ಶೇ.90 ಶೌಚಾಲಯ ಬಳಕೆ

ಬೆರಳೆಣಿಕೆಯಷ್ಟು ಕುಟುಂಬಗಳಿಗಿದೆ ಸ್ಥಳದ ಕೊರತೆ ಸಾರ್ವಜನಿಕ ಶೌಚಾಲಯ ಇಲ್ಲ

Team Udayavani, Mar 21, 2020, 1:29 PM IST

21-March-12

ಸೈದಾಪುರ: ಪಟ್ಟಣದಲ್ಲಿ ಶೇ. 90ರಷ್ಟು ಶೌಚಾಲಯ ಬಳಕೆಯಾಗುತ್ತಿರುವುದು ಗಮನಾರ್ಹವಾಗಿದೆ. ವ್ಯಾಪಾರ ಮತ್ತು ಶೈಕ್ಷಣಿಕ ಕೇಂದ್ರವಾಗಿರುವುದರಿಂದ ಸಂಘ ಸಂಸ್ಥೆಗಳ ಸ್ವಚ್ಛತೆ ಜಾಗೃತಿ ಮತ್ತು ಗ್ರಾಪಂ ಸದಸ್ಯರು ಮತ್ತು ಅಧಿಕಾರಿಗಳ ಪರಿಶ್ರಮದಿಂದ ಇಲ್ಲಿನ ಜನರು ಸರ್ಕಾರದ ಸಹಾಯಧನ ಮತ್ತು ವೈಯಕ್ತಿಕ ಕಾಳಜಿಯಿಂದ ಶೌಚಾಲಯ ನಿರ್ಮಿಸಿಕೊಂಡು ಬಳಸುತ್ತಿದ್ದಾರೆ. ಆದರೆ ಬೆರಳೆಣಿಕೆಯಷ್ಟು ಕುಟುಂಬಗಳಿಗೆ ಸ್ಥಳದ ಕೊರತೆ ಇದೆ. ಹಾಗಾಗಿ ಶೌಚಕ್ಕೆ ಬಯಲಿಗೆ ಹೋಗುವುದು ಅನಿವಾರ್ಯವಾಗಿದೆ.

ಪಟ್ಟಣದಲ್ಲಿ ಸುಮಾರು 1000 ಕಟುಂಬಗಳಿವೆ. ಐದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಇಲ್ಲಿನ ಗ್ರಾಪಂ ಸದಸ್ಯರ ಕಾಳಜಿಯಿಂದ ಪಟ್ಟಣದಲ್ಲಿ ಒಟ್ಟು 908 ವೈಯಕ್ತಿಕ ಶೌಚಾಲಯಗಳು ನಿರ್ಮಾಣವಾಗಿವೆ. ನಿರ್ಮಾಣ ಮತ್ತು ಬಳಕೆಯಾಗುತ್ತಿರುವದರಿಂದ ಪಟ್ಟಣವನ್ನು ಕೆಲವು ದಿನಗಳಲ್ಲಿ ಬಯಲು ಮುಕ್ತ ಪಟ್ಟಣವಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ.

ಸಮುದಾಯ ಶೌಚಾಲಯ ಅವಶ್ಯ
ಪಟ್ಟಣಕ್ಕೆ ದಿನನಿತ್ಯ ವ್ಯಾಪಾರ ಮತ್ತು ಶಿಕ್ಷಣಕ್ಕೆ ಸಾವಿರಾರೂ ಜನರು ಮತ್ತು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಆದರೆ ಇಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲ. ಇದರಿಂದ ಬಯಲಿಗೆ ತೆರಳುವುದು ಸಾಮಾನ್ಯವಾಗಿ ಕಂಡು ಬರುತ್ತದೆ. ಆದ್ದರಿಂದ ಗ್ರಾಪಂ ಅಧಿಕಾರಿಗಳು ಮತ್ತು ಸದಸ್ಯರು ಗಮನಹರಿಸಿ ಸೂಕ್ತ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ ಅನುಕೂಲ ಮಾಡಿಕೊಟ್ಟಾಗ ಬಯಲು ಮುಕ್ತ ಪಟ್ಟಣವಾಗಲು ಸಾಧ್ಯ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಬಯಲು ಶೌಚ ಮುಕ್ತ ದೇಶವಾಗಿಸಲು ಸ್ವತ್ಛ ಭಾರತ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು 12, 000 ರೂ. ಸಹಾಯ ಧನ ನೀಡುತ್ತಿದೆ. ಜನರು ಕಾಳಜಿಯಿಂದ ಉತ್ತಮ ಶೌಚಾಲಯ ನಿರ್ಮಿಸಿಕೊಂಡು ಬಳಸುತ್ತಿದ್ದಾರೆ. ಇನ್ನೂ ಕೆಲವರು ಶೌಚಕ್ಕೆ ಬಯಲಿಗೆ ಹೋಗುತ್ತಿರುವುದು ಕಂಡು ಬಂದಿದೆ. ಅವರ ಕುಟುಂಬದ ಸದಸ್ಯರಿಗೆ ಸ್ವಚ್ಛತೆ ಬಗ್ಗೆ ಅರಿವು ನೀಡಿ ಶೌಚಾಲಯ ನಿರ್ಮಾಣ ಮತ್ತು ಬಳಸುವಂತೆ ಮಾಡುತ್ತೇವೆ.

ಶರಣಮ್ಮ ಹಣಮಂತ
ವಡವಟ್‌, ಗ್ರಾಪಂ ಸದಸ್ಯೆ

2013-14ಕ್ಕೆ ಹೋಲಿಸಿದರೆ ಶೌಚಾಲಯಗಳ ನಿರ್ಮಾಣ ಮತ್ತು ಬಳಕೆ ಮಾಡುವುದರಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಇಲ್ಲಿನ ಜನರು ಸ್ವತ್ಛತೆ ಬಗ್ಗೆ ಅರಿವು ಇರುವುದರಿಂದ ನಮ್ಮ ಕಾರ್ಯ ಸುಲಭವಾಗಿ ಮುಗಿದಿದೆ. ಮುಂದಿನ ದಿನಗಳಲ್ಲಿ ಜನರ ಮತ್ತು ಗ್ರಾಪಂ ಸದಸ್ಯರ ಸಹಕಾರದೊಂದಿಗೆ ಬಯಲು ಮುಕ್ತ ಪಟ್ಟಣ ಮಾಡುವ ಗುರಿ ಹೊಂದಿದ್ದು, 2019-20ನೇ ಸಾಲಿಗೆ ಅನೇಕ ಅರ್ಜಿಗಳು ಬಂದಿವೆ. ಅತಿ ಶೀಘ್ರದಲ್ಲಿ ನಿರ್ಮಾಣ ಮಾಡಲು ಪ್ರೋತ್ಸಾಹ ಮತ್ತು ಮಾರ್ಗದರ್ಶನ ಮಾಡಲಾಗುವುದು.
ಶಂಕ್ರಪ್ಪ ,
ಗ್ರಾಪಂ ಅಭಿವೃದ್ಧಿ ಅಧಿಕಾರಿ
ಸೈದಾಪುರ

ಭೀಮಣ್ಣ ಬಿ. ವಡವಟ್‌

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.