ದ.ಕ.: ಹಸುಳೆಯಲ್ಲಿ ಕೋವಿಡ್ ಸೋಂಕು ; ಸಜಿಪನಡು ಗ್ರಾಮಕ್ಕೆ ದಿಗ್ಬಂಧನ
Team Udayavani, Mar 27, 2020, 4:13 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಂಟ್ವಾಳ: ಜ್ವರ ಮತ್ತು ತೀವ್ರ ಸ್ವರೂಪದ ಉಸಿರಾಟದ ತೊಂದರೆಯಿಂದ ಮಾರ್ಚ್ 23ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ 10 ತಿಂಗಳ ಮಗುವಿಗೆ ಇದೀಗ ಕೋವಿಡ್ 19 ವೈರಸ್ ಸೋಂಕು ತಗಲಿರುವುದು ಮಗುವಿನ ಗಂಟಲು ಸ್ರಾವ ಪರೀಕ್ಷಾ ವರದಿಯಿಂದ ಇಂದು ಸಾಬೀತುಗೊಂಡಿದೆ.
ಈ ಹಿನ್ನಲೆಯಲ್ಲಿ ಕೊವಿಡ್ 19 ಸೋಂಕು ಮಗುವಿನ ಪೋಷಕರು ವಾಸವಿದ್ದ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇದೀಗ ಪೂರ್ತಿ ಗ್ರಾಮವನ್ನು ಕ್ವಾರೆಂಟೈನ್ ಮಾಡಲಾಗಿದೆ. ಹೀಗಾಗಿ ಈ ಗ್ರಾಮದಿಂದ ಯಾರು ಹೊರ ಹೋಗದಂತೆ ಮತ್ತು ಈ ಗ್ರಾಮಕ್ಕೆ ಯಾರೂ ಪ್ರವೇಶಿಸದಂತೆ ಜಿಲ್ಲಾಡಳಿತವು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ಇದೀಗ ಮಗುವಿನ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಮತ್ತು ಈ ಮಾರಣಾಂತಿಕ ಸೋಂಕು ಗ್ರಾಮದಲ್ಲಿ ಇತರರಿಗೆ ಹರಡದಂತೆ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯು ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಮಾರ್ಚ್ 24ರಂದು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು ಮತ್ತು ಆ ವರದಿ ಮಾರ್ಚ್ 26ರಂದು ಕೈಸೇರಿದ ಸಂದರ್ಭದಲ್ಲಿ ಈ ಮಗುವಿನಲ್ಲಿ ಕೋವಿಡ್ 19 ಸೋಂಕು ಪಾಸಿಟಿವ್ ಆಗಿರುವುದು ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ