ರಕ್ತ ಕೊರತೆ ಸೃಷ್ಟಿಸಿದ ಕೋವಿಡ್ 19


Team Udayavani, Mar 24, 2020, 6:33 PM IST

ರಕ್ತ ಕೊರತೆ ಸೃಷ್ಟಿಸಿದ ಕೋವಿಡ್ 191

ಹಾವೇರಿ: ಕೋವಿಡ್ 19 ಸೋಂಕು ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಜೀವ ರಕ್ಷಕ ರಕ್ತದ ಕೊರತೆಯೂ ಎದುರಾಗಿದ್ದು ರಕ್ತ ವಿದಳನ ಘಟಕಗಳಿಗೆ ರಕ್ತದ ಕೊರತೆ ಎದುರಾಗಿದೆ.

ಕೋವಿಡ್ 19  ವೈರಸ್‌ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರಗಳು ರದ್ದಾಗಿರುವುದೇ ರಕ್ತ ಕೊರತೆಗೆ ಪ್ರಮುಖ ಕಾರಣವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂಬರುವ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ರಕ್ತದ ತೀವ್ರ ಅಭಾವ ಉಂಟಾಗುವ ಸಂಭವವಿದ್ದು, ರಕ್ತದ ತುರ್ತು ಅಗತ್ಯವಿದ್ದವರು ಸಕಾಲಕ್ಕೆ ರಕ್ತ ಸಿಗದೆ ಸಂಕಷ್ಟಕ್ಕೆ ಸಿಲುಕುವ ಆತಂಕ ಎದುರಾಗಿದೆ.

ಸಾಮಾನ್ಯವಾಗಿ ಜಿಲ್ಲೆಯಲ್ಲಿ ಪ್ರತಿ ತಿಂಗಳು ರಕ್ತ ವಿದಳನ ಘಟಕದಿಂದ 8-10 ರಕ್ತದಾನ ಶಿಬಿರಗಳನ್ನು ಮಾಡಿ ಸರಾಸರಿ 500 ಯುನಿಟ್‌ ರಕ್ತ ಸಂಗ್ರಹಿಸಲಾಗುತ್ತಿತ್ತು. ಸಂಗ್ರಹಿಸಿದ ರಕ್ತವನ್ನು 35 ದಿನಗಳಲ್ಲಿ ತುರ್ತು ಅಗತ್ಯವಿದ್ದ ರೋಗಿಗಳಿಗೆ ನೀಡಲಾಗುತ್ತಿತ್ತು. ಜಿಲ್ಲಾಸ್ಪತ್ರೆ ಹಾಗೂ ಜಿಲ್ಲೆಯಲ್ಲಿರುವ ಏಳು ಉಪರಕ್ತ ವಿದಳನ ಘಟಕಗಳಿಗೆ ಬೇಡಿಕೆಗನುಸಾರ ಕೊಡಲಾಗುತ್ತಿತ್ತು. ಈಗ ಜಿಲ್ಲಾಸ್ಪತ್ರೆಯ ಅಗತ್ಯತೆ ತೀರಿಸಲು ಸಹ ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ.

ಕಳೆದ ತಿಂಗಳು ಫೆಬ್ರುವರಿಯಲ್ಲಿ 515 ಯೂನಿಟ್‌ ರಕ್ತ ಸಂಗ್ರಹಿಸಲಾಗಿತ್ತು. ಮಾರ್ಚ್‌ನಲ್ಲಿ ಕೋವಿಡ್ 19 ವೈರಸ್‌ ಹಾವಳಿ ಹೆಚ್ಚಾಗಿದ್ದರಿಂದ ಎಲ್ಲ ರಕ್ತದಾನ ಶಿಬಿರಗಳನ್ನು ನಿಲ್ಲಿಸಲಾಗಿದೆ. ಕಾಲೇಜುಗಳಿಗೆ ಹೋಗಿ ರಕ್ತ ಸಂಗ್ರಹಿಸೋಣ ಎಂದರೆ ಅವರಿಗೂ ರಜೆ ಘೋಷಣೆಯಾಗಿದೆ. ಹೀಗಾಗಿ ಜಿಲ್ಲಾ ರಕ್ತ ವಿದಳನ ಘಟಕದಲ್ಲಿ ರಕ್ತದ ದಾಸ್ತಾನು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ.

ಮಾರ್ಚ್‌ ತಿಂಗಳ ಆರಂಭದಲ್ಲಿ ನಡೆಸಿದ ಒಂದೆರಡು ರಕ್ತದಾನ ಶಿಬಿರಗಳಿಂದ ಸಂಗ್ರಹಿಸಿದ ರಕ್ತದಲ್ಲಿ ಈಗ ಕೇವಲ 124 ಯೂನಿಟ್‌ ರಕ್ತ ಮಾತ್ರ ಜಿಲ್ಲಾ ರಕ್ತನಿಧಿ  ಕೇಂದ್ರದಲ್ಲಿ ದಾಸ್ತಾನು ಇದೆ. ಇಷ್ಟು ರಕ್ತ ಕೇವಲ ಒಂದು ವಾರದ ಬೇಡಿಕೆ ಈಡೇರಿಸಲಿದ್ದು, ಮುಂದಿನ ದಿನಗಳಲ್ಲಿ ರಕ್ತದ ಅಗತ್ಯ ಇರುವ ರೋಗಿಗಳು ರಕ್ತ ಸಿಗದೆ ತೊಂದರೆಗೊಳಗಾಗುವ ಭೀತಿ ಎದುರಾಗಿದೆ.

ರಕ್ತ ಯಾರಿಗೆ ಬಳಕೆ?: ಜಿಲ್ಲಾ ರಕ್ತ ವಿದಳನ ಘಟಕ ಸಂಗ್ರಹಿಸುವ ರಕ್ತದಲ್ಲಿ ಬಹುಪಾಲು ರಕ್ತ ಹೆರಿಗೆ, ಗರ್ಭಿಣಿಯರಿಗೆ, ಅತಿಯಾದ ರಕ್ತಹೀನತೆಯಿಂದ ಬಳಲುವವರಿಗೆ ಬಳಕೆಯಾಗುತ್ತದೆ. ಇನ್ನು ಸ್ವಲ್ಪ ಪ್ರಮಾಣದಲ್ಲಿ ಶಸ್ತ್ರಚಿಕಿತ್ಸೆ, ಥಲಸೇಮಿಯಾ (ಮಕ್ಕಳ ಕಾಯಿಲೆ), ಡಯಾಲಿಸಿಸ್‌, ಎಆರ್‌ಟಿ ರೋಗಿಗಳಿಗೆ ವಿತರಿಸಲಾಗುತ್ತದೆ. ಹೀಗೆ ಪ್ರತಿದಿನ ಅಂದಾಜು 10 ರಿಂದ 15 ಯೂನಿಟ್‌ ರಕ್ತ ಅಗತ್ಯವಿದೆ. ಈಗ ಉದ್ಭವಿಸುವ ರಕ್ತದ ಕೊರತೆ ಮುಂದಿನ ದಿನಗಳಲ್ಲಿ ಇಂಥ ರೋಗಿಗಳನ್ನು ಕಾಡುವ ಆತಂಕವಿದೆ. ಜಿಲ್ಲಾ ರಕ್ತ ವಿದಳನ ಘಟಕಕ್ಕೆ ಉಂಟಾಗುವ ರಕ್ತದ ಕೊರತೆ ನೀಗಿಸಲು ಜಿಲ್ಲಾಡಳಿತ ಈಗಲೇ ಎಚ್ಚೆತ್ತು ಪೂರಕ ಕ್ರಮ ಕೈಗೊಳ್ಳಬೇಕಾಗಿದೆ. ರಕ್ತದಾನಿಗಳು ಸಹ ಸ್ವಯಂಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ರಕ್ತನಿಧಿ ಕೇಂದ್ರಕ್ಕೆ ಭೇಟಿ ನೀಡಿ ರಕ್ತದಾನ ಮಾಡಬೇಕಾಗಿದೆ.

ರಕ್ತದಾನ ಶಿಬಿರಗಳನ್ನು ಬಂದ್‌ ಮಾಡಿರುವುದರಿಂದ ರಕ್ತದ ಕೊರತೆ ಉಲ್ಬಣಿಸಿದೆ. ಪ್ರಸ್ತುತ ರಕ್ತದ ಅಗತ್ಯವಿರುವ ರೋಗಿಗಳ ಪೋಷಕರು ಇಲ್ಲವೇ ಕುಟಂಬದವರ ಆಪ್ತಸಮಾಲೋಚನೆ ಮಾಡಿ ಅವರಿಂದಲೇ ಎರವಲು ರಕ್ತ ಪಡೆಯಲಾಗುತ್ತಿದೆ. ಆದರೆ, ಇದು ರಕ್ತದ ಬೇಡಿಕೆಯನ್ನು ಸಂಪೂರ್ಣವಾಗಿ ಈಡೇರಿಸುವುದಿಲ್ಲ. ಆದ್ದರಿಂದ ಆರೋಗ್ಯವಂತ ಯುವಕ-ಯುವತಿಯರು, ಸಂಘ-ಸಂಸ್ಥೆಯವರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಸಹಕಾ ನೀಡಬೇಕು.  –ಡಾ| ಬಸವರಾಜ ತಳವಾರ, ಅಧಿಕಾರಿ, ಜಿಲ್ಲಾ ರಕ್ತ ವಿದಳನ ಘಟಕ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.