ಜನತಾ ಕರ್ಪ್ಯೂಗೆ ಜನರ ಬೆಂಬಲ: ಬಸ್, ರೈಲು ಸಂಚಾರವಿಲ್ಲ, ಕೋಟೆನಾಡು ಸ್ಥಬ್ದ
Team Udayavani, Mar 22, 2020, 8:57 AM IST
ಚಿತ್ರದುರ್ಗ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಜನತಾ ಕರ್ಫ್ಯೂಗೆ ಕೋಟೆನಾಡು ಚಿತ್ರದುರ್ಗದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.
ಬೆಳಗಿನಿಂದ ಸಂಚರಿಸಬೇಕಾಗಿದ್ದ ರೈಲು, ಬಸ್ಸು ಎಲ್ಲವೂ ಬಂದ್ ಆಗಿವೆ. ಈವರೆಗೆ ಯಾವುದೇ ಕೆಎಸಾರ್ಟಿಸಿ, ಖಾಸಗಿ ಬಸ್ಸುಗಳು ಸಂಚರಿಸಿಲ್ಲ. ಬರಬೇಕಾಗಿದ್ದ ರೈಲುಗಳು ಬಂದಿಲ್ಲ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದರು.
ಕೋವಿಡ್-19 ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಕರೆ ನೀಡಿರುವ ಬಂದ್ ಉದ್ದೇಶವನ್ನು ಅರ್ಥ ಮಾಡಿಕೊಂಡ ಜನತೆ ಮನೆಯಿಂದ ಹೊರ ಬರುತ್ತಿಲ್ಲ. ಇಡೀ ದಿನ ಮನೆಯಲ್ಲಿಯೇ ಇರಲು ತೀರ್ಮಾನಿಸಿರುವುದು ಸ್ಪಷ್ಟವಾಗಿದೆ.
ಆಗಾಗ ಕೆಲ ಆಟೊಗಳು ಮಾತ್ರ ಕಾಣಿಸಿಕೊಳ್ಳುತ್ತಿವೆ. ಹಾಲು, ಪತ್ರಿಕೆ, ಹೂ ಖರೀದಿಗೆ ಮನೆಯಿಂದ ಹೊರಗೆ ಬಂದಿದ್ದ ಜನತೆ 7 ಗಂಟೆ ಹೊತ್ತಿಗೆ ಮನೆ ಸೇರಿಕೊಂಡಿದ್ದಾರೆ.
ಸದಾ ಗ್ರಾಹಕರು ಮತ್ತು ವ್ಯಾಪಾರಿಗಳಿಂದ ತುಂಬಿರುತ್ತಿದ್ದ ತರಕಾರಿ ಮಾರುಕಟ್ಟೆ ಜನರಿಲ್ಲದೇ ಬಿಕೋ ಎನ್ನುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಜನ ಸಂಚಾರ ಅಪರೂಪವಾಗಿದೆ.
ಹೋಟೆಲ್, ಟೀ ಅಂಗಡಿ ಯಾವುದೂ ತೆರೆಯದ ಕಾರಣ ಕೆಲವರು ಬೆಳಗ್ಗೆ ಪರದಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.