ಜನತಾ ಕರ್ಫ್ಯೂಗೆ ಜನ ಬೆಂಬಲ


Team Udayavani, Mar 23, 2020, 6:25 PM IST

ಜನತಾ ಕರ್ಫ್ಯೂಗೆ ಜನ ಬೆಂಬಲ

ರಾಣಿಬೆನ್ನೂರ: ದೇಶದಲ್ಲಿ ಕೋವಿಡ್ 19 ವೈರಸ್‌ ಮಹಾಮಾರಿ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂ ನಗರ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ರವಿವಾರ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಮನೆಯಲ್ಲಿಯೇ ಉಳಿದು ಸಂಪೂರ್ಣ ಯಶಸ್ವಿಯಾಯಿತು.

ಬೆಳಗ್ಗೆ 7 ಗಂಟೆಯಿಂದಲೇ ದಿನವೀಡಿ ಬಸ್‌, ಆಟೋ, ಮತ್ತಿತರರ ವಾಹನಗಳು ಸಂಚರಿಸಲಿಲ್ಲ, ಕೆಲವೊಂದು ಪ್ರಯಾಣಿಕರಿಗೆ ವಾಹನಗಳಿಲ್ಲದೆಸಂಚಾರಕ್ಕೆ ಅಡತಡೆಯಾಗಿದ್ದು ಕಂಡು ಬಂದಿತು. ಸರಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳು ರಜೆ ಇದ್ದ ಪ್ರಯುತ್ತ ವಿದ್ಯಾರ್ಥಿಗಳು ಕಂಡು ಬರಲಿಲ್ಲ, ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳು ಬೆಂಬಲ ವ್ಯಕ್ತಪಡಿಸಿದ್ದವು.

ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಯಲ್ಲಿ ಜನತಾ ಕರ್ಫ್ಯೂವಿಗೆ ಬೆಂಬಲ ನೀಡಲು ಸರ್ವರೂ ಮನೆಯಿಂದ ಹೊರಬರಬಾರದು ಎಂದು ಡಂಗೂರ ಸಾರಿದ್ದರಿಂದ ಯಾರೊಬ್ಬರೂ ಮನೆಯಿಂದ ಹೊರಗೆ ಬರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಬಸ್‌ ನಿಲ್ದಾಣ ಮತ್ತು ಡಿಪೋದಲ್ಲಿ ಬಸ್ಸುಗಳು ಕಾಣಲಿಲ್ಲ, ಎಲ್ಲ ಬಸ್‌ಗಳನ್ನು ಡಿಪೋದಲ್ಲಿಯೇ ನಿಂತಿದ್ದರಿಂದ ಬಸ್‌ ನಿಲ್ದಾಣ ಬಿಕೋ ಎನ್ನುತ್ತಿತ್ತು. ಈ ಮೊದಲೇ ಜನತಾ ಕರ್ಫ್ಯೂ ಘೋಷಣೆಯಾದ್ದರಿಂದ ಪ್ರಯಾಣಿಕರು ಕಂಡು ಬರಲಿಲ್ಲ, ಹಾಗಾಗಿ ಜನರು ಮನೆಯಿಂದ ಹೊರಗಡೆ ಬರದೆ ಜನತಾ ಕರ್ಫ್ಯೂವಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ಎಪಿಎಂಸಿ ದನದ ಮಾರುಕಟ್ಟೆ, ನೆಹರು ಮತ್ತು ದೊಡ್ಡಪೇಟೆ ತರಕಾರಿ ಮಾರುಕಟ್ಟೆ, ದಲಾಳ್ಳಿ ಅಂಗಡಿಗಳು, ಸರಕಾರಿ ಕಚೇರಿಗಳು, ಅಂಗಡಿ-ಮುಗ್ಗಟ್ಟುಗಳು, ಚಲನಚಿತ್ರ ಮಂದಿರಗಳು, ಹೋಟೆಲ್‌ಗ‌ಳು, ಬಾರ್‌ಗಳು, ರೆಸ್ಟೋರೆಂಟ್‌ಗಳು, ಸಾರ್ವಜನಿಕ ಆಸ್ಪತ್ರೆ ಹೊರತು ಪಡಿಸಿದರೆ, ಖಾಸಗಿ ಆಸ್ಪತ್ರೆಗಳು, ಕಿರಾಣಿ, ಬಟ್ಟೆ ಮತ್ತಿತರ ಅಂಗಡಿಗಳು ಬಾಗಿಲು ಮುಚ್ಚಿದ್ದರಿಂದ ನಗರ ಬಿಕೋ ಎನ್ನುತ್ತಿತ್ತು. ಜನಜೀವನ ಎಂದಿನಂತೆ ಸಹಜವಾಗಿ ಕಂಡು ಬರಲಿಲ್ಲ.

ರೈಲು ನಿಲ್ದಾಣ, ಅಂಚೆ ವೃತ್ತ ಮತ್ತಿತರ ಜನನಿಬೀಡು ಪ್ರದೇಶಗಳಲ್ಲಿ ಜನಜಂಗುಳಿ ಕಂಡು ಬರಲಿಲ್ಲ, ಒಟ್ಟಾರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಜನರ ಸಂಚಾರ ಕಂಡು ಬರದೆ ಜನತಾ ಕರ್ಫ್ಯೂ ಯಶಸ್ವಿಯಾಗಿದ್ದು, ಕಂಡು ಬಂದಿತು. ಕೋವಿಡ್ 19 ವೈರಸ್‌ ಮಹಾಮಾರಿಗೆ ಬೆದರಿದ ಜನರು ಸ್ವಯಂಪ್ರೇರಿತರಾಗಿ ಮನೆಯ ಹೊರಗೆ ಕಂಡು ಬರಲಿಲ್ಲ. ವರ್ತಕರು, ಹಮಾಲರು, ವ್ಯಾಪಾರಸ್ಥರು, ಬಾರ್‌ ಗಳು, ರೈತ ಸಂಘಗಳು, ಆಟೋ ಸಂಘ, ಕನ್ನಡಪರ ಸಂಘಟನೆಗಳು, ಹೋಟೆಲ್‌ ಉದ್ಯಮಿ, ಜವಳಿ, ಬಂಗಾರದ ಅಂಗಡಿಗಳ ಸಂಘಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಬೆಂಬಲ ನೀಡಿದ್ದರಿಂದ ಯಶಸ್ವಿಯಾಗಿ ಸಾಕ್ಷಿಯಾಯಿತು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.