ಕಡಲೆ ಖರೀದಿ ಕೇಂದ್ರ ಪ್ರಾರಂಭೋತ್ಸವ
Team Udayavani, Mar 24, 2020, 6:21 PM IST
ಮುಂಡರಗಿ: ಕೇಂದ್ರ, ರಾಜ್ಯ ಸರಕಾರಗಳು ರೈತರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ. ಸಹಕಾರ ಮಹಾಮಂಡಳ ಸಹಯೋಗದಲ್ಲಿ ರೈತರು ಬೆಳೆದ ಬೆಳೆಗಳನ್ನು ಯೋಗ್ಯ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಇದರ ಸದುಪಯೋಗ ರೈತರು ಪಡೆದುಕೊಳ್ಳಬೇಕೆಂದು ಶಿಂಗಟಾಲೂರ ಶ್ರೀ ವೀರಭದ್ರೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ಹೇಳಿದರು.
ತಾಲೂಕಿನ ಬರದೂರ ಗ್ರಾಮದಲ್ಲಿ ಸೋಮವಾರ ಪ್ರಾಥಮಿಕ ಕೃಷಿ, ಪತ್ತಿನ ಸಹಕಾರಿ ಸಂಘದ ವತಿಯಿಂದ ಕೇಂದ್ರ ಸರಕಾರ ಬೆಂಬಲ ಬೆಲೆ ಕಡಲೆ ಕಾಯಿ ಖರೀದಿ ಕೇಂದ್ರ ಪ್ರಾರಂಭೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಹಕಾರಿ ಸಂಘಗಳು ರೈತರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ಪ್ರಾರಂಭಿಸಿ ರೈತರ ಹಿತ ಕಾಪಾಡಬೇಕು ಎಂದು ಕರಬಸಪ್ಪ ಹಂಚಿನಾಳ ಅಭಿಪ್ರಾಯಪಟ್ಟರು. ಎಪಿಎಂಸಿ ಸದಸ್ಯ ರವೀಂದ್ರ ಉಪ್ಪಿನಬೆಟಗೇರಿ ಮಾತನಾಡಿ, ಬರದೂರಿನ ಕೃಷಿಪತ್ತಿನ ಸಹಕಾರಿ ಸಂಘ ರೈತರ ಪರವಾಗಿರುವ ಕೃಷಿಬೆಳೆ ಚಟುವಟಿಕೆಗಳ ಕಾರ್ಯವನ್ನು ಪ್ರಶಂಸಿದರು. ಶೀಘ್ರದಲ್ಲಿ ಗೋವಿನ ಜೋಳ ಖರೀದಿಸಲು ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.
ಉಮೇಶ ಹಿರೇಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಸರಕಾರ ನಿಗದಿಪಡಿಸಿದ 4875 ರೂ . ಪ್ರತಿ ಕ್ವಿಂಟಲ್ಗೆ ಖರೀದಿಸಲಾಗುವುದು. ಯಾವುದೇ ಜಿಲ್ಲೆಯ ರೈತರು ಕಡೆಲೆಕಾಳು ಬೆಳೆಯನ್ನು ತಂದು ಇಲ್ಲಿ ಮಾರಬಹುದು ಎಂದರು. ಗ್ರಾಮದ ಅಶೋಕ ಹಂದ್ರಾಳ, ಮುದ್ಲಿಂಗಪ್ಪ ಕೊರ್ಲಹಳ್ಳಿ, ರವಿ ಕರಿಗಾರ, ದೇವೇಂದ್ರಪ್ಪ ರಾಮೇನಹಳ್ಳಿ ಸೇರಿದಂತೆ ರೈತರು, ಆಡಳಿತ ಮಂಡಳಿ ಸದಸ್ಯರು ಗಣ್ಯರು ಉಪಸ್ಥಿತರಿದ್ದರು. ಈಶ್ವರಗೌಡ ಹಿರೇಗೌಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್
Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ
Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ