ಅಕ್ಕಿ ಜತೆ ತೊಗರಿ ಬೇಳೆ: ಸಿಎಂ ಜತೆ ಚರ್ಚಿಸಿ ಕ್ರಮ
Team Udayavani, Mar 21, 2020, 3:01 AM IST
ವಿಧಾನಸಭೆ: ಬಿಪಿಎಲ್ ಕಾರ್ಡ್ದಾರರಿಗೆ ಐದು ಕೆಜಿ ಅಕ್ಕಿ ಜತೆ ತಾಳೆ ಎಣ್ಣೆ ಹಾಗೂ ತೊಗರಿಬೇಳೆ ನೀಡುವ ಬಗ್ಗೆ ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಎ.ಟಿ.ರಾಮ ಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ಆಕ್ಕಿಯ ಜತೆಗೆ ತಾಳೆಎಣ್ಣೆ, ಉಪ್ಪು, ಸಕ್ಕರೆ, ತೊಗರಿ ಬೇಳೆ ಕೊಡಲಾಗುತ್ತಿತ್ತು. ನಂತರ ಕ್ರಮೇಣ ನಿಲ್ಲಿಸಲಾಗಿದೆ. ಇದೀಗ ಐದು ಕೆಜಿ ಅಕ್ಕಿ, ಎರಡು ಕೆಜಿ ಗೋದಿ ನೀಡುವ ಪ್ರಸ್ತಾವನೆ ಇದೆ ಎಂದು ಹೇಳಿದರು.