ಮಕ್ಕಳ ಜೀವಕ್ಕೆ ಕಂಟಕವಾದ ಶೌಚಾಲಯ ಗುಂಡಿ!
ಶೌಚಾಲಯ ನಿರ್ಮಾಣಕ್ಕೆ ಗುಂಡಿ ತೆಗೆದು ಬಿಟ್ಟಿರುವುದಕ್ಕೆ ಅಧಿಕಾರಿಗಳ ವಿರುದ್ಧ ಆಕ್ರೋಶ
Team Udayavani, Mar 22, 2020, 3:43 PM IST
ಸಿರುಗುಪ್ಪ: ತಾಲೂಕಿನ ಅಗಸನೂರು ಗ್ರಾಮದಲ್ಲಿರುವ 2ನೇ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿಯಲ್ಲಿ ರೂ. 40ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯದ ಗುಂಡಿಯನ್ನು ಮುಚ್ಚದೆ ಬಿಟ್ಟಿರುವುದು ಅಂಗನವಾಡಿಗೆ ಬರುವ ಮಕ್ಕಳಿಗೆ ಕಂಟಕವಾಗಿ ಪರಿಣಮಿಸಿದೆ.
ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಶೌಚಾಲಯ ಹೊಂದಬೇಕು ಎನ್ನುವ ಉದ್ದೇಶದಿಂದ ಸರ್ಕಾರವು ಸ್ವತ್ಛಭಾರತ್ ಅಭಿಯಾನ ಯೋಜನೆಯಡಿ ಈ ಅಂಗನವಾಡಿ ಕೇಂದ್ರದ ಪಕ್ಕದಲ್ಲಿಯೇ ಶೌಚಾಲಯವನ್ನು ನಿರ್ಮಾಣ ಮಾಡಿದೆ. ಆದರೆ ಶೌಚಾಲಯಕ್ಕೆ ಗುಂಡಿಯನ್ನು ತೆಗೆದು ಹಾಗೆ ಬಿಟ್ಟಿರುವುದರಿಂದ ಅಂಗನವಾಡಿ ಮಕ್ಕಳು ಇಲ್ಲಿ ನಿತ್ಯವೂ ಓಡಾಡುವುದರಿಂದ ಈ ಗುಂಡಿಯು ಮಕ್ಕಳ ಪಾಲಿಗೆ ಅಪಾಯ ತರಲಿದೆ.
ಅಂಗನವಾಡಿ ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಮಕ್ಕಳು ಕಡ್ಡಾಯವಾಗಿ ಶೌಚಾಲಯವನ್ನು ಬಳಕೆ ಮಾಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಅಂಗನವಾಡಿ ಕೇಂದ್ರದಲ್ಲಿ ಶೌಚಾಲಯವನ್ನು ನಿರ್ಮಾಣ ಮಾಡಿದೆ. ಆದರೆ ಶೌಚಾಲಯದ ಬಳಕೆ ಮಾಡಿಕೊಳ್ಳಬೇಕಾದ ಅಂಗನವಾಡಿ ಸಿಬ್ಬಂದಿ ನಿರ್ಲಕ್ಷéದಿಂದ ಶೌಚಾಲಯದ ಗುಂಡಿಯನ್ನು ಮುಚ್ಚದೆ ಹಾಗೆಯೇ ಬಿಟ್ಟಿರುವುದರಿಂದ ಅಂಗನವಾಡಿಗೆ ಬರುವ ಮಕ್ಕಳು ಎಲ್ಲೆಂದರಲ್ಲಿ ಶೌಚ ಕಾರ್ಯವನ್ನು ಮಾಡುವುದು ಸಾಮಾನ್ಯವಾಗಿದೆ. ಇಲ್ಲಿ ಶೌಚಾಲಯ ಕಟ್ಟಿದ್ದರೂ ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಯಾಗಲಿ ಅಥವಾ ಮಕ್ಕಳಿಗಾಗಲಿ ಯಾವುದೇ ರೀತಿಯಲ್ಲಿ ಉಪಯೋಗವಾಗುತ್ತಿಲ್ಲ.
ಶೌಚಾಲಯದ ಗುಂಡಿಯಲ್ಲಿ ಕಸಕಡ್ಡಿ ಹಾಕಲಾಗುತ್ತಿದೆ. ಆಯತಪ್ಪಿ ಮಕ್ಕಳು ಈ ಗುಂಡಿಗೆ ಬಿದ್ದರೆ ಮಕ್ಕಳ ಜೀವಕ್ಕೆ ಅಪಾಯ ತರಲಿದೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಗುಂಡಿಯನ್ನು ಮುಚ್ಚಿಸದೇ ನಿರ್ಲಕ್ಷ್ಯ ತೋರಿಸುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.
ಪರಿಸರವನ್ನು ಮಲೀನ ಮಾಡದೆ ಸ್ವಚ್ಛವಾಗಿಟ್ಟುಕೊಳ್ಳಬೇಕು ಎನ್ನುವ ಉದ್ದೇಶದಿಂದ ಅಂಗನವಾಡಿ ಕೇಂದ್ರದಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಆದರೆ ಶೌಚಾಲಯದ ಗುಂಡಿಯನ್ನು ಮುಚ್ಚದೆ ಇರುವುದರಿಂದ ಮಕ್ಕಳಿಗೆ ಅಪಾಯವಾಗಲಿದೆ. ಆದ್ದರಿಂದ ಶೌಚಾಲಯ ಗುಂಡಿ ಮುಚ್ಚಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು.
ಹುಸೇನಿ, ಗ್ರಾಮಸ್ಥ
ಅಗಸನೂರು ಅಂಗನವಾಡಿ ಕೇಂದ್ರದಲ್ಲಿ ಸ್ವತ್ಛಭಾರತ್ ಅಭಿಯಾನ ಯೋಜನೆಯಡಿಯಲ್ಲಿ ನಿರ್ಮಿಸಿರುವ ಶೌಚಾಲಯದ ಗುಂಡಿಯನ್ನು ಮುಚ್ಚದಿರುವ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಬಂದಿದ್ದು, ತಕ್ಷಣವೇ ಗುಂಡಿಯನ್ನು ಮುಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು.
ರಾಮಕೃಷ್ಣನಾಯಕ, ಸಿಡಿಪಿಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ