ಗೃಹಬಂಧನದಲ್ಲಿ ಕೆಎಸ್ಸಾರ್ಟಿಸಿ ಚಾಲನ ಸಿಬಂದಿ


Team Udayavani, Mar 29, 2020, 5:58 AM IST

ಗೃಹಬಂಧನದಲ್ಲಿ ಕೆಎಸ್ಸಾರ್ಟಿಸಿ ಚಾಲನ ಸಿಬಂದಿ

ಬೆಂಗಳೂರು: ಅರಿವಿಲ್ಲದೆ ಆರೆಂಟು ಗಂಟೆಗಳ ಕಾಲ ಕೋವಿಡ್‌ 19 ವೈರಸ್‌ ಸೋಂಕಿತರೊಂದಿಗೆ ಪ್ರಯಾಣ ಬೆಳೆಸಿದ ಸುಮಾರು 22 ಚಾಲನ ಸಿಬಂದಿ ಗೃಹ ಬಂಧನಕ್ಕೆ ಗುರಿಯಾಗಿದ್ದಾರೆ. ಬೆನ್ನಲ್ಲೇ ಅವರೊಂದಿಗೆ ಆಕಸ್ಮಿಕವಾಗಿ ಸಂಪರ್ಕ ಹೊಂದಿದ್ದ ನೂರಾರು ಮಂದಿ ಈಗ ಬೆಂಕಿ ಮೇಲೆ ನಿಂತಂತೆ ಚಡಪಡಿಸುತ್ತಿದ್ದಾರೆ.

ಕೆಎಸ್‌ಆರ್‌ಟಿಸಿ 18 ಮತ್ತು ಬಿಎಂಟಿಸಿಯ 4 ಚಾಲನ ಸಿಬಂದಿ ದಾರಿಯುದ್ದಕ್ಕೂ ನಿಲ್ದಾಣ ಮತ್ತು ವಿಭಾಗೀಯ ನಿಯಂತ್ರಕರು, ಸಹೋದ್ಯೋಗಿ ಚಾಲಕ ಮತ್ತ ನಿರ್ವಾಹಕರ ಕೈಕುಲುಕಿದ್ದಾರೆ. ದಾರಿ ಮಧ್ಯೆ ಬಸ್‌ ನಿಲ್ಲಿಸಿ, ಚಹಾ-ಕಾಫಿ ಹೀರಿದ್ದಾರೆ. ಹೀಗೆ ಆಕಸ್ಮಿಕವಾಗಿ ಸಂಪರ್ಕಕ್ಕೆ ಬಂದವರು ನೂರಾರು ಮಂದಿ ಇದ್ದಾರೆ. ಅವರೆಲ್ಲರ ಭವಿಷ್ಯವನ್ನು “ಗೃಹ ಬಂಧನ’ದಲ್ಲಿರುವ ಈ 22 ಚಾಲನ ಸಿಬಂದಿಯ ಆರೋಗ್ಯ ನಿರ್ಧರಿಸಲಿದೆ.

ಇಲ್ಲಿ ಸಾಮಾನ್ಯವಾಗಿ ಚಾಲಕನಿಗಿಂತ ನಿರ್ವಾಹಕರು ಪ್ರಯಾಣಿಕರೊಂದಿಗೆ ಹೆಚ್ಚು ಸಂಪರ್ಕದಲ್ಲಿ ಇರುತ್ತಾರೆ. ನಿಯಂತ್ರಕರ ಬಳಿ ಎಂಟ್ರಿ ಮಾಡಿಸಿಕೊಳ್ಳಲು ಮತ್ತಿತರ ಕಾರಣಗಳಿಗೆ ಹೋಗುವವರೂ ಇದೇ ಸಿಬಂದಿ. ಈ ಹಿನ್ನೆಲೆಯಲ್ಲಿ ಸೋಂಕಿನ ಸಾಧ್ಯತೆ ನಿರ್ವಾಹಕರಿಂದ ಹೆಚ್ಚಿರುತ್ತದೆ. ಆದರೆ ಸೋಂಕಿತ ವ್ಯಕ್ತಿ ಪ್ರಯಾಣ ಮಾಡಿದ ವಾರದ ಅನಂತರ ಇದು ಗೊತ್ತಾಗಿದೆ. ಹಾಗೊಂದು ವೇಳೆ ಸೋಂಕು ಲಕ್ಷಣಗಳು ಕಂಡುಬಂದರೆ ಉಳಿದವರ ಪತ್ತೆ ಸವಾಲಾಗಲಿದೆ. ಆದ್ದರಿಂದ ಸ್ವಯಂ ಜಾಗೃತಿ ಹೆಚ್ಚು ಸೂಕ್ತ ಎಂದು ಅಧಿಕಾರಿಗಳು ತಿಳಿಸುತ್ತಾರೆ.

ಸದ್ಯಕ್ಕೆ ನಿರಾಳ
ಇನ್ನು ಈಗಾಗಲೇ 22 ಕುಟುಂಬಗಳ ಪೈಕಿ ಬಹುತೇಕರು ಎಂಟು-ಹತ್ತು ದಿನ ಕ್ವಾರಂಟೈನ್‌ನಲ್ಲಿ ಕಳೆದಿದ್ದು, ನಿಗಮ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಗಳ ಪ್ರಕಾರ ಯಾವುದೇ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಹಾಗಾಗಿ ಸದ್ಯಕ್ಕೆ ಉಳಿದವರೂ ನಿರಾಳ.

ಅಂದಹಾಗೆ ಬೆಂಗಳೂರಿನಿಂದ ಮಡಿಕೇರಿ, ಉಪ್ಪಿನಂಗಡಿ, ಶಿರಾ, ದಾವಣಗೆರೆ, ಗೋವಾ- ಬೆಟಗೇರಿ (ಗದಗ ಜಿಲ್ಲೆ), ಮೈಸೂರು- ನಂಜನಗೂಡು ಮಧ್ಯೆ ಸಂಚರಿಸುವ ನಾಲ್ಕು ಬಸ್‌ಗಳು, ಬಿಎಂಟಿಸಿಯ ಎರಡು ಬಸ್‌ಗಳ 22 ಚಾಲನ ಸಿಬಂದಿ ಮೇಲೆ ನಿಗಾ ಇಡಲಾಗಿದೆ.
ಪ್ರಾಥಮಿಕ ತಪಾಸಣೆಯಲ್ಲೇ ಈ ಚಾಲನ ಸಿಬಂದಿಗೆ ಯಾವುದೇ ಸಮಸ್ಯೆ ಇಲ್ಲದಿರು
ವುದು ದೃಢಪಟ್ಟಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಕ್ವಾರಂಟೈನ್‌ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಎಲ್ಲರೂ ಉಳಿದವರಂತೆ ಓಡಾಡಲಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮ
ಎಲ್ಲ ಚಾಲನ ಸಿಬಂದಿ ಆರೋಗ್ಯವಾಗಿದ್ದಾರೆ. ಹಾಗಾಗಿ ಉಳಿದವರು ಆತಂಕಪಡುವ ಅಗತ್ಯವಿಲ್ಲ. ಆದಾಗ್ಯೂ ಅವರು ಭೇಟಿಯಾದ ನಿಯಂತ್ರಕರಿಗೆ ಈಗಾಗಲೇ ಸ್ವಯಂಪ್ರೇರಿತವಾಗಿ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
– ಶಿವಯೋಗಿ ಕಳಸದ, ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಆರ್‌ಟಿಸಿ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.