ವಿಧಾನಸಭೆ ಉಪ ಸಭಾಧ್ಯಕ್ಷ ಸ್ಥಾನಕ್ಕೆ ತೀವ್ರಗೊಂಡ ಲಾಬಿ
Team Udayavani, Mar 21, 2020, 3:06 AM IST
ಬೆಂಗಳೂರು: ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸವದತ್ತಿ ಶಾಸಕ ಆನಂದ ಮಾಮನಿ ಹಾಗೂ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ತೀವ್ರ ಪೈಪೋಟಿ ನಡೆಸಿದ್ದಾರೆ. ಕೃಷ್ಣಾ ರೆಡ್ಡಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಆನಂದ ಮಾಮನಿ ಪ್ರಯತ್ನ ನಡೆಸಿದ್ದರು. ಕೃಷ್ಣಾರೆಡ್ಡಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು 24 ಶಾಸಕರ ಸಹಿ ಸಂಗ್ರಹಿಸಿದ್ದರಲ್ಲದೆ, ಈ ಹುದ್ದೆಯನ್ನು ತಮಗೆ ನೀಡಬೇಕೆಂದು ಸಿಎಂ ಬಳಿ ಚರ್ಚಿಸಿ, ಅನುಮತಿಯನ್ನೂ ಪಡೆದುಕೊಂಡಿದ್ದರು.
ಈಗ ಅರಗ ಜ್ಞಾನೇಂದ್ರ ಆಕಾಂಕ್ಷಿಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ನಾಲ್ವರು ಸಚಿವರು, ಕೆಎಂಎಫ್ ಅಧ್ಯಕ್ಷರಿದ್ದು, ಆನಂದ ಮಾಮನಿಗೆ ಅವಕಾಶ ಕಲ್ಪಿಸಿದರೆ ಒಂದೇ ಜಿಲ್ಲೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿದಂತಾಗುತ್ತದೆ ಎಂದು ಪಕ್ಷದ ಮುಖಂಡರ ಎದುರು ವಾದ ಮಂಡಿಸಿದ್ದಾರೆ. ಅಲ್ಲದೆ, ಜ್ಞಾನೇಂದ್ರ ಪರವಾಗಿ ಕೆಲ ಶಾಸಕರು ಸಹಿ ಸಂಗ್ರಹಿಸಿ, ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಜ್ಞಾನೇಂದ್ರ ಕೂಡ ಸಿಎಂ ಭೇಟಿ ಮಾಡಿ ತಮ್ಮನ್ನೇ ಉಪಸಭಾಧ್ಯಕ್ಷರನ್ನಾಗಿ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಚುನಾವಣೆ ಘೋಷಣೆಯಾಗುತ್ತದೆಂಬ ನಿರೀಕ್ಷೆಯಲ್ಲಿದ್ದ ಆನಂದ ಮಾಮನಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದರು. ಈಗ ಜ್ಞಾನೇಂದ್ರ ಆಗಮನದಿಂದ ಯಡಿಯೂರಪ್ಪ ಹಾಗೂ ಪಕ್ಷದ ನಾಯಕರ ನಡುವೆ ಆಂತರಿಕ ಸಂಘರ್ಷ ಏರ್ಪಟ್ಟಂತಾಗಿದ್ದು, ಚುನಾವಣೆಯನ್ನು ತಡೆ ಹಿಡಿಯುವಂತೆ ಸ್ಪೀಕರ್ಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ