ರಾಜ್ಯದ 9 ಜಿಲ್ಲೆಗಳಲ್ಲಿ ಮಾ.31ರವರೆಗೆ ಕರ್ಫ್ಯೂ ಮಾದರಿಯ ಲಾಕ್ ಡೌನ್
Team Udayavani, Mar 23, 2020, 7:27 PM IST
ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್ ಎಂದು ಘೋಷಿಸಲಾಗಿದ್ದ ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಇಂದು ಈ ಲಾಕ್ ಡೌನ್ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಈ ಕುರಿತಾದ ಮಾಹಿತಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ವಿಧಾನಸಭೆಯಲ್ಲಿ ಇಂದು ಪ್ರಕಟಿಸಿದರು. ಇದರನ್ವಯ ಲಾಕ್ ಡೌನ್ ಆಗಿರುವ ಒಂಭತ್ತು ಜಿಲ್ಲೆಗಳಲ್ಲಿ ಎಲ್ಲಾ ರೀತಿಯ ವಾಣಿಜ್ಯ ವ್ಯವಹಾರಗಳನ್ನು ಮಾರ್ಚ್ 31ರವರೆಗೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಡಾ.ಸುಧಾಕರ್ ಅವರು ವಿಧಾನಸಭೆಗೆ ನೀಡಿರುವ ಮಾಹಿತಿಯ ಮುಖ್ಯಾಂಶಗಳು ಹೀಗಿವೆ:
– ಲಾಕ್ ಡೌನ್ ಘೋಷಣೆಯಾಗಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲುಬುರಗಿ, ಧಾರವಾಡ, ಕೊಡಗು, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿಯ ಬಂದ್ ಇರುತ್ತದೆ.
– ಈ 9 ಜಿಲ್ಲೆಗಳಲ್ಲಿ ಬಂದ್ ಮೇಲ್ವಿಚಾರಣೆಯ ಹೊಣೆ ಆಯಾ ಜಿಲ್ಲೆಗಳ ಪೊಲೀಸ್ ಇಲಾಖೆಗಳದ್ದಾಗಿರುತ್ತದೆ.
– ಕರ್ನಾಟಕ ರಾಜ್ಯದ ಎಲ್ಲಾ ಗಡಿಭಾಗಗಳನ್ನು ತಕ್ಷಣದಿಂದಲೇ ಅನ್ವಯವಾಗುವಂತೆ ಮುಚ್ಚಲಾಗುತ್ತದೆ.
– ರಾಜ್ಯದಲ್ಲಿ ಇದುವರೆಗೆ 29 ಕೋವಿಡ್ 19 ಪ್ರಕರಣಗಳು ದೃಢಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ