ಅಂಗಡಿಗಳಲ್ಲಿ ರಶ್‌ ಬೇಡ: ಸಾಮಾಜಿಕ ಅಂತರ ಇರಲಿ

ಕೋವಿಡ್‌ 19 ವೈರಸ್‌ ಹಿನ್ನೆಲೆ

Team Udayavani, Mar 27, 2020, 5:56 AM IST

ಅಂಗಡಿಗಳಲ್ಲಿ ರಶ್‌ ಬೇಡ: ಸಾಮಾಜಿಕ ಅಂತರ ಇರಲಿ

ಉಡುಪಿ, ಕುಂದಾಪುರ,ಕಾರ್ಕಳ: ಕೋವಿಡ್‌ 19 ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಅಂಗಡಿಗಳಲ್ಲಿ ರಶ್‌ ಮಾಡಬಾರದು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಜನರಲ್ಲಿ ಈಗಾಗಲೇ ಸಾಕಷ್ಟು ಜಾಗೃತಿ ಮೂಡಿಸಿದ ಪರಿಣಾಮ ಅಲ್ಲಲ್ಲಿ ರಶ್‌ ತಪ್ಪಿಸಲು ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಆದರೆ ಕೆಲವು ಅಂಗಡಿಗಳಲ್ಲಿ ಇಷ್ಟರ ನಡುವೆಯೂ ರಶ್‌ ಇರುವುದು ಕಂಡು ಬಂದಿದೆ.

ಅಂತರ ಕಾಯ್ದುಕೊಂಡ ಗ್ರಾಹಕರು
ಉಡುಪಿ, ಕುಂದಾಪುರ, ಕಾರ್ಕಳ ಸಹಿತ ಜಿಲ್ಲೆಯ ಕೆಲವು ದಿನಸಿ, ತರಕಾರಿ ಅಂಗಡಿಗಳಲ್ಲಿ ಗ್ರಾಹಕರು ದಿನಬಳಕೆಯ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುನ್ನೆ ಚ್ಚರಿಕೆ ಕ್ರಮವನ್ನು ಪಾಲಿಸುತ್ತಿರುವ ದೃಶ್ಯ ಕಂಡು ಬಂತು.

ಗುಂಪು ಕಟ್ಟಿ ನಿಲ್ಲುವುದನ್ನು ತಪ್ಪಿಸಲು ಹೆಚ್ಚಿನ ಅಂಗಡಿಗಳ ಎದುರು ರಸ್ತೆಯಲ್ಲಿ ವೃತ್ತಗಳನ್ನು ರಚಿಸಿ ಅಥವಾ ಬಾಕ್ಸ್‌ಗಳನ್ನು ಮಾಡಿ ಗ್ರಾಹಕರು ಒಬ್ಬರ ಅನಂತರ ಮತ್ತೂಬ್ಬರು ಬಂದು ಖರೀದಿಸುವಂತೆ ವ್ಯವಸ್ಥೆ ಮಾಡಲಾಗಿದೆ.

ಉಡುಪಿ- ಮಣಿಪಾಲ
ಉಡುಪಿ-ಮಣಿಪಾಲ ಸಹಿತ ವಿವಿಧ ಮೆಡಿಕಲ್‌ ಶಾಪ್‌ಗ್ಳಲ್ಲೂ ಇದೇ ರೀತಿಯ ಮಾರ್ಕಿಂಗ್‌ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿದೆ. ಇದರಿಂದಾಗಿ ಖರೀದಿಗೆ ಬಂದವರ ಸಾಲು ಕಂಡರೂ ರಶ್‌ ಆಗಲಿಲ್ಲ.

ಮಾಲಕರಿಗೆ ಸೂಚನೆ
ಪ್ರಧಾನಿ ನರೇಂದ್ರ ಮೋದಿಯ ಅವರು 21 ದಿನ ಲಾಕ್‌ ಡೌನ್‌ ಫೋಷಿಸಿದ ಬಳಿಕ ಅಗತ್ಯ ವಸ್ತುಗಳು ಸಿಗದೆ ಹೋಗಬಹುದೆಂಬ ಭಯದಲ್ಲಿ ಸಾಧ್ಯವಾದಷ್ಟು ವಸ್ತುಗಳನ್ನು ಖರೀದಿಸಲು ಜನರು ಮುಗಿಬೀಳುವುದು ಕಂಡು ಬಂದಿದೆ. ಈ ರೀತಿ ದಿನಸಿ ಅಂಗಡಿಗಳಲ್ಲಿ ಗುಂಪು ಸೇರುವುದನ್ನು ನಿಲ್ಲಿಸುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆ ಅಂಗಡಿ ಮಾಲಕರಿಗೆ ಸ್ಪಷ್ಟವಾಗಿ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಅದರಂತೆ ಮಾಲಕರು ಕಾರ್ಯಪ್ರವೃತ್ತರಾಗುತ್ತಿದ್ದಾರೆ.

ವಾಹನಗಳ ಮೂಲಕ ಘೋಷಣೆ
ಜನ ಮನೆಯಿಂದ ಅಗತ್ಯ ಸಂದರ್ಭದಲ್ಲಿ ಮಾತ್ರ ಹೊರ ಬರುವಂತೆ, ಜನರ ನಡುವೆ 6 ಅಡಿ ಅಂತರ ಮತ್ತು ದಿನಸಿ ಅಂಗಡಿಯಲ್ಲೂ ಆರು ಅಡಿ ಅಂತರ ಕಾಯ್ದುಕೊಳ್ಳುವ ಬಗ್ಗೆ ಮೈಕ್‌ ಮೂಲಕ ಘೋಷಣೆ ಮಾಡಿ ಜಾಗೃತಿ ಮೂಡಿಸಲಾಗುತ್ತಿದೆ. ಉಡುಪಿ, ಮಣಿಪಾಲ ಪೇಟೆ ಬಿಟ್ಟು ಹೈವೇ ಭಾಗದಲ್ಲಿನ ಕೆಲವು ದಿನಸಿ ಅಂಗಡಿಗಳು ಮುಚ್ಚಿದ್ದು ಜನ ಪೇಟೆಗೆ ಹೋಗಿ ಅಗತ್ಯ ವಸ್ತು ಖರೀದಿಸುವಂತಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.