ರಾಬರ್ಟ್ ದೋಸ್ತಾ ಕಣೋ..
Team Udayavani, Mar 22, 2020, 12:09 PM IST
ಎಲ್ಲ ವಾತಾವರಣ ಸಹಜ ಸ್ಥಿತಿಯಲ್ಲಿದ್ದರೆ, ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ, ಇಷ್ಟೊತ್ತಿಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ “ರಾಬರ್ಟ್’ ಚಿತ್ರದ ಆಡಿಯೋ ಉತ್ತರ ಕರ್ನಾಟಕದಲ್ಲಿ ಅದ್ಧೂರಿಯಾಗಿ ಹೊರ ಬರಬೇಕಿತ್ತು. ಆದರೆ ಕೋವಿಡ್ 19 ಎಫೆಕ್ಟ್ ಚಿತ್ರತಂಡದ ಎಲ್ಲ ಚಟುವಟಿಕೆಗಳಿಗೂ ಬ್ರೇಕ್ ಹಾಕಿರುವುದರಿಂದ, “ರಾಬರ್ಟ್’ ಕೂಡ ಕೊರೊನಾ ಕಂಟಕಕ್ಕೆ ಸಿಲುಕಿದೆ. ಸದ್ಯ ಸೋಶಿಯಲ್ ಮೀಡಿಯಾಗಳನ್ನೇ ವೇದಿಕೆಯಾಗಿ ಬಳಸಿಕೊಳ್ಳುತ್ತಿರುವ “ರಾಬರ್ಟ್’ ಚಿತ್ರತಂಡ, ಫೇಸ್ಬುಕ್, ಟ್ವೀಟರ್, ಇನ್ಸ್ಟಾ ಗ್ರಾಂ ಮೂಲಕವೇ “ರಾಬರ್ಟ್’ನನ್ನು ಅಭಿಮಾನಿಗಳಿಗೆ ತಲುಪಿಸುವ ಕೆಲಸ ಮಾಡುತ್ತಿದೆ.
ಇದೀಗ ಸೋಶಿಯಲ್ ಮೀಡಿಯಾ ಮೂಲಕವೇ ಚಿತ್ರತಂಡ “ರಾಬರ್ಟ್’ ಚಿತ್ರದ ಹಾಡುಗಳನ್ನು ಒಂದರ ಹಿಂದೊಂದರಂತೆ ಬಿಡುಗಡೆ ಮಾಡುತ್ತಿದೆ. ಈಗಾಗಲೇ “ರಾಬರ್ಟ್’ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸೌಂಡ್ ಮಾಡುತ್ತಿರುವಂತೆಯೇ ಮೂರನೇ ಹಾಡನ್ನು ಶನಿವಾರ (ಮಾ. 21)ರಂದು ಚಿತ್ರತಂಡ ಅದ್ಧೂರಿಯಾಗಿ ರಿಲೀಸ್ ಮಾಡಿದೆ.
ನಾಯಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಟ್ವೀಟರ್ನಲ್ಲಿ “ರಾಬರ್ಟ್’ ಚಿತ್ರದ ಹಾಡಿನ ವಿಡಿಯೋ ಲಿಂಕ್ ಹಾಕಿ ಅದಕ್ಕೆ, “ನಮ್ಮ ರಾಬರ್ಟ್ ಚಿತ್ರದ ಮೂರನೇ ಹಾಡು ದೋಸ್ತಾ ಕಣೋ’ ಈಗ ಬಿಡುಗಡೆಯಾಗಿದೆ. ನೋಡಿ ನಿಮ್ಮ ಅನಿಸಿಕೆ ತಿಳಿಸಿ’ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯ ಈ ಹಾಡಿಗೆ ವಿಜಯ್ ಪ್ರಕಾಶ್ ಹಾಗೂ ಹೇಮಂತ್ ಧ್ವನಿಯಾಗಿದ್ದಾರೆ.
ಸದ್ಯ ಬಿಡುಗಡೆಯಾಗಿರುವ “ರಾಬರ್ಟ್’ ಚಿತ್ರದ “ದೋಸ್ತಾ ಕಣೋ…’ ಹಾಡು ಸಾಮಾಜಿಕ ಜಾಲತಾಣದಲ್ಲಿ ಒಂದಷ್ಟು ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದ್ದು, ದರ್ಶನ್ ಅಭಿಮಾನಿಗಳ ಮನಗೆಲ್ಲಲು ಯಶಸ್ವಿಯಾಗುತ್ತಿದೆ. ಇನ್ನು “ರಾಬರ್ಟ್’ ಚಿತ್ರದಲ್ಲಿ ನಟ ದರ್ಶನ್ ಸಂಜಯ್, ಅಕ್ಬರ್ ಹಾಗೂ ರಾಬರ್ಟ್ ಎಂಬ ಮೂರು ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಆಶಾ ಭಟ್ ನಾಯಕಿಯಾಗಿ ಜೊತೆಯಾಗಿದ್ದಾರೆ. ತೆಲುಗು ನಟ ಜಗಪತಿ ಬಾಬು ಚಿತ್ರದಲ್ಲಿ ಖಡಕ್ ವಿಲನ್ ಆಗಿ ಅಬ್ಬರಿಸುತ್ತಿದ್ದು, ತರುಣ್ ಸುಧೀರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಸುದೀಪ್ ಅಭಿನಯದ “ಹೆಬ್ಬುಲಿ’ ಚಿತ್ರವನ್ನು ನಿರ್ಮಿಸಿದ್ದ, ಉಮಾಪತಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…