ಫಲಿಸಿದ ಚೀನದ ಲಾಕ್ ಡೌನ್ ಅಸ್ತ್ರ: ಸಾಮಾನ್ಯ ಸ್ಥಿತಿಯತ್ತ ಚೀನ ಜನಜೀವನ


Team Udayavani, Mar 26, 2020, 1:11 PM IST

ಫಲಿಸಿದ ಚೀನದ ಲಾಕ್ ಡೌನ್ ಅಸ್ತ್ರ: ಸಾಮಾನ್ಯ ಸ್ಥಿತಿಯತ್ತ ಚೀನ ಜನಜೀವನ

ವುಹಾನ್: ಮಾರಣಾಂತಿಕ ಕೋವಿಡ್-19 ವೈರಸ್ ಆರಂಭವಾದ ಚೀನದ ವುಹಾನ್ ನಗರದಲ್ಲೀಗ ಸಾರ್ವಜನಿಕ ಸಾರಿಗೆ ಸೇವೆಗಳು ಮತ್ತೆ ಆರಂಭಗೊಳ್ಳುತ್ತಿವೆ. ಈ ಮೂಲಕ ಒಂಬತ್ತು ವಾರಗಳ ಲಾಕ್ ಡೌನ್ ಬಳಿಕ ಜನ ಜೀವನ ಯಥಾಸ್ಥಿತಿಗೆ ಬಂದಂತಾಗಿದೆ. ಜನರು ಎಂದಿನಂತೆ ತಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ರಸ್ತೆಗಳಿಯುತ್ತಿದ್ದಾರೆ. ಮಂಗಳವಾರದಿಂದ ಆರಂಭವಾಗುವಂತೆ ನೂರಕ್ಕೂ ಹೆಚ್ಚಿನ ಬಸ್ ರೂಟ್ ಗಳು ಪುನರಾರಂಭಗೊಂಡಿವೆ.

ತೆರೆದ ಅಂಗಡಿಗಳು
ಚೀನದ ಬಹುತೇಕ ನಗರಗಳು ತಮ್ಮ ಎಂದಿನ ಜನಜೀವನಕ್ಕೆ ತೆರೆದುಕೊಳ್ಳುತ್ತಿವೆ. ಬಿಕೋ ಎನ್ನುತ್ತಿದ್ದ ರಸ್ತೆಗಳಲ್ಲೀಗ ವಾಹನಗಳ ಸದ್ದು ಕೇಳಿಬರುತ್ತಿದೆ. ರೆಸ್ಟೋರೆಂಟ್ ಗಳು, ಶಾಪಿಂಗ್ ಮಾಲ್ ಗಳು ತೆರೆಯುತ್ತಿವೆ. ಬಹುತೇಕ ಮಾಲ್ ಗಳ ಪಾರ್ಕಿಂಗ್ ಏರಿಯಾಗಳು ವಾಹನಗಳಿಂದ ತುಂಬುತ್ತಿವೆ. ವಾಚ್ ಮನ್ ಗಳು ತಮ್ಮ ಕೆಲಸಗಳಿಗೆ ಹಿಂದಿರುಗುತ್ತಿದ್ದಾರೆ. ಮುಂಬರುವ ವಾರದಿಂದ ಶಾಲಾ ಕಾಲೇಜುಗಳು ಮತ್ತೆ ತೆರೆಯಲಿದ್ದು, ಈ ಕುರಿತಂತೆ ಶಾಲಾ ಕಾಲೇಜು ಆಡಳಿತ ಮಂಡಳಿಗಳು ಸಭೆ ಸೇರಿವೆ. ಅದರೆ ಜನರು ಮಾತ್ರ ಇನ್ನೂ ರಸ್ತೆಗಿಳಿಯಲು ಭಯಪಡುತ್ತಿದ್ದಾರೆ. ಪ್ರತಿದಿನ ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ, ಬಸ್ ಗಳಿಗೆ ಸ್ಯಾನಿಟೈಸರ್ ಗಳನ್ನು ಸಿಂಪಡಿಸಲಾಗುತ್ತಿದೆ.

ಸುರಕ್ಷೆಗೂ ಕ್ರಮ
ಪ್ರತಿ ಬಸ್ ಗಳಲ್ಲಿ ಡ್ರೈವರ್ ನೊಂದಿಗೆ ಒಬ್ಬ ಮೇಲ್ವೀಚಾರಕ ಇರಲಿದ್ದಾನೆ. ಬಸ್ ನಿಲ್ದಾಣಗಳಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸಿಯೇ ಅವರನ್ನು ಒಳಗೆ ಸೇರಿಸಿಕೊಳ್ಳಲಾಗುತ್ತಿದೆ. ಸೂಪರ್ ವೈಸರ್ ಅವರು ಪ್ರಯಾಣಿಕರ ಹೆಸರನ್ನು ನೋಂದಾಯಿಸಿಕೊಳ್ಳುತ್ತಿದ್ದು, ಸ್ಕ್ಯಾನ್ ಮಾಡುತ್ತಿದ್ದಾರೆ. ಟೆಂಪರೇಚರ್ ಟೆಸ್ಟ್ ನಲ್ಲಿ ಪಾಸ್ ಆದವರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶ ನೀಡಲಾಗುತ್ತದೆ.  ಇಂತಹ ಸಂದರ್ಭಗಳಲ್ಲಿ ಯಾರಲ್ಲಾದರೂ ರೋಗ ಲಕ್ಷಣಗಳು ಕಂಡು ಬಂದರೆ ತುರ್ತು ಸೇವೆಯ ವಾಹನಗಳ ಮೂಲಕ ಆಸ್ಪತ್ರೆಗೆ ಸೇರಿಸಿಕೊಳ್ಳಲಾಗುತ್ತಿದೆ. ಪ್ರತಿ ಆಂಬುಲೆನ್ಸ್ ಗಳಲ್ಲಿ ಡಾಕ್ಟರ್ಸ್, ವಂಟಿಲೇಟರ್ ಅನ್ನು ಒದಗಿಸಲಾಗಿದೆ. ಪ್ರತಿ ಬಸ್ ನಿಲ್ದಾಣಗಳಲ್ಲಿ ಆಂಬುಲೆನ್ಸ್ ಗಳು ಇರಲಿದೆ. ರಸ್ತೆ ಬಳಸುವವರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಅಲ್ಲಿನ ಆರೋಗ್ಯ ಇಲಾಖೆ ಸೂಚಿಸಿದೆ.  ಪ್ರಯಾಣಿಕರು ಬಸ್ ಹತ್ತುವ ಸಂದರ್ಭದಲ್ಲೂ ಮಾಸ್ಕ್ ಬಳಸುವುದು ಕಡ್ಡಾಯವಾಗಿದೆ.

ಹಿರಿಯ ನಾಗರಿಕರು ರಸ್ತೆಗಿಳಿಯುವಂತಿಲ್ಲ
ಕೋವಿಡ್-19 ವೈರಸ್ ಹೆಚ್ಚಾಗಿ ಹಿರಿಯ ನಾಗರಿರಲ್ಲಿ ಬೇಗನೆ ಕಾಣಿಸಿಕೊಳ್ಳುವ ಕಾರಣ ಅಂತಹವರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈ ಕಾರಣಕ್ಕಾಗಿ 65 ವರ್ಷ ಮೇಲ್ಪಟ್ಟವರು ಯಾವುದೇ ಕಾರಣಕ್ಕೆ ರಸ್ತೆಗಿಳಿಯದಂತೆ ತಾಕೀತು ಮಾಡಲಾಗಿದೆ. ಯಾರಾದರೂ ಪೊಲೀಸರ ಕಣ್ತಪ್ಪಿಸಿ ಸಾರ್ವಜಿಕ ಸ್ಥಳಗಳಿಗೆ ಇಳಿದರೆ ಅವರನ್ನು ಬಂಧನಕ್ಕೆ ಒಳಪಡಿಸಲಾಗುತ್ತಿದೆ. ಇನ್ನು ಸಾರ್ವಜನಿಕ ಬಸ್ ಗಳಲ್ಲೂ ಅವರು ಪ್ರಯಾಣಿಸುವಂತಿಲ್ಲ.

ನಗರಾದ್ಯಂತ ಕೊವಿಡ್-19 ವೈರಸ್ ವ್ಯಾಪಕವಾಗಿ ಹಬ್ಬಿದ ಪರಿಣಾಮ ಜನವರಿ ತೃತೀಯ ವಾರದ ಬಳಿಕ ವುಹಾನ್ ನಗರವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗಿತ್ತು. ಎಲ್ಲಾ ಜನಜೀವನ ಸ್ತಬ್ಧವಾಗಿದ್ದವು. ಇದರ ಪರಿಣಾಮವಾಗಿ ಕೊರೊನಾ ಹರಡುವಿಕೆ ಕಡಿಮೆಯಾಗಿದ್ದವು. ವೈರಸ್ ನಿಂದ ರಕ್ಷಿಸಿಕೊಳ್ಳಲು ಇದೇ ಒಂದು ಮಾರ್ಗವಾಗಿದ್ದ, ಸದ್ಯ ಜಗತ್ತಿನಾದ್ಯಂತ ಲಾಕ್ ಡೌನ್ ಪರಿಸ್ಥಿತಿ ಇದೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.