ಕೋವಿಡ್- 19 ಆತಂಕ: ಲಕ್ಷದ್ವೀಪಕ್ಕೆ ಅಗತ್ಯ ವಸ್ತುಗಳ ಕೊರತೆ ಕಾಡುವ ಭೀತಿ


Team Udayavani, Mar 22, 2020, 12:09 AM IST

ಕೋವಿಡ್- 19 ಆತಂಕ: ಲಕ್ಷದ್ವೀಪಕ್ಕೆ ಅಗತ್ಯ ವಸ್ತುಗಳ ಕೊರತೆ ಕಾಡುವ ಭೀತಿ

ಇತ್ತೀಚೆಗೆ ಹಳೆಬಂದರಿಗೆ ಆಗಮಿಸಿದ್ದ ಲಕ್ಷದ್ವೀಪದ ನೌಕೆ.

ಮಹಾನಗರ: ಜಗತ್ತನ್ನೇ ಆತಂಕಕ್ಕೆ ದೂಡಿರುವ ಕೊರೊನಾ ಸೋಂಕು ದ್ವೀಪ ಪ್ರದೇಶಗಳ ಆತಂಕವನ್ನು ಇಮ್ಮಡಿಗೊಳಿಸಿದೆ. ಕೇಂದ್ರಾಡಳಿತ ಪ್ರದೇಶವಾಗಿರುವ ಲಕ್ಷದ್ವೀಪಕ್ಕೆ ಕೊರೊನಾ ಸೋಂಕಿನ ಭಯದ ಜತೆಗೆ ಜೀವನಾವಶ್ಯಕ ವಸ್ತುಗಳ ಕೊರತೆಯ ಭೀತಿ ಉಂಟಾಗಿದೆ.

ಆಹಾರವೂ ಸಹಿತ ದಿನಬಳಕೆಯ ಸಾಮಗ್ರಿಗಳಿಗೆ ಮಂಗಳೂರು ಮತ್ತು ಕೇರಳ ವನ್ನು ಅವಲಂಬಿಸಿರುವ ಲಕ್ಷದ್ವೀಪ ಕೇವಲ ಮಂಗಳೂರಿನಿಂದ ವರ್ಷಕ್ಕೆ ಸರಿಸುಮಾರು 6,652 ಮೆಟ್ರಿಕ್‌ ಟನ್‌ ಆಹಾರ ಧಾನ್ಯಗಳನ್ನೇ ಪಡೆದು ಕೊಳ್ಳುತ್ತಿದೆ. ತೆಂಗಿನಕಾಯಿ ಮತ್ತು ಮೀನು ಹೊರತುಪಡಿಸಿದರೆ ಉಳಿದೆಲ್ಲ ಅಗತ್ಯ ಪರಿಕರಗಳು ಮಂಗಳೂರು, ಕಲ್ಲಿ ಕೋಟೆ ಮೂಲಕ ಈ ದ್ವೀಪ ಪ್ರದೇಶಕ್ಕೆ ರವಾನೆ ಯಾಗುತ್ತದೆ. ಇದೀಗ ಕೇರಳದಲ್ಲಿ ಕೋವಿಡ್- 19 ದೃಢಪಟ್ಟಿರುವುದರಿಂದ ಅಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಸೋಂಕು ನಿಯಂತ್ರಿ ಸಲು ಕಠಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬಂದರುಗಳಲ್ಲಿಯೂ ತೀವ್ರ ತಪಾಸಣೆ ನಡೆಯುತ್ತಿದೆ. ಇತ್ತ ಮಂಗಳೂರಿ ನಲ್ಲಿಯೂ ತಪಾಸಣೆ ನಡೆಯುತ್ತಿದೆ. ಒಂದು ವೇಳೆ ಸ್ಥಿತಿ ಹೀಗೆಯೇ ಮುಂದುವರಿದರೆ ಜಲಮಾರ್ಗಗಳನ್ನು ಕೂಡ ಮುಚ್ಚುವ ಸಾಧ್ಯತೆಗಳು ಹೆಚ್ಚಾಗಿದ್ದು, ಅಗತ್ಯ ಸಾಮಗ್ರಿ ಗಳ ಪೂರೈಕೆ ಸವಾಲಾಗಲಿದೆ.

ಪ್ರಯಾಣಿಕ ನೌಕೆಗೆ ನಿರ್ಬಂಧ
ಮಂಗಳೂರು ಹಳೆ ಬಂದರಿಗೆ ಲಕ್ಷದ್ವೀಪದಿಂದ ಪ್ರಯಾಣಿಕ ನೌಕೆ ಕೂಡ ಸಾಮಾನ್ಯವಾಗಿ ವಾರಕ್ಕೊಮ್ಮೆ ಬರುತ್ತದೆ. ಅದರಲ್ಲಿ ಬರುವ ಅಲ್ಲಿನ ಪ್ರಯಾಣಿಕರು ತಮಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ ಹೋಗುತ್ತಿದ್ದರು. ಮಾ. 13ರಂದು ಆಗಮಿ ಸಿದ್ದ ಪ್ರಯಾಣಿಕ ನೌಕೆಯಲ್ಲಿದ್ದ ಸಿಬಂದಿ, ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಇದೀಗ ಪ್ರಯಾಣಿಕ ನೌಕೆಗಳನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೆ ಸರಕು ನೌಕೆಗಳಿಗೆ ಅವಕಾಶವಿದೆ. ಮುಂದೆ ಸರಕು ನೌಕೆಗಳನ್ನು ಕೂಡ ನಿರ್ಬಂಧಿಸಿದರೆ ದ್ವೀಪ ಪ್ರದೇಶದ ಜನತೆ ತೊಂದರೆಗೀಡಾಗಬಹುದು.

ಮುಂಜಾಗ್ರತೆಗೆ ಸೂಚನೆ
ಲಕ್ಷದ್ವೀಪ ಕರ್ನಾಟಕ, ಕೇರಳ, ಕೊಚ್ಚಿ ಬಂದರುಗಳ ಮೂಲಕ ಅಗತ್ಯ ವಸ್ತುಗಳನ್ನು ತರಿಸಿ ಕೊಳ್ಳುತ್ತಿದೆ. ಸದ್ಯಕ್ಕೆ ಯಾವುದೇ ತೊಂದರೆ ಯಾಗಿಲ್ಲ. ಆದಾಗ್ಯೂ ಇಲ್ಲಿನ ಹೋಲ್‌ ಸೇಲ್‌ ಏಜೆನ್ಸಿ, ಕೋ-ಆಪರೇಟಿವ್‌ ಮಾರ್ಕೆ ಟಿಂಗ್‌ ಫೆಡರೇಷನ್‌ಗೆ ಅಗತ್ಯ ಮುನ್ನೆ ಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಲಕ್ಷದ್ವೀಪ ದಲ್ಲಿ ಇದುವರೆಗೆ ಯಾವುದೇ ಕೋವಿಡ್- 19 ದೃಢವಾಗಿಲ್ಲ. 8 ಮಂದಿಯನ್ನು ಕ್ವಾರಂಟೈನ್‌ನಲ್ಲಿಟ್ಟು ನಿಗಾ ವಹಿಸಲಾಗಿದ್ದು. ಪರಿಸ್ಥಿತಿಯ ಅರಿವಿದೆ. ಅಗತ್ಯ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳುತ್ತಿದ್ದೇವೆ.
 - ಮಹಮ್ಮದ್‌ ಫೈಝಲ್‌, ಸಂಸದರು, ಲಕ್ಷದ್ವೀಪ

ಕಾರ್ಮಿಕರ ಬಗ್ಗೆ ಹೆಚ್ಚಿನ ಕಾಳಜಿ
ಲಕ್ಷದ್ವೀಪಕ್ಕೆ ಅಗತ್ಯವಸ್ತುಗಳನ್ನು ಕಳುಹಿಸಿ ಕೊಡುವುದಕ್ಕೆ ಸದ್ಯಕ್ಕೆ ನಿಬಂìಧವಿಲ್ಲ. ಮಂಗಳೂರು ಮತ್ತು ಲಕ್ಷದ್ವೀಪ ಎರಡೂ ಕಡೆ ವಿಶೇಷ ತಪಾಸಣೆ ನಡೆಸಲಾಗುತ್ತಿದೆ. ಲಕ್ಷದ್ವೀಪದಲ್ಲಿ ಕೂಡ ಪರೀಕ್ಷಾ ವರದಿಯನ್ನು ನೋಡಿಯೇ ಪ್ರವೇಶ ನೀಡಲಾಗುತ್ತಿದೆ. ಇಲ್ಲಿನ ಕಾರ್ಮಿಕರ ಬಗ್ಗೆ ನಾವು ಹೆಚ್ಚಿನ ಕಾಳಜಿ ವಹಿಸುತ್ತಿದ್ದೇವೆ.
 - ಉಸ್ಮಾನ್‌ ಮಂಗಳೂರು, ಅಗತ್ಯ ವಸ್ತುಗಳ ಪೂರೈಕೆದಾರ

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.