ಎಚ್.ಕೆ.ಪಾಟೀಲ್, ಸಚಿವ ಸುಧಾಕರ್ ಟ್ವೀಟ್ ವಾರ್
Team Udayavani, Mar 23, 2020, 3:03 AM IST
ಬೆಂಗಳೂರು: ಕೋವಿಡ್-19 ಸೋಂಕಿತರು ಹಾಗೂ ವಿದೇಶಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವವರ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ.ಪಾಟೀಲ್ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ನಡುವೆ ಟ್ವೀಟ್ ವಾರ್ ನಡೆದಿದೆ. ಕಳೆದ 2 ದಿನದಲ್ಲಿ ವಿದೇಶಗ ಳಿಂದ ಬೆಂಗಳೂರಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದಾರೆ. ಸರ್ಕಾರ ಅವರನ್ನು ಸೂಕ್ತ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಎಚ್.ಕೆ.ಪಾಟೀಲ್ ಟ್ವೀಟ್ ಮಾಡಿದ್ದರು.
ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದ ಸುಧಾಕರ್, ವಿದೇಶಗಳಿಂದ ಅಷ್ಟೊಂದು ಪ್ರಮಾಣದಲ್ಲಿ ಜನರು ಆಗಮಿಸುತ್ತಿಲ್ಲ. ಹಿರಿಯ ನಾಯಕರಿಗೆ ಸಂಖ್ಯೆಯ ಸಮಸ್ಯೆ ಇದ್ದ ಹಾಗಿದೆ ಎಂದು ಟಾಂಗ್ ನೀಡಿದ್ದರು. ಇದಕ್ಕೆ ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿ, ಮಾಹಿತಿ ಕೊರತೆಯಿಂದ ಹೇಳಿದ್ದಲ್ಲ. ಇಂಥ ಗಂಭೀರ ಸ್ಥಿತಿಯಲ್ಲಿ ಸತ್ಯ ಹೇಳಿ, ಸತ್ಯ ಹೇಳದಿದ್ದರೆ ಸರ್ಕಾರದ ದಾಖಲೆಗ ಳನ್ನು ಬಿಡುಗಡೆ ಮಾಡಬೇಕಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ