ಜಿಲ್ಲೆಯಲ್ಲಿ ಜನತಾ ಕರ್ಫ್ಯೂ ಯಶಸ್ವಿ


Team Udayavani, Mar 23, 2020, 3:00 AM IST

jell-mandya

ಮಂಡ್ಯ: ಕೊರೊನಾ ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿದ್ದ ಜನತಾ ಕರ್ಫ್ಯೂ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಯಶಸ್ಸನ್ನು ಕಂಡಿದೆ. ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ಜನರು ಮನೆ ಬಿಟ್ಟು ಹೊರಬರದಂತೆ ಸ್ವಯಂ ನಿರ್ಬಂಧ ವಿಧಿಸಿಕೊಳ್ಳುವಂತೆ ಪ್ರಧಾನಿ ಮೋದಿ ದೇಶದ ಜನರಿಗೆ ಕರೆ ನೀಡಿದ್ದರು. ಕೊರೊನಾ ಸೃಷ್ಟಿಸುತ್ತಿರುವ ಭಯಗ್ರಸ್ಥ ವಾತಾವರಣಕ್ಕೆ ಹೆದರಿದ ಜನರು ದಿನವಿಡೀ ಮನೆ ಬಿಟ್ಟು ಹೊರಬರುವುದಕ್ಕೆ ಮನಸ್ಸು ಮಾಡಲೇ ಇಲ್ಲ.

ರಸ್ತೆಗಳಲ್ಲಿ ವಾಹನ ಸಂಚಾರವಿಲ್ಲ: ಬೆಂಗಳೂರು-ಮೈಸೂರು ಹೆದ್ದಾರಿಯೂ ಸೇರಿದಂತೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ವೃತ್ತ, ಮಹಾವೀರ ವೃತ್ತ, ಹೊಸಹಳ್ಳಿ ವೃತ್ತ, ಎಸ್‌.ಡಿ.ಜಯರಾಂ ವೃತ್ತ, ಸಕ್ಕರೆ ಕಂಪನಿ ವೃತ್ತ, ಹೊಳಲು ವೃತ್ತಗಳೆಲ್ಲವೂ ಜನರು, ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು. ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ಅಂಗಡಿ-ಮುಂಗಟ್ಟುಗಳೆಲ್ಲವೂ ಸಂಪೂರ್ಣ ಬಂದ್‌ ಆಗಿದ್ದವು. ಔಷಧ ಅಂಗಡಿಗಳು, ಹೋಟೆಲ್‌ಗ‌ಳು, ಆಸ್ಪತ್ರೆ, ಪೆಟ್ರೋಲ್‌ ಬಂಕ್‌, ಕುಡಿಯುವ ನೀರು, ಹಾಲು, ತರಕಾರಿ ಮಳಿಗೆಗಳಿಗೆ ಮಾತ್ರ ಬಾಗಿಲು ತೆರೆಯುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು.

ಹೋಟೆಲ್‌ಗ‌ಳಲ್ಲೂ ಜನರಿಲ್ಲ: ನಗರದಲ್ಲಿ ಬಹುತೇಕ ಸಣ್ಣ-ಪುಟ್ಟ ಹೋಟೆಲ್‌ಗ‌ಳೆಲ್ಲವೂ ಬಂದ್‌ ಆಗಿದ್ದವು. ಕೆಲವು ಹೋಟೆಲ್‌ಗ‌ಳು ತಿಂಡಿ-ತಿನಿಸುಗಳನ್ನು ತಿನ್ನುವುದನ್ನು ನಿಷೇಧಿಸಿ, ಪಾರ್ಸಲ್‌ಗೆ ಸೀಮಿತವಾದವು. ಕಾಫೀ-ಟೀ, ಹಾಲು ಮಾತ್ರ ದೊರೆಯುತ್ತಿತ್ತು.

ಮೊದಲ ಬಾರಿ ಬಂದ್‌: ಕಾವೇರಿ ಹೋರಾಟದ ಕರ್ಫ್ಯೂ ಸಂದರ್ಭದಲ್ಲಿಯೂ ನಿಲ್ಲದ ಮಂಡ್ಯದ ಮಾರುಕಟ್ಟೆ ಕೊರೊನಾ ಹರಡುವ ಭಯದಿಂದ ಮೊದಲ ಬಾರಿಗೆ ಸಂಪೂರ್ಣ ಸ್ತಬ್ಧಗೊಂಡಿತ್ತು. ವರ್ತಕರು, ವ್ಯಾಪಾರಿಗಳು ಯಾರೂ ಸಹ ಸ್ವಯಂಪ್ರೇರಿತರಾಗಿ ತರಕಾರಿ, ಹೂವು, ಹಣ್ಣು ಮಾರಾಟ ಮಾಡುವುದಕ್ಕೆ ಮುಂದಾಗಲಿಲ್ಲ. ಕೋಳಿ-ಮಾಂಸದಂಗಡಿಗಳು ಸಂಪೂರ್ಣ ಬಂದ್‌ ಆಗಿದ್ದವು. ವೈನ್‌ಶಾಪ್‌, ಬಾರ್‌-ಅಂಡ್‌ ರೆಸ್ಟೋರೆಂಟ್‌ಗಳೂ ಕಾರ್ಯಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದವು.

ಹಾಲಿಗೆ ಪರದಾಟ: ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಭಾನುವಾರ ಹಾಲಿಗೆ ಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಶನಿವಾರವೇ ಹಾಲು ಮಾರಾಟಗಾರರು ಹೆಚ್ಚು ಹಾಲನ್ನು ದಾಸ್ತಾನು ಮಾಡಿಕೊಳ್ಳದಿದ್ದರಿಂದ ಜನರು ಭಾನುವಾರ ಬೆಳಗ್ಗೆ ಹಾಲಿಗಾಗಿ ಪರದಾಡಿದರು. ಮನೆ ಮನೆಗೆ ಹಾಲು ತೆಗೆದುಕೊಂಡು ಹೋಗಿ ನೀಡುವವರಿಗೆ ತೊಂದರೆಯಾಗಲಿಲ್ಲ. ನಂದಿನಿ, ಡೇರಿ ಹಾಲನ್ನು ನಂಬಿಕೊಂಡಿದ್ದವರು ತೊಂದರೆ ಅನುಭವಿಸಿದರು. ಇದರಿಂದ ಬೆಳಗಿನ ಕಾಫೀ-ಟೀ ಕುಡಿಯುವುದಕ್ಕೂ ಸಾಧ್ಯವಾಗದೆ ಪೇಚಿಗೆ ಸಿಲುಕಿದರು.

ಪೊಲೀಸ್‌ ಭದ್ರತೆಯೇ ಇಲ್ಲ..!: ಸಾಮಾನ್ಯವಾಗಿ ಬಂದ್‌ ಆಚರಣೆ ವೇಳೆ ಎಲ್ಲೆಡೆ ಬಿಗಿ ಪೊಲೀಸ್‌ ಭದ್ರತೆ ಆಯೋಜಿಸುವುದು ಸಾಮಾನ್ಯವಾಗಿತ್ತು. ಆದರೆ, ಜನತಾ ಕರ್ಫ್ಯೂ ವೇಳೆ ಯಾವುದೇ ಪೊಲೀಸ್‌ ಭದ್ರತೆ ಇಲ್ಲದೆ ಜನಸಂಚಾರ ಸಂಪೂರ್ಣ ಬಂದ್‌ ಆಗಿದ್ದು ಒಂದು ವಿಶೇಷ. ಬಂದ್‌ ಆಚರಣೆ ವೇಳೆ ಕೆಲವೊಂದು ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್‌ ವಾಹನಗಳು ಠಿಕಾಣಿ ಹೂಡುತ್ತಿದ್ದವು. ಪೊಲೀಸ್‌ ಅಧಿಕಾರಿಗಳು ಗಸ್ತು ತಿರುಗುತ್ತಿದ್ದರು.

ನೂರಾರು ಪೊಲೀಸರ ಭದ್ರತೆ ನಡುವೆ ಬಂದ್‌ ಆಚರಿಸಲಾಗುತ್ತಿತ್ತು. ಅದರ ನಡುವೆಯೂ ಹಲವು ಜನರು ಹೊರಗೆ ಬಂದು ಓಡಾಡುವುದು, ಖಾಲಿ ಬೀದಿಗಳಲ್ಲಿ ಕ್ರಿಕೆಟ್‌ ಆಡುವುದು ಕಂಡುಬರುತ್ತಿದ್ದವು. ಸಾಮಾನ್ಯ ಸಂಖ್ಯೆಯಲ್ಲಿ ವಾಹನಗಳ ಓಡಾಟವಿರುತ್ತಿತ್ತು. ಆದರೆ, ಜನತಾ ಕರ್ಫ್ಯೂ ವೇಳೆ ಇಂತಹ ಯಾವುದೇ ದೃಶ್ಯಗಳೂ ಜಿಲ್ಲೆಯ ಯಾವ ಭಾಗದಲ್ಲೂ ಕಂಡುಬರಲಿಲ್ಲ. ಜನರು ಸ್ವಯಂಪ್ರೇರಣೆಯಿಂದ ಮನೆ ಸೇರಿಕೊಂಡಿದ್ದರಿಂದ ಪೊಲೀಸರ ಭದ್ರತೆಯಿಲ್ಲದೆ ಜನತಾ ಕರ್ಫ್ಯೂ ಯಶಸ್ಸು ಕಂಡಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.