ಆಹಾರಕ್ಕಾಗಿ ಅಲೆಮಾರಿ ಜನಾಂಗದ ಅಲೆದಾಟ
Team Udayavani, Mar 28, 2020, 2:16 PM IST
ಹರಪನಹಳ್ಳಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ದೇಶವೇ ಲಾಕ್ಡೌನ್ ಆಗಿರುವುದರಿಂದ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ವಾಸವಾಗಿರುವ ಅಲೆಮಾರಿ ಶಿಂದೋಳ್ ಸಮುದಾಯದ ಸುಮಾರು 35 ಕುಟುಂಬಗಳು ಆಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.
ಕಳೆದ 30 ವರ್ಷಗಳಿಂದ ಹಲುವಾಗಲು ಗ್ರಾಮದ ಹೊರವಲಯದಲ್ಲಿ ಜೋಪಡಿ ಹಾಕಿಕೊಂಡು ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿರುವ ಶಿಂದೋಳ್ ಸಮುದಾಯದವರು ಪ್ರತಿನಿತ್ಯದುರುಗಮ್ಮ, ಸುಂಕಲಮ್ಮ ಎಂಬ ದೇವರು ಹೊತ್ತು ಬರುವ ಪುಡಿಗಾಸಿನಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಕೋವಿಡ್ 19 ಅಟ್ಟಹಾಸ ಮೆರೆಯುತ್ತಿರುವುದರಿಂದ ಕಳೆದ ಒಂದು ವಾರದಿಂದ ಗ್ರಾಮದೊಳಗೆ ಇವರನ್ನು ಜನರು ಬಿಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಆಹಾರವಿಲ್ಲದೇ ಜೀವನ ನಡೆಸುವುದು ಕಷ್ಟವಾಗಿದೆ. ಜೋಪಡಿಗಳಿಂದ ಹೊರಬರುವಂತಿಲ್ಲ, ಗ್ರಾಮದಲ್ಲಿ ಕಾಲಿಡುವಂತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆಹಾರ ಧಾನ್ಯ ಮತ್ತು ದಿನಬಳಕೆ ವಸ್ತುಗಳಿಲ್ಲದೇ ಹಸಿವಿನಿಂದ ನರಳುವಂತಾಗಿದೆ. ಚಿಕ್ಕ ಚಿಕ್ಕ ಮಕ್ಕಳು ಹಸಿವಿನಿಂದ ನರಳುವಂತಹ ಪರಿಸ್ಥಿತಿ ಎದುರಾಗಿದೆ.
ಹೀಗಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಅಂಗಲಾಚಿ ಬೇಡುತ್ತಿದ್ದಾರೆ. ಅಲೆಮಾರಿಗಳ ಕಷ್ಟ ಅರಿತು ಕೂಡಲೇ ತಾಲೂಕು ಆಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳು ದಿನಬಳಕೆ ವಸ್ತುಗಳು ಮತ್ತು ಆಹಾರ ಧಾನ್ಯ ವಿತರಿಸಬೇಕು ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ದಾವಣಗೆರೆ ಜಿಲ್ಲಾಧ್ಯಕ್ಷ ವಿ. ಸಣ್ಣಅಜ್ಜಯ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಅಲೆಮಾರಿಗಳು, ನಿರ್ಗತಿಕರು, ಭಿಕ್ಷುಕರು ಹಸಿವಿನಿಂದ ನರಳದಂತೆ ಅವರಿಗೆ ಆಹಾರ ಒದಗಿಸಲು ತಂಡ ರಚನೆ ಮಾಡಲಾಗಿದೆ. ತಂಡದಲ್ಲಿರುವಸಿಡಿಪಿಒ ಅವರಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇವೆ. ವರದಿ ಬಂದ ನಂತರ ಆಹಾರ ಸಾಮಗ್ರಿ ಪೂರೈಕೆ ಮಾಡಲಾಗುವುದು.-ಡಾ| ನಾಗವೇಣಿ, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಎಸಿ ಗ್ಯಾಸ್ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ