ಕೋವಿಡ್ 19 ಭೀತಿ: ರಾಜ್ಯಸಭಾ ಚುನಾವಣೆ ಮುಂದೂಡಿಕೆ, 37 ಸ್ಥಾನಕ್ಕೆ ಅವಿರೋಧ ಆಯ್ಕೆ
ದೇಶದ 7 ರಾಜ್ಯಗಳಲ್ಲಿ ಒಟ್ಟು 18 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.
Team Udayavani, Mar 24, 2020, 5:04 PM IST
ನವದೆಹಲಿ: ಕೋವಿಡ್ 19 ಮಹಾಮಾರಿ ಭೀತಿಯ ಹಿನ್ನೆಲೆಯಲ್ಲಿ ಮಾರ್ಚ್ 26ರಂದು ನಿಗದಿಯಾಗಿದ್ದ ರಾಜ್ಯಸಭಾ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಘೋಷಿಸಿದೆ.
ಫೆ.25ರಂದು ಒಟ್ಟು 55 ರಾಜ್ಯಸಭಾ ಸ್ಥಾನಗಳಿಗೆ ಮಾ.26ರಂದು ಚುನಾವಣೆ ನಡೆಸುವುದಾಗಿ ಘೋಷಿಸಿದ್ದು, ಅಂದು ಸಂಜೆಯೇ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿತ್ತು.
ಮಾರ್ಚ್ 18ರಂದು ನಾಮಪತ್ರ ಹಿಂಪಡೆಯಲು ನಿಗದಿಪಡಿಸಿದ್ದ ಕೊನೆಯ ದಿನಾಂಕದ ನಂತರ ರಾಜ್ಯಸಭೆಯ 37 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಆ ನಿಟ್ಟಿನಲ್ಲಿ ಕೇವಲ 18 ಸ್ಥಾನಗಳಿಗಷ್ಟೇ ಚುನಾವಣೆ ನಡೆಯಲು ಬಾಕಿ ಉಳಿದಂತಾಗಿದೆ ಎಂದು ವರದಿ ವಿವರಿಸಿದೆ.
ದೇಶದ 7 ರಾಜ್ಯಗಳಲ್ಲಿ ಒಟ್ಟು 18 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ. ಗುಜರಾತ್ ನಲ್ಲಿ 04 ಸ್ಥಾನ, ಆಂಧ್ರಪ್ರದೇಶ 04 ಸ್ಥಾನ, ರಾಜಸ್ಥಾನ್ 03, ಮಧ್ಯಪ್ರದೇಶ 03, ಜಾರ್ಖಂಡ್ 02 ಹಾಗೂ ಮಣಿಪುರ 01, ಮೇಘಾಲಯ 01 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ