಗ ಹಿಂದೆಂದೂ ಕಂಡರಿಯದ ಪ್ರಮಾಣದಲ್ಲಿ ಉಲ್ಬಣಗೊಂಡಿದ್ದು, ಆರಂಭದಲ್ಲಿ ಅಗತ್ಯ ರೋಗ ನಿಯಂತ್ರಣಕ್ಕೆ
ಯಾವುದೇ ಕ್ರಮ ಕೈಗೊಳ್ಳಲಿಲ್ಲ. ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹತ್ತು ಹಲವು ಸಂಘ-ಸಂಸ್ಥೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಸಹ್ಯಾದ್ರಿ ಉತ್ಸವದಲ್ಲಿ ಜಿಲ್ಲಾಡಳಿತ ಮುಳುಗಿತ್ತು. ಜಿಲ್ಲಾಡಳಿತದ ನಿರ್ಲಕ್ಷ್ಯವೇ ಹಲವು ಜೀವಗಳಿಗೆ ಪರೋಕ್ಷ ಕಾರಣವಾಗಿತ್ತು ಎಂದು ಆರೋಪಿಸಿದರು.

1957ರಲ್ಲಿ ರೋಗ ಕಾಣಿಸಿಕೊಂಡಿದ್ದರೂ ಸರ್ಕಾರ ಇದುವರೆಗೂ ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ಇಚ್ಛಾಶಕ್ತಿ ತೋರುತ್ತಿಲ್ಲ. ಪ್ರತಿವರ್ಷ ಕಾಯಿಲೆ ಉಲ್ಬಣವಾದ ನಂತರ ಕಾರ್ಯಪ್ರವೃತ್ತವಾಗುವ ಆರೋಗ್ಯ ಇಲಾಖೆ ಮುಂಜಾಗ್ರತೆಯಾಗಿ ನೀಡುವ ಚುಚ್ಚುಮದ್ದು ಕೂಡ ರೋಗ ತಡೆಗಟ್ಟುವಲ್ಲಿ ವಿಫಲವಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಐವತ್ತು ವರ್ಷದ ಹಿಂದೆ ಸಂಶೋಧನೆಗೊಂಡ ಚುಚ್ಚುಮದ್ದನ್ನು ಈಗಲೂ ನೀಡಲಾಗುತ್ತಿದೆ. ಆದರೆ ವೈರಸ್‌ನಲ್ಲಿ ಆದ ಬೆಳವಣಿಗೆಗೆ ತಕ್ಕಂತೆ ರೋಗ ನಿರೋಧಕ ಚುಚ್ಚುಮದ್ದುಗಳನ್ನು ಸಂಶೋಧಿಸದೆ ಹಳೆಯ ಮಾದರಿಯ ಚುಚ್ಚುಮದ್ದುಗಳನ್ನು ನೀಡುತ್ತಿದ್ದು, ಜನರು ಮುಂಜಾಗ್ರತೆಯಾಗಿ ಚುಚ್ಚುಮದ್ದು ಪಡೆದರೂ ಸಹ ಮಂಗನ ಕಾಯಿಲೆಯಿಂದ ಜನರು ಬಳಲುವಂತಾಗಿದೆ ಎಂದು ಆರೋಪಿಸಿದರು.

ಈ ಬಾರಿ ಕೂಡ ಜಿಲ್ಲಾಡಳಿತ ಮುಂಜಾಗ್ರತೆಯಾಗಿ ಚುಚ್ಚುಮದ್ದು ವಿಷಯದಲ್ಲಾಗಲಿ, ಮಂಗನ ಸಾವಿನ ಪತ್ತೆ ಕೂಂಬಿಂಗ್‌ ಆಗಲಿ, ಕನಿಷ್ಠ ಜನಜಾಗೃತಿಯ ಕ್ರಮವನ್ನಾಗಲಿ ಮುಂಚಿತವಾಗಿ ಕೈಗೊಂಡಿಲ್ಲ. ಲೋಪಗಳ ಫಲವಾಗಿ ಇದೀಗ ಮತ್ತೆ ನಾಲ್ಕು ಮುಗ್ಧ ಜೀವಗಳು ಬಲಿಯಾಗಿವೆ ಎಂದರು. ಕಳೆದ ಬಾರಿ ಸೋಂಕಿತರ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ ಸರ್ಕಾರ, ಈವರೆಗೆ ಖಾಸಗಿ ಆಸ್ಪತ್ರೆಗೆ ಹಣ ಪಾವತಿ ಮಾಡಿಲ್ಲ. ಈ ಕಾರಣಕ್ಕೆ ಕೆಲವು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಚಿಕಿತ್ಸಾ ವೆಚ್ಚವನ್ನು ಸಕಾಲದಲ್ಲಿ ಬಿಡುಗಡೆ ಮಾಡುವಂತೆ ನೋಡಿಕೊಂಡು ಸೋಂಕಿತರ ಚಿಕಿತ್ಸೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಆದರೆ ಈ ವಿಷಯ ಜಿಲ್ಲಾಡಳಿತ ಕಡೆಯಿಂದ ಸಾಕಷ್ಟು ಲೋಪವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ವರ್ಷವೇ ಸಾಗರದಲ್ಲಿ ವೈರಾಣು ರೋಗ ಸಂಶೋಧನೆಗಾಗಿ ವಿಶೇಷ ಪ್ರಯೋಗಾಲಯ ಆರಂಭಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಿದೆ. ಈವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದರು. ಜಿಲ್ಲೆಯ ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗೆ ಅಗತ್ಯ ಚುಚ್ಚುಮದ್ದು ಸೇರಿದಂತೆ ಸೂಕ್ತ ವೈದ್ಯಕೀಯ ಸೌಲಭ್ಯ ಮತ್ತು ಸಿಬ್ಬಂದಿ ವ್ಯವಸ್ಥೆ ಮಾಡಬೇಕು ಎಂದರು.

ಸಾಗರದಲ್ಲಿ ಕೆಎಫ್‌ಡಿ ವೈರಾಣು ಸಂಶೋಧನಾ ಕೇಂದ್ರದ ಆರಂಭಿಸಲು ಶೀಘ್ರಗತಿಯಲ್ಲಿ ಕೆಲಸ ಆರಂಭಿಸಬೇಕು. ಈ ನಮ್ಮ ಹಕ್ಕೊತ್ತಾಯಗಳನ್ನು ಮುಂದಿನ ಹದಿನೈದು ದಿನಗಳಲ್ಲಿ ಈಡೇರಿಸದೇ ಇದ್ದಲ್ಲಿ ವಿವಿಧ ಸಂಘಟನೆಗಳೊಂದಿಗೆ ಜಿಲ್ಲೆಯ ನಾಗರಿಕರನ್ನು ಸಂಘಟಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾಮಾಜಿಕ ಹೋರಾಟಗಾರರಾದ ಕೆ.ಪಿ. ಶ್ರೀಪಾಲ್‌, ಶಶಿ ಸಂಪಳ್ಳಿ, ಎಂ. ಗುರುಮೂರ್ತಿ, ರಾಜಪ್ಪ, ಮಂಜುನಾಥ್‌ ನವುಲೆ, ಚಟ್ನಳ್ಳಿ ನಾಗರಾಜ್‌, ರವಿ, ಮಾಲತೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.