ಕಿರುತೆರೆಯ ಬಾಗಿಲನೂ ತಟ್ಟಿದ ಕೊರೊನಾ


Team Udayavani, Mar 24, 2020, 12:32 AM IST

ಕಿರುತೆರೆಯ ಬಾಗಿಲನೂ ತಟ್ಟಿದ ಕೊರೊನಾ

ಮಣಿಪಾಲ: ಚಿತ್ರಪ್ರದರ್ಶನಕ್ಕೆ ಮಾತ್ರ ತಟ್ಟಿದ್ದ ಕೋವಿಡ್-19 ಈಗ ಕಿರುತೆರೆ ಉದ್ಯಮಕ್ಕೂ ಏಟು ಕೊಟ್ಟಿದೆ. ಮಾರ್ಚ್‌ 3ನೇ ವಾರದಿಂದ ಚಿತ್ರೀಕರಣ ಸಂಪೂರ್ಣ ನಿಲ್ಲಿಸಲಾಗಿದೆ. ಪ್ರಸಾರಣ ಕೇಂದ್ರದಿಂದಲೇ ಅಧಿಕೃತ ಮಾಹಿತಿ ಬಂದಿರುವ ಕಾರಣ ಮಾರ್ಚ್‌ 21ಕ್ಕೆ ಚಿತ್ರೀಕರಣ ಸಂಪೂರ್ಣ ಸ್ಥಗಿತವಾಗಿದ್ದು, ಖಾಸಗಿ ವಾಹಿನಿಗಳ ನಿದೇರ್ಶಕರಿಗೆ ಆತಂಕ ಆರಂಭವಾಗಿದೆ.

ಕೊರೊನಾ ಆಘಾತ ದಿನೇ ದಿನೇ ಹೆಚ್ಚುತ್ತಿದೆ. ಆರಂಭದಲ್ಲೇ ಇಷ್ಟು ಪರಿಣಾಮ ಹೊಂದಿದ್ದು, ಕಡೆಯ ಹಂತದಲ್ಲಿ ಇದು ಮತ್ತಷ್ಟು ಪ್ರಭಾವ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾರಿಗೂ ತೊಂದರೆಯಾಗದಂತೆ ಶೂಟಿಂಗ್‌ ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ.

ಮಾ. 31ರ ವರೆಗೆ ಸಮಸ್ಯೆ ಇಲ್ಲ
ಈಗಾಗಲೇ ಚಿತ್ರೀಕರಣ ಸ್ಥಗಿತಗೊಂಡು ಎರಡು ದಿನಗಳು ಕಳೆದಿದ್ದು, ಇದರಿಂದ ಮುಂಬರುವ ಸಂಚಿಕೆಗಳ ಪ್ರಸಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಆಂದರೆ ಮಾರ್ಚ್‌ 31ರ ವರೆಗೆ ಪ್ರಸಾರ ಮಾಡುವಷ್ಟು ಸಂಚಿಕೆಗಳನ್ನು ಕನ್ನಡದ ಎಲ್ಲಾ ಖಾಸಗಿ ಟಿವಿ ಮಾಧ್ಯಮಗಳು ಹೊಂದಿದೆ. ಕಿರುತೆರೆಯಲ್ಲಿ ಧಾರಾವಾಹಿಗಳಿಗೆ ಸಾಮಾನ್ಯವಾಗಿ 15ರಿಂದ 20 ದಿನಗಳಿಗೆ ಸಾಕಾಗುವಷ್ಟು ಸ್ಟೋರಿ ಬ್ಯಾಂಕಿಂಗ್‌ ಮಾಡಿಕೊಳ್ಳಲಾಗಿರುತ್ತದೆ. ರಿಯಾಲಿಟಿ ಶೋಗಳಿಗೆ ಮಾತ್ರ ಸಮಸ್ಯೆಯಾಗಬಹುದು.

ಪರ್ಯಾಯ ದಾರಿ
ಈ ಹಿಂದೆ ಹಲವಾರು ಧಾರಾವಾಹಿ ತಂಡಗಳು ಶೀರ್ಷಿಕೆ ಹಾಡು ಪ್ರಸಾರದಿಂದ ದೂರ ಉಳಿದಿದ್ದರು. ಆದರೆ ಸಂಚಿಕೆಗಳನ್ನು ಮುಂದಿನ ದಿನಗಳಿಗೆ ಉಳಿಸಿಕೊಳ್ಳಲು ಇದೀಗ ನಾಲ್ಕರಿಂದ ಐದು ನಿಮಿಷದವರಿಗೆ ಶೀರ್ಷಿಕೆ ಹಾಡನ್ನು ಪ್ರಸಾರ ಮಾಡಲಾಗುತ್ತಿದೆ. ರೀ ಕೆಪ್‌ ಸಮಯವನ್ನು 15 ಸೆಕೆಂಡ್‌ಗಳ ಕಾಲ ಹೆಚ್ಚಿಸಲಾಗಿದೆ. ಇದರೊಂದಿಗೆ ಈ ಹಿಂದೆ 20 ನಿಮಿಷಗಳು ಪ್ರಸಾರವಾಗುತ್ತಿದ್ದ ಧಾರವಾಹಿಯನ್ನು ಇದೀಗ 18 ನಿಮಿಷಕ್ಕೆ ಇಳಿಸಲಾಗುತ್ತಿದೆ.ಇದರಿಂದ ಸುಮಾರು 2 ಸಂಚಿಕೆಗಳಷ್ಟು ವೀಡಿಯೋ ಉಳಿತಾಯವಾಗಲಿದೆ.

ಯಾಕೆ ಈ ಕ್ರಮ
ರಿಯಾಲಿಟಿ ಶೋಗಳ ಚಿತ್ರೀಕರಣದಲ್ಲಿ ನೂರಕ್ಕಿಂತ ಹೆಚ್ಚು ಮಂದಿ ಸೇರಿರುತ್ತಾರೆ. ಇದು ಕೊರೊನಾ ತಡೆಯಲು ನೀಡಲಾದ ಸೂಚನೆಗಳಿಗೆ ವಿರುದ್ಧವಾಗಿದ್ದು, ಹಾಗಾಗಿ ಚಿತ್ರೀಕರಣವನ್ನು ನಿಲ್ಲಿಸಲೇಬೇಕಾಗಿದೆ. ಶೂಟಿಂಗ್‌ ನಿಲ್ಲಿಸಿರುವುದರಿಂದ ಸದ್ಯಕ್ಕೆ ಧಾರಾವಾಹಿಗಳು ಸೇರಿದಂತೆ ರಿಯಾಲಿಟಿ ಶೋಗಳ ಪ್ರಸಾರಕ್ಕೆ ತೊಂದರೆಯಾಗುವುದಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಹಳೇ ಎಪಿಸೋಡ್‌ಗಳನ್ನು ಮತ್ತೆ ಪ್ರಸಾರ ಮಾಡಬೇಕಾಗುತ್ತದೆ ಎಂಬುದು ಚಾನೆಲ್‌ ಮುಖ್ಯಸ್ಥರ ಮಾತು.

ರೇಟಿಂಗ್‌ ಕುಸಿತದ ಆತಂಕ
ಕೋವಿಡ್-19 ಸುದ್ದಿಗಳ ಮೊರೆ ಹೋಗುತ್ತಿರುವ ಜನರು ಇತ್ತೀಚಿನ ದಿನಗಳಲ್ಲಿ ಹೆಚ್ಚು ಸುದ್ದಿ ವಾಹಿನಿ ವೀಕ್ಷಣೆಯಲ್ಲಿ ನಿರತರಾಗುತ್ತಿದ್ದಾರೆ. ಈ ಬೆಳವಣಿಗೆಯಿಂದಾಗಿ ಧಾರವಾಹಿಗಳಿಗೆ ಹೊಡೆತ ಬೀಳಲಿದ್ದು ರೇಟಿಂಗ್‌ ಅಂಕಗಳ ಮೇಲೆ ಪರಿಣಾಮ ಬೀರಲಿದೆ. ಮುಂಬರುವ ದಿನಗಳಲ್ಲಿ ರೇಟಿಂಗ್‌ ಬರದೇ ಇರುವ ಸಾಧ್ಯತೆಯೂ ಇದೆ ಎನ್ನುತ್ತಾರೆ ಪರಿಣತರು.

31ರ ಅನಂತರ ಕಷ್ಟ
ಸದ್ಯ ಇರುವ ಚಿತ್ರೀಕರಣ ಮಾರ್ಚ್‌ 31ರ ವರೆಗೆ ಮಾತ್ರ ಹೊಂದಾಣಿಕರಯಾಗಲಿದ್ದು, ಬಳಿಕದ ದಿನಗಲ್ಲಿ ಕಷ್ಟವಾಗಲಿದೆ. ಅದೂ ಅಲ್ಲದೇ ಒಮ್ಮೆ ಚಿತ್ರೀಕರಣಗೊಂಡ ವಿಡಿಯೋ ಸಂಕಲನವಾಗಿ ಧಾರವಾಹಿ ಪ್ರಸಾರಕಾರ ಕೈ ಸೇರಲು 3ರಿಂದ 4 ದಿನಗಳು ಬೇಕಾಗುವುದರಿಂದ ಮಾರ್ಚ್‌ 31ರ ಒಳಗೆ ಪರಿಸ್ಥಿತಿ ಸುಧಾರಿಸದಿದ್ದರೆ ಮುಂದಿನ ಸಂಚಿಕೆಗಳ ಪ್ರಸಾರಕ್ಕೆ ಕಷ್ಟ.

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.