ಕನ್ನಡಕ್ಕೆ ಸಯೇಷಾ ಪದಾರ್ಪಣೆ


Team Udayavani, Mar 22, 2020, 4:27 AM IST

ಕನ್ನಡಕ್ಕೆ ಸಯೇಷಾ ಪದಾರ್ಪಣೆ

ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯರಾಗಿ ಪರಭಾಷಾ ಕಲಾವಿದರ ಆಗಮನವಾಗುವುದು ಹೊಸದೇನಲ್ಲ. ಪರಭಾಷಾ ನಟಿಯರನ್ನು ಕರೆತಂದು, ಇಲ್ಲಿ ಅವರಿಗೆ ಸಾಕಷ್ಟು ಹೆಸರು, ಜನಪ್ರಿಯತೆ ಗಳಿಸಲು ಅವಕಾಶ ಕಲ್ಪಿಸುವುದುಂಟು. ಈಗಾಗಲೇ ಪ್ರತಿವರ್ಷ ಇಂತಹ ಹತ್ತಾರು ನಟಿಯರು ಪರಭಾಷೆಯಿಂದ ಕನ್ನಡಕ್ಕೆ ಬಂದು ಮಿಂಚಿ ಇಲ್ಲೇ ಸೆಟಲ್‌ ಆಗುವುದು ಅಥವಾ ವಾಪಾಸ್‌ ಹೋಗುವುದು ನಡೆದುಕೊಂಡೇ ಬರುತ್ತಿದೆ. ಈ ವರ್ಷ ಈ ಸಾಲಿಗೆ ಮತ್ತೂಬ್ಬ ತಮಿಳಿನ ಜನಪ್ರಿಯ ನಟಿಯ ಹೆಸರು ಸೇರ್ಪಡೆಯಾಗುತ್ತಿದೆ. ಅವರೇ ಸಯೇಷಾ ಸೈಗಲ್‌.

2015ರಲ್ಲಿ ತೆರೆಕಂಡ ತೆಲುಗಿನ ಅಖಿಲ್‌ ಚಿತ್ರದ ಮೂಲಕ ನಾಯಕ ನಟಿಯಾಗಿ ಬೆಳ್ಳಿತೆರೆಗೆ ಪರಿಚಯವಾದ ನಟಿ ಸಯೇಷಾ ಸೈಗಲ್‌, ನಂತರ ಶಿವಾಯ್‌ ಚಿತ್ರದ ಮೂಲಕ ಬಾಲಿವುಡ್‌ಗೂ ಅಡಿಯಿಟ್ಟ ಚೆಲುವೆ. ಅದಾದ ನಂತರ ತಮಿಳು ಚಿತ್ರರಂಗದತ್ತ ಮುಖಮಾಡಿದ ಸಯೇಷಾ ಸೈಗಲ್‌, ವನಮಗನ್‌, ಕುದಾಯಿಕುಟ್ಟಿ ಸಿಂಘಂ, ಜುಂಗಾ, ಘಜಿನಿಕಾಂತ್‌, ಕಾಪ್ಪಾನ್‌ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿ ನೆಲೆಯನ್ನು ತಮಿಳಿನಲ್ಲಿ ಭದ್ರಪಡಿಸಿಕೊಂಡಾಕೆ. ಸದ್ಯ ಸಯೇಷಾ ತಮಿಳಿನಲ್ಲಿ ಟೆಡ್ಡಿ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರ ಕೂಡ ಈ ವರ್ಷದ ಕೊನೆಗೆ ತೆರೆಗೆ ಬರುವ ಸಾಧ್ಯತೆ ಇದೆ.

ಇವೆಲ್ಲದರ ನಡುವೆ ಸಯೇಷಾ ಸೈಗಲ್‌ ಎನ್ನುವ ಈ ಚೆಲುವೆ ಈಗ ಕನ್ನಡ ಚಿತ್ರರಂಗಕ್ಕೂ ಎಂಟ್ರಿಯಾಗುತ್ತಿದ್ದಾರೆ. ಹೌದು, ಸಯೇಷಾ ಸೈಗಲ್‌ ಶೀಘ್ರದಲ್ಲಿಯೇ ಯುವರತ್ನ ಚಿತ್ರದ ಮೂಲಕ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ. ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ ಯುವರತ್ನ ಚಿತ್ರದಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿರುವ ಸಯೇಷಾ ಸೈಗಲ್‌, ಕನ್ನಡ ಚಿತ್ರರಂಗದಲ್ಲೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ಪುನೀತ್‌ ರಾಜಕುಮಾರ್‌ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಯುವರತ್ನ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಇದರಲ್ಲಿ ಅವರು ಹೋಮ್ಲಿ ಲುಕ್‌ನಲ್ಲಿ ಗಮನ ಸೆಳೆಯುತ್ತಿದ್ದಾರೆ.

ಇನ್ನು ಮೊದಲ ಬಾರಿ ಕನ್ನಡ ಚಿತ್ರರಂಗಕ್ಕೆ ಪ್ರವೇಶವಾಗುತ್ತಿರುವುದರ ಬಗ್ಗೆ ಮಾತನಾಡುವ ಅವರು, “ದಕ್ಷಿಣ ಭಾರತದಲ್ಲಿ ಈಗಾಗಲೇ ತೆಲುಗು, ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಇಲ್ಲಿರುವ ಇನ್ನೊಂದು ದೊಡ್ಡ ಚಿತ್ರರಂಗದ ಕನ್ನಡದಲ್ಲೂ ಅಭಿನಯಿಸಬೇಕು ಎಂಬ ಆಸೆಯಿತ್ತು. ಆ ಆಸೆ ಈಗ ಈಡೇರುತ್ತಿದೆ. ಮೊದಲ ಬಾರಿಗೆ ಕನ್ನಡದಲ್ಲಿ ಪುನೀತ್‌ ರಾಜಕುಮಾರ್‌ ಅವರಂಥ ಬಿಗ್‌ ಸ್ಟಾರ್‌ ಜೊತೆಗೆ ಕನ್ನಡದಲ್ಲಿ ನಟಿಸಲು ಅವಕಾಶ ಸಿಕ್ಕಿದ್ದಕ್ಕೆ ನಾನು ಲಕ್ಕಿ ಎಂದೇ ಭಾವಿಸುತ್ತೇನೆ. ಇಡೀ ಚಿತ್ರತಂಡದ ಜೊತೆ ಯುವರತ್ನ ಸಿನಿಮಾದಲ್ಲಿ ಕೆಲಸ ಮಾಡಿದ್ದು ಒಂದೊಳ್ಳೆ ಅನುಭವ ಕೊಟ್ಟಿದೆ. ಆದಷ್ಟು ಬೇಗ ಕನ್ನಡದ ಸ್ಕ್ರೀನ್‌ನಲ್ಲಿ ನಾನು ಹೇಗೆ ಕಾಣುತ್ತೇನೆ ಎಂದು ನೋಡುವ ಕುತೂಹಲ ನನಗೂ ಇದೆ. ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಈ ಸಿನಿಮಾ ಮತ್ತು ನನ್ನ ಪಾತ್ರ ಎರಡೂ ಇಷ್ಟವಾಗುತ್ತದೆ’ ಎಂದು ಭರವಸೆಯ ಮಾತುಗಳನ್ನಾಡುತ್ತಾರೆ.

“ಇನ್ನು ಮುಂದಿನ ದಿನಗಳಲ್ಲಿ ಕನ್ನಡದಲ್ಲಿ ಮತ್ತಷ್ಟು ಅವಕಾಶಗಳು ಬಂದರೆ ಅಭಿನಯಿಸುತ್ತೀರಾ’ ಎಂಬ ಪ್ರಶ್ನೆಗೆ ಉತ್ತರಿಸುವ ಸಯೇಷಾ, “ನಾನೊಬ್ಬಳು ಕಲಾವಿದೆ. ನನಗೆ ಅಭಿನಯ ಮತ್ತು ನನ್ನ ಪಾತ್ರಗಳು ಮುಖ್ಯವೇ ಹೊರತು ಯಾವುದೇ ಭಾಷೆಯಲ್ಲ. ಹಾಗಾಗಿ ತೆಲುಗು, ತಮಿಳು, ಕನ್ನಡ ಹೀಗೆ ಯಾವುದೇ ಭಾಷೆಯ ಸಿನಿಮಾಗಳಿರಲಿ, ಅಲ್ಲಿ ಒಳ್ಳೆಯ ಸಬ್ಜೆಕ್ಟ್ ಮತ್ತು ನನಗೆ ಒಪ್ಪುವಂಥ ಪಾತ್ರಗಳಿದ್ದರೆ, ಖಂಡಿತ ಅಭಿನಯಿ ಸುತ್ತೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

Baratang‌ Island: ಬಾರಾತಂಗ್‌ ಎಂಬ ಬೆರಗು

Mother’s Day: ಅಮ್ಮ ಅಂದರೆ ಪ್ರೀತಿಯ ಕಡಲು, ಮಮತೆಯ ಮಡಿಲು 

Mother’s Day: ಅಮ್ಮ ಅಂದರೆ ಪ್ರೀತಿಯ ಕಡಲು, ಮಮತೆಯ ಮಡಿಲು 

11

ಮೊಬೈಲ್‌ ಮಾಯಾಜಾಲ ರೀಲ್ಸ್‌ ಇಂದ್ರಜಾಲ!: ರೀಲ್‌ಗ‌ಳಿಗೆ ಮರುಳಾಗಬೇಡಿ, ನೆನಪು ಕುಂದುತ್ತೆ 

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.